ರೈಲ್ವೇ ಇಲಾಖೆ ಹುದ್ದೆಗಳ ರದ್ಧತಿ ವಾಪಸಾತಿಗೆ ಆಗ್ರಹ; ಪ್ರತಿಭಟನೆ
ರಾಯಚೂರು, ಜುಲೈ 15: ದೇಶದೆಲ್ಲೆಡೆ ನಿರುದ್ಯೋಗ ಭೀಕರವಾಗಿ ಹೆಚ್ಚುತ್ತಿದೆ. ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಹೆಚ್ಚಿದೆ ಇಂತಹ ಸಂದರ್ಭದಲ್ಲಿ ರೈಲ್ವೇ ಇಲಾಖೆಯಲ್ಲಿ 90,000 ಹುದ್ದೆಗಳನ್ನು ರದ್ದುಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದ್ದನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ರೈಲ್ವೇ ಇಲಾಖೆಯಲ್ಲಿ 90,000 ಹುದ್ದೆಗಳನ್ನು ರದ್ದುಪಡಿಸುವ ನಿರ್ಧಾರ ತಕ್ಷಣವೇ ಹಿಂಪಡೆಯಬೇಕು. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಹಾಗೂ ರೈಲ್ವೇ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಸಮಿತಿಯ ಕಾರ್ಯಕರ್ತರು ಜಿಲ್ಲಾ ರೈಲು ನಿಲ್ದಾಣಗಳ ಬಳಿ ಪ್ರತಿಭಟನಾ ದಿನವನ್ನು ಆಚರಿಸಿ, ರೈಲ್ವೇ ಸಚಿವರಿಗೆ ಬರೆದ ಮನವಿಯನ್ನು ಆಯಾ ಸ್ಟೇಷನ್ ಮಾಸ್ಟರ್ ಅವರಿಗೆ ಸಲ್ಲಿಸಲಾಗಿದೆ.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದ್ದು, ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿದೆ. ತಾಂತ್ರಿಕ ಶಿಕ್ಷಣ ಪಡೆದು ರೈಲ್ವೇಗೆ ತಯಾರಿ ನಡೆಸುತ್ತಿರುವ ಈ ವಿದ್ಯಾವಂತ ನಿರುದ್ಯೋಗಿ ಯುವಕರ ಪಾಲಿಗೆ ಕೇಂದ್ರ ಸರಕಾರದ ಈ ನಿರ್ಧಾರ ದೊಡ್ಡ ಹೊಡೆತ ನೀಡಿದೆ.

ಹಿಂದಿನ ವರ್ಷಗಳಲ್ಲಿಯೂ ಸರಕಾರ ರೈಲ್ವೇ ನೌಕರರ ಸಂಖ್ಯೆಯನ್ನು ಕಡಿತಗೊಳಿಸಿದೆ . ಇದಲ್ಲದೇ ರೈಲ್ವೆ ಇಲಾಖೆ ಪ್ರತಿ ವರ್ಷ ಸರಕಾರಕ್ಕೆ ಆದಾಯವನ್ನು ನೀಡುತ್ತಿದೆ, ಆದರೆ ಸರಕಾರ ದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಲಾಭ ಮಾಡಿಕೊಡಲು ರೈಲ್ವೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದಾಗಿ ಬಡವರಿಗೆ ರೈಲಿನಲ್ಲಿ ಪ್ರಯಾಣ ಮಾಡುವುದು ತುಂಬಾ ದುಬಾರಿಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗೀಕರಣವು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ರೈಲ್ವೇ ಇಲಾಖೆಯಲ್ಲಿ 90,000 ಹುದ್ದೆಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ತಕ್ಷಣ ನೇಮಕಾತಿ ಮಾಡಿ ಎಂದು ಒತ್ತಾಯಿಸಲಾಗಿದೆ.

ರೈಲ್ವೇ ಖಾಸಗೀಕರಣ ನಿಲ್ಲಿಸಿ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಅಳವಡಿಸಿಕೊಂಡು ನಿಗದಿತ ಸಮಯದೊಳಗೆ ಮತ್ತು ನ್ಯಾಯೋಚಿತ ರೀತಿಯಲ್ಲಿ ನಡೆಸಬೇಕು ಎಂಬ ಬೇಡಿಕೆಗಳಿರುವ ಹಕ್ಕೋತ್ತಾಯ ಪತ್ರವನ್ನು ಜಿಲ್ಲಾ ಕೇಂದ್ರಗಳ ರೈಲು ನಿಲ್ದಾಣಗಳ ಸ್ಟೇಷನ್ ಮಾಸ್ಟರ್ ಮೂಲಕ ಕೇಂದ್ರ ರೈಲ್ವೇ ಸಚಿವರಿಗೆ ಸಲ್ಲಿಸಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications