ಪಠ್ಯ ಪುಸ್ತಕ ವಿವಾದಕ್ಕೆ ಬರಗೂರು ರಾಮಚಂದ್ರಪ್ಪ ಸಮಿತಿ ಕಾರಣ: ಶಿಕ್ಷಣ ಸಚಿವ ನಾಗೇಶ್
ರಾಯಚೂರು, ಮೇ 29: "ಕರ್ನಾಟಕದಲ್ಲಿ ಪಠ್ಯಪುಸ್ತಕ ಕುರಿತು ವಿವಾದ ಎದ್ದಿರುವುದಕ್ಕೆ ನಿಕಟಪೂರ್ವ ಅಧ್ಯಕ್ಷ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯೇ ಕಾರಣ" ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಆರೋಪಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, "ಎಲ್ಲಾ ಪುಸ್ತಕಗಳನ್ನು ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯೇ ಪರಿಷ್ಕರಣೆ ಮಾಡಿದೆ. ಈಗ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯವನ್ನು ಪರಿಷ್ಕರಣೆ ಮಾಡಲಾಗಿದ್ದು, ಅದರಲ್ಲಿ ಭಗತ್ಸಿಂಗ್ ಕುರಿತಾದ ಪಾಠವನ್ನು ತೆಗೆದು ಹಾಕಿಲ್ಲ" ಎಂದರು.
"ಬ್ರಿಟಿಷರ ವಿರುದ್ಧ ಹೋರಾಡಿದ ವೀರರು ಎನ್ನುವ ಶಿರೋನಾಮೆಯಲ್ಲಿ ರಚನೆಯಾಗಿರುವ ಪಾಠದಲ್ಲಿ ಟಿಪ್ಪುಸುಲ್ತಾನ್ ಕುರಿತಾಗಿಯೇ ಬರೆಯಲಾಗಿದೆ. ವೀರಮದಕರಿ ನಾಯಕ, ಕಿತ್ತೂರುರಾಣಿ ಚೆನ್ನಮ್ಮ, ಹಲಗಲಿ ಬೇಡರು ಹೋರಾಡಿಲ್ಲವೇ, ಈಗ ಅವರನ್ನು ಸಹ ಸೇರ್ಪಡೆ ಮಾಡಿರುವುದು ತಪ್ಪೇ?. ಇವರೆಲ್ಲ ಸಿದ್ದರಾಮಯ್ಯನ ವಿರುದ್ಧ ಹೋರಾಡಿದರೇ?" ಎಂದು ವ್ಯಂಗ್ಯವಾಡಿದರು.

" ಮೈಸೂರು ಮಹಾರಾಜರು ತಮ್ಮ ಪತ್ನಿಯ ಬಂಗಾರವನ್ನು ಒತ್ತೆಯಿಟ್ಟು ಕೆಆರ್ಎಸ್ ಕಟ್ಟಿಸಿದ್ದಾರೆ. ಅಂತವರ ಪಾಠ ಮಕ್ಕಳಿಗೆ ಬೇಡವೇ. ಸಿಂಧೂ ಸಂಸ್ಕೃತಿ ಎನ್ನುವ ಪಾಠ ತೆಗೆದು ನೆಹರೂ ಮಗಳಿಗೆ ಬರೆದ ಪತ್ರ ಎನ್ನುವ ಪಾಠ ಸೇರ್ಪಡೆ ಮಾಡಿರುವುದು ಸರಿಯೇ. 31 ಇತಿಹಾಸಕಾರರ ಪಟ್ಟಿಯಲ್ಲಿ ಎಲ್ಲಾ ಇಂಗ್ಲಿಷರ ಹೆಸರುಗಳಿವೆ. ಇವರಿಗೆ ಒಬ್ಬ ಭಾರತೀಯ ಇತಿಹಾಸಕಾರ ಸಿಗಲಿಲ್ಲವೇ?" ಎಂದು ಆಕ್ಷೇಪ ವ್ಯಕ್ತಪಡಿಸಿದರು.
"ವಿವಿಧ ಧರ್ಮಗಳ ಬಗ್ಗೆ ಬರೆಯಲಾಗಿದ್ದು, ಭಾರತೀಯ ಹಿಂದೂ ಧರ್ಮದ ಬಗ್ಗೆ ಚಕಾರವೆತ್ತುವ ಸೌಜನ್ಯವನ್ನು ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಾಡಿಲ್ಲ" ಎಂದರು.

ಕ್ರಮ ಕೈಗೊಳ್ಳಲಾಗಿದೆ: ಮಸ್ಕಿ ವಿಧಾನಸಭಾ ಕ್ಷೇತ್ರದ ಬುದ್ದಿನ್ನಿ ಗ್ರಾಮದಲ್ಲಿ ಪ್ರೌಢಶಾಲೆ ಕಟ್ಟಡ ಇದ್ದು, 8ನೇ ತರಗತಿವರೆಗೆ ಓದಿದ ಮಕ್ಕಳಿಗೆ 9ನೇ ತರಗತಿಗೆ ಅವಕಾಶವಿಲ್ಲದೆ ಈಗ ಅತಂತ್ರವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, "ಈ ಕುರಿತು ತಮ್ಮ ಗಮನಕ್ಕೆ ಬಂದಿದ್ದು, ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು" ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟರಾವ್ ನಾಡಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮರೇಗೌಡ ವಿರುಪಾಪುರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡಬಸವರಾಜ ಇದ್ದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications