Lumpiskin: ಲಿಂಗಸೂಗೂರಿನಲ್ಲಿ ಹೆಚ್ಚಾದ ಜಾನುವಾರುಗಳ ಚರ್ಮಗಂಟು ರೋಗ: ಸಾವಿನ ಸಂಖ್ಯೆ ಏರಿಕೆ!
ರಾಯಚೂರು ನವೆಂಬರ್ 29: ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಸುತ್ತಲಿನ ಗ್ರಾಮಗಳಲ್ಲಿ ಜಾನುವಾರುಗಳ ಚರ್ಮಗಂಟು ರೋಗ (ಲಂಪಿಸ್ಕಿನ್) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರ ಜತೆಗೆ ಅವುಗಳ ಸಾವಿನ ಸಂಖ್ಯೆ ಕೂಡ ಏರುತ್ತಿದೆ. ಇಲ್ಲಿಯವರೆಗೆ 3 ಜಾನುವಾರು ಸಾವನ್ನಪ್ಪಿವೆ.
ರೋಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣಿನಲ್ಲಿ ನೀರು ಸೋರುವುದು, ನಿಶ್ಯಕ್ತಿ, ಕಾಲುಗಳಲ್ಲಿ ಬಾವು, ಕುಂಟುವುದು, ಚರ್ಮದ ಮೇಲೆ ದಪ್ಪದ ಗಂಟುಗಟ್ಟುವುದು, ನಂತರ ಗಂಟು ಒಡೆದು ಗಾಯವಾಗುವ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಜಾನುವಾರುಗಳು ಸಾಯುತ್ತಿವೆ.

ಈ ಹಿಂದೆ ಚರ್ಮ ಗಂಟು ರೋಗ ಹೆಚ್ಚಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಮುದಗಲ್ ಪಟ್ಟಣದಲ್ಲಿ ನಡೆಯುತ್ತಿದ್ದ ಜಾನುವಾರು, ಕುರಿ, ಮೇಕೆ ಸಂತೆಗಳನ್ನು ನಿಷೇಧಿಸಿದ್ದರು. ಆಗ ಸಾವಿನ ಸಂಖ್ಯೆ ಕಡಿಮೆ ಇತ್ತು. ಕಳೆದ ಒಂದು ತಿಂಗಳಿಂದ ತೀವ್ರವಾಗಿ ಹರಡುತ್ತಿದೆ. ಪಶು ಇಲಾಖೆ ಸರ್ವೆ ಪ್ರಕಾರ ತಾಲ್ಲೂಕಿನಲ್ಲಿ 16 ಜಾನುವಾರುಗಳಿಗೆ ರೋಗ ಕಾಣಿಸಿಕೊಂಡಿದೆ. ಆದರೆ ಪಶು ಇಲಾಖೆ ವೈದ್ಯರ ಗಮನಕ್ಕೆ ಬಾರದೆ ಇರುವ ಪ್ರಕರಣಗಳು ಹೆಚ್ಚಿವೆ ಎಂದು ಹೇಳುತ್ತಿದ್ದಾರೆ ರೈತರು. ರೋಗ ಇದ್ದ ಜಾನುವಾರುಗೆ ಕಚ್ಚಿದ ಸೊಳ್ಳೆಯು ಆರೋಗ್ಯವಂತ ಜಾನುವಾರಿಗೆ ಕಚ್ಚಿದಾಗ ಹರಡುತ್ತದೆ.
'ರೋಗ ಕಾಣಿಸಿಕೊಂಡು 7 ದಿನದವರೆಗ ಜಾನುವಾರು ಜೀವಂತವಾಗಿ ಇರುತ್ತದೆ. ಅಷ್ಟರಲ್ಲಿ ರೈತರು ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಬೇಕು. ಮೃತಪಟ್ಟ ಜಾನುವಾರುಗಳು ಸಣ್ಣ ಕರುಗಾಳಗಿವೆ. ಅವುಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಮೃತಪಟ್ಟಿವೆ' ಎನ್ನುತ್ತಾರೆ ಲಿಂಗಸುಗೂರು ತಾಲ್ಲೂಕು ಪಶು ವೈದ್ಯಾಧಿಕಾರಿ ರಾಚಪ್ಪ.
'ಪಶುಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಉಳುಮೆ ಮಾಡುವ ಹೋರಿ, ಹಾಲು ಕೊಡುವ ಹಸು, ಎಮ್ಮೆ ಸೇರಿದಂತೆ ಎಲ್ಲ ವಯೋಮಾನದ ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಳ್ಳುತ್ತಿದೆ. ಚಿಕಿತ್ಸೆ ಕೊಡಿಸುವಷ್ಟರಲ್ಲಿ ಮತ್ತೊಂದಕ್ಕೆ ಬಂದಿರುತ್ತದೆ. ರೋಗ ಆರಂಭದಲ್ಲಿ ಸಾವಿನ ಪ್ರಮಾಣ ಕಡಿಮೆ ಇತ್ತು. ಈಗ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಹಾಲು ಕೊಡುವ ಹಸುಗಳು ಸಾವನ್ನಪ್ಪಿದರೆ ರೈತರ ಜೀವನ ಕ್ರಮವೇ ಏರುಪೇರರಾಗುತ್ತದೆ' ಎಂದು ರೈತ ಮಹಿಳೆ ನಿಂಗಮ್ಮ ಆತಂಕ ವ್ಯಕ್ತಪಡಿಸುತ್ತಾರೆ.
ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ಲಂಪಿಸ್ಕಿನ್ ಕಂಡು ಬಂದ ತಕ್ಷಣ ಪಶುವೃದ್ಯರನ್ನು ಸಂಪರ್ಕಿಸಿ ಜಾನುವಾರಗಳಿಗೆ ಚಿಕಿತ್ಸೆ ಕೊಡಿಸಬೇಕು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications