ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಯಾರೂ ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ
ರಾಯಚೂರು, ಜನವರಿ, 06: ಹಳೆ ಮೈಸೂರು ಭಾಗದಲ್ಲಿ ಯಾವ ನಾಯಕರು ಭೇಟಿ ಬಂದು ಹೋದರೂ ಎಚ್.ಡಿ. ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿಯವರನ್ನು, ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಯಚೂರಿನಲ್ಲಿ ಹೇಳಿದರು.
ಸಿಂಧನೂರು ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಂಧನೂರು ನಗರಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹಳೆ ಮೈಸೂರು ಭಾಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಈ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ವರ್ಚಸ್ಸು ಇದೆ. ಅಲ್ಲಿಗೆ ಯಾರು ಬಂದು ಹೋದರು ಸಹ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿಯವರನ್ನು, ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ಸವಾಲು ಹಾಕಿದರು.
ಎರಡು ಪಕ್ಷಗಳ ಬಗ್ಗೆ ನಾವು ಮಾತನಾಡಲ್ಲ
ನಾನು ಪ್ರಪ್ರಥಮ ಬಾರಿಗೆ ಸಿಂಧನೂರು ಪಟ್ಟಣಕ್ಕೆ ಭೇಟಿ ನೀಡಿದ್ದೇನೆ. ಅತ್ಯಂತ ಉತ್ಸಾಹಕತೆಯಿಂದ ಸಿಂಧನೂರು ಪಟ್ಟಣದಲ್ಲಿ ಜನರು, ಅಭಿಮಾನಿಗಳು ಕಾರ್ಯಕರ್ತರು ಬೈಕ್ ರ್ಯಾಲಿ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ ಎಂದರು. ಇಂದಿನಿಂದ ಕುಮಾರಸ್ವಾಮಿಯವರು ಬೀದರ್ನಿಂದ ಯಾತ್ರೆ ಆರಂಭ ಮಾಡಿದ್ದಾರೆ. ಎಲ್ಲೆಡೆಯೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಧಿಕ್ಕರಿಸಿ, ಈ ಬಾರಿ ಕುಮಾರಣ್ಣ ನಾಯಕತ್ವಕ್ಕೆ ಬೆಂಬಲಿಸುವ ಮಾತುಗಳು ಕೇಳಿಬರುತ್ತಿವೆ. ಎರಡು ಪಕ್ಷಗಳ ಬಗ್ಗೆ ನಾವು ಮಾತನಾಡಲು ಸಿದ್ಧರಿಲ್ಲ ಎಂದರು.

ಬಿಜೆಪಿ, ಕಾಂಗ್ರೆಸ್ ವಿರುದ್ಧ ನಿಖಿಲ್ ವಾಗ್ದಾಳಿ
ರಾಜ್ಯದಲ್ಲಿ ಬಿಜೆಪಿಯ ನಡೆಸಿದ ಜನಸಂಕಲ್ಪ ಯಾತ್ರೆಯೂ ನೀವು ನೋಡಿದ್ದೀರಿ. ಕಾಂಗ್ರೆಸ್ನಿಂದ ನಡೆದ ಭಾರತ್ ಜೋಡೋ ಯಾತ್ರೆಯನ್ನೂ ನೋಡಿದ್ದೀರಿ. ಬಿಜೆಪಿಯವರು ಯಾವ ಪುರುಷತ್ವಕ್ಕೆ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದರು. ಶೇಕಡಾ 40 ಪೆರ್ಸೆಂಟ್ ಲೂಟಿ ಹೊಡೆಯುತ್ತೀದ್ದಿರಿ. ರಾಜ್ಯದ ಜನರ ಬೊಕ್ಕಸ ಲೂಟಿ ಹೊಡೆಯಲು ಜನ ಸಂಕಲ್ಪ ಯಾತ್ರೆ ಮಾಡುತ್ತೀರಾ? ಎಂದು ಪ್ರಶ್ನಿಸಿದವರು. ಇನ್ನು ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನಾಯಕರ ಜೋಡೋ ಯಾತ್ರೆ ಆಗಿದೆ. ರಾಜ್ಯದಲ್ಲಿ ಯಾವ ಜೋಡೋನೂ ಆಗುವುದಿಲ್ಲ, ಯಾವ ಸಂಕಲ್ಪವೂ ಆಗುವುದಿಲ್ಲ ಎಂದರು.
ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಮೆರವಣಿಗೆ
ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ಆದರರೆ ಎರಡು ರಾಷ್ಟ್ರೀಯ ಪಕ್ಷಗಳು ಹೆಚ್ಚಾಗಿ ಆಡಳಿತ ನಡೆಸಿವೆ. ಕುಮಾರಣ್ಣ 34 ತಿಂಗಳಲ್ಲಿ ನೀಡಿದ ಕಾರ್ಯಕ್ರಮದ ಬಗ್ಗೆ ರಾಜ್ಯದ ಜನರು ಇವತ್ತು ಚರ್ಚೆ ಮಾಡುತ್ತಾರೆ. 4 ವರ್ಷದಲ್ಲಿ ಏನು ಮಾಡದವರು ಮುಂದಿನ ಐದು ವರ್ಷದಲ್ಲಿ ಬಿಜೆಪಿಯವರು ಮಾಡುತ್ತಾರಾ?. ಕುಮಾರಣ್ಣ ರೈತರ ಸಾಲವನ್ನು ಮನ್ನಾ ಮಾಡಿದರು. ಈಗ ಜೆಡಿಎಸ್ನಿಂದ ಮಾಡಿರುವ ಪಂಚರತ್ನ ಕಾರ್ಯಕ್ರಮ ಎಲ್ಲರಿಗೂ ಅನುಕೂಲವಾಗಲಿದೆ ಎಂದರು. ಇನ್ನು ಇದೇ ವೇಳೆ ನಿಖಿಲ್ ಕುಮಾರಸ್ವಾಮಿಗೆ ತೆರದ ವಾಹನದಲ್ಲಿ ಪಟ್ಟಣದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಕೋರ್ಟ್ ವೃತ್ತದ ಬಳಿ ಬೃಹತ್ ಆಕಾರದ ಹೂಮಾಲೆ ಹಾಕಿ ಜೆಸಿಬಿ ಮೂಲಕವಾಗಿ ಪುಷ್ಪವೃಷ್ಠಿ ಮಾಡಲಾಯಿತು. ಈ ವೇಳೆ ಶಾಸಕ ವೆಂಕಟರಾವ್, ನಾಡಗೌಡ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿಗೆ ಸಾಥ್ ನೀಡಿದರು.












Click it and Unblock the Notifications