ಕರ್ನಾಟಕದಲ್ಲಿ ನಾವು ಸೋಲುವುದಿಲ್ಲ : ಅಮಿತ್ ಶಾ
ರಾಯಚೂರು, ಫೆಬ್ರವರಿ 14 : 'ಹಿಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಸೋತಿದ್ದರೂ ಈ ಚುನಾವಣೆಯಲ್ಲಿ ನಾವು ಸೋಲುವುದಿಲ್ಲ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದರು.
ರಾಯಚೂರಿನಲ್ಲಿ ಬಳ್ಳಾರಿ ಶಕ್ತಿ ಕೇಂದ್ರದ ಸಮಾವೇಶ ಉದ್ದೇಶಿಸಿ ಗುರುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಾತನಾಡಿದರು. 'ರಾಯಚೂರಿಗೆ ಆಗಮಿಸುವುದು ತಡವಾಗಿದ್ದರೂ ಇಷ್ಟು ಜನ ಬಂದಿದ್ದೀರಿ ತಡವಾಗಿ ಬಂದಿದ್ದಕ್ಕೆ ಕ್ಷಮೆ ಇರಲಿ' ಎಂದು ಭಾಷಣ ಆರಂಭಿಸಿದರು.
'ಬಿಜೆಪಿ ಬೇರೆ ಪಕ್ಷಕ್ಕಿಂತ ಭಿನ್ನವಾಗಿ ಕೆಲಸ ಮಾಡುತ್ತದೆ.ಬಿಜೆಪಿ ಗೆಲುವಿಗೆ ಬೂತ್ ಮಟ್ಟದ ಕಾರ್ಯಕರ್ತರು ಅವಶ್ಯಕ. ಕಾರ್ಯಕರ್ತರು ಕೆಲಸ ಮಾಡಿದರೆ ನಾವು ವಿಜಯ ಸಾಧಿಸುತ್ತೇವೆ' ಎಂದು ಅಮಿತ್ ಶಾ ಕಾರ್ಯಕರ್ತರನ್ನು ಹೊಗಳಿದರು.
'ಹಿಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಸೋತಿದ್ದರೂ,ಈ ಚುನಾವಣೆಯಲ್ಲಿ ನಾವು ಸೋಲುವುದಿಲ್ಲ. ದೇಶದ ಜನರು ಮುಂದಿನ ಪ್ರಧಾನಿ ನರೇಂದ್ರ ಮೋದಿ ಆಗುತ್ತಾರೆ ಎಂದು ಈಗಲೇ ಹೇಳುತ್ತಿದ್ದಾರೆ' ಎಂದರು....

ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು?
'ಚುನಾವಣೆಗಾಗಿ ನೀವು ಮಹಾಘಟ್ ಬಂಧನ್ ಮಾಡಿಕೊಳ್ಳುತ್ತಿದ್ದೀರಿ. ಭಯ್ಯಾ ಘಟ್ ಬಂಧನ್ ಪ್ರಧಾನಮಂತ್ರಿ ಯಾರು? ಎಂದು ಪ್ರಶ್ನಿಸಿದರು.
ಸೋಮುವಾರ ಮಾಯಾವತಿ, ಮಂಗಳವಾರ ಮಮತಾ ದೀದಿ, ಬುಧವಾರ ದೇವೆಗೌಡ, ಗುರುವಾರ ಚಂದ್ರಬಾಬು ನಾಯ್ಡು ಪ್ರಧಾನಿಯಾಗಿರುತ್ತಾರೆ' ಎಂದು ಅಮಿತ್ ಶಾ ಲೇವಡಿ ಮಾಡಿದರು.

ಸೋನಿಯಾ ಕೃಪೆಯಿಂದ ಮುಖ್ಯಮಂತ್ರಿ
'ಕರ್ನಾಟಕದಲ್ಲಿ ಬಹುದೊಡ್ಡ ಪಕ್ಷ ವಿರೋಧ ಪಕ್ಷವಾಗಿದೆ.ಅಧಿಕಾರಿದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ ನಾನು ಸೋನಿಯಾ ಕೃಪೆಯಿಂದ ಮುಖ್ಯಮಂತ್ರಿಯಾಗಿದ್ದೇನೆ ಎಂದು. ನಾನು ಜನರ ಪ್ರತಿನಿಧಿ ಅಲ್ಲ ಎಂದು ಹೇಳುವ ಮೂಲಕ ಅವರು ಜನರಿಗೆ ಅವಮಾನ ಮಾಡುತ್ತಿದ್ದಾರೆ' ಎಂದು ಅಮಿತ್ ಶಾ ಹೇಳಿದರು.

ಬಿಜೆಪಿ ಬಹುಮತದಿಂದ ಗೆಲ್ಲಲಿದೆ
'ಚುನಾವಣೆಯಲ್ಲಿ ಮೋದಿ ಬಹುಮತದಿಂದ ಗೆಲ್ಲಲಿದ್ದಾರೆ. 50 ವರ್ಷದಲ್ಲಿ ಕಾಂಗ್ರೆಸ್ 12 ಅಡುಗೆ ಅನಿಲ ನೀಡುತ್ತಿದ್ದರು.ಆದರೆ, ಮೋದಿ ಬಡವರಿಗೆ ಸಿಲಿಂಡರ್ ನೀಡುತ್ತಿದ್ದಾರೆ. 8 ಕೋಟಿ ಬಡವರಿಗೆ ಶೌಚಾಲಯ ನಿರ್ಮಿಸಿ ಬಡವರಿಗೆ ಮುಜಗರವಾಗುವುದನ್ನು ತಪ್ಪಿಸಿದ್ದಾರೆ' ಎಂದು ಅಮಿತ್ ಶಾ ಹೇಳಿದರು.

ರಾಮಮಂದಿರ ನಿರ್ಮಿಸುತ್ತೇವೆ
'ನರೇಂದ್ರ ಮೋದಿ ಸರಕಾರದಿಂದಾಗಿ ದೇಶದ ವಿಕಾಸ ಮಾಡುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ದೇಶ ಸುರಕ್ಷಿತವಾಗಿದೆ. ರಾಮ ಮಂದಿರ ನಿರ್ಮಿಸುತ್ತೇವೆ, ಮಂದಿರ ನಿರ್ಮಾಣ ಮಾಡಲು
ಕಾಂಗ್ರೆಸ್ ವಿರೋಧಿಸುತ್ತಿದೆ' ಎಂದರು.

ಕುಮಾರಸ್ವಾಮಿ ಲೂಟಿ ಮಾಡುತ್ತಿದ್ದಾರೆ
'ಕರ್ನಾಟಕದ ಮುಖ್ಯಮಂತ್ರಿಗಳು ನಾನು ಕಾಂಗ್ರೆಸ್ಗೆ ಉತ್ತರ ಹೇಳುತ್ತೀನಿ ಎನ್ನುತ್ತಾರೆ. ಬಿಜೆಪಿಯವರಾದ ನಾವು ಜನರಿಗೆ ಉತ್ತರ ಹೇಳುತ್ತೇವೆ. ಕುಮಾರಸ್ವಾಮಿ ಲೂಟಿ ಮಾಡುತ್ತಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನುಗಳಿಸಲು ಮತ ನೀಡಿ' ಎಂದು ಮನವಿ ಮಾಡಿದರು.
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ










Click it and Unblock the Notifications