ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖೋಟಾ ನೋಟು ದಂಧೆಯಲ್ಲಿ ದೇವದುರ್ಗದ ಬಿಜೆಪಿ ಮುಖಂಡರು ಭಾಗಿ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಜುಲೈ.03: ಖೋಟಾ ನೋಟು ಚಲಾವಣೆ ದಂಧೆಯಲ್ಲಿ ದೇವದುರ್ಗದ ಬಿಜೆಪಿ ಮುಖಂಡರು ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 7 ಜನ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಮುಖಂಡರಾದ ಬಸಾಪುರ ಕ್ಯಾಂಪಿನ ಟಿ.‌ ಶ್ರೀನಿವಾಸ, ಹುಸೇನನಗರದ ರಾಮಕೃಷ್ಣ, ತಳವಾರದೊಡ್ಡಿಯ ಅಯ್ಯಾಳಪ್ಪ, ಗದ್ವಾಲ್ ತಾಲೂಕಿನ ಹನುಮಂತ, ಜಾಲಹಳ್ಳಿಯ ಪ್ರಕಾಶ, ಚಿಕ್ಕಬೂದೂರಿನ ಬಸವರಾಜ ಮತ್ತು ರಾಮಲಿಂಗೇಶ್ವರ ಕಾಲೋನಿಯ ಸೈಯದ್ ಉಸ್ಮಾನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವದತ್ತಿ ಚರಂಡಿಯಲ್ಲಿ ಐದು ಲಕ್ಷ ರೂ. ಮೌಲ್ಯದ ಹಳೆ ನೋಟುಗಳು ಪತ್ತೆಸವದತ್ತಿ ಚರಂಡಿಯಲ್ಲಿ ಐದು ಲಕ್ಷ ರೂ. ಮೌಲ್ಯದ ಹಳೆ ನೋಟುಗಳು ಪತ್ತೆ

ಇವರು ಶಾಸಕ ಕೆ.ಶಿವನಗೌಡ ನಾಯಕ ಅವರ ಆಪ್ತ ವಲಯದವರು ಎನ್ನಲಾಗಿದೆ. ಚುನಾವಣೆ ವೇಳೆ ದೇವದುರ್ಗದಲ್ಲಿ ನಕಲಿ ನೋಟು ಪತ್ತೆಯಾಗಿದ್ದವು. ಆಗ ಬಂಧಿತರಿಂದ 4.52 ಲಕ್ಷ ರೂಪಾಯಿ ನಗದು, ನೋಟು ಮುದ್ರಣ ವಸ್ತುಗಳ ಜಪ್ತಿ ಮಾಡಲಾಗಿತ್ತು.

BJP leaders of Devadurga have been involved in the forged note

ಬಂಧಿತರು ಬೆಂಗಳೂರು ಮೂಲದ ಅಬ್ದುಲ್​ ರಹಮಾನ್​ ಎಂಬುವವನಿಂದ ಖೋಟಾ ನೋಟು ಮುದ್ರಣ ಸಾಮಗ್ರಿಯನ್ನು ಖರೀದಿಸಿದ್ದರು ಎಂದು ತಿಳಿದು ಬಂದಿದೆ.

ಖೋಟಾ ನೋಟು ದಂಧೆಕೋರರಿಗೆ ಅಂತರಾಜ್ಯದ ನಂಟಿರುವುದು ತಿಳಿದು ಬಂದಿದೆ.

English summary
BJP leaders of Devadurga have been involved in the forged note. Police arrested seven persons for printing and manipulating forged notes in Raichur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X