ಮದ್ಯದಂಗಡಿ ತೆರೆದ ಸರ್ಕಾರ ವಿರುದ್ಧ ಸ್ವಾಮೀಜಿ ಅಸಮಾಧಾನ
ರಾಯಚೂರು, ಮೇ 4: ತಿಂಗಳುಗಳ ನಂತರ ಮತ್ತೆ ಮದ್ಯ ಮಾರಾಟ ಶುರುವಾಗಿವೆ. ಮದ್ಯ ಪ್ರಿಯರು ಅಂಗಡಿಗಳ ಮುಂದೆ ಕ್ಯೂ ನಿಂತು ಖರೀದಿ ಮಾಡುತ್ತಿದ್ದಾರೆ. ಸರ್ಕಾರ ಈ ನಿರ್ಧಾರವನ್ನು ರಾಯಚೂರಿನ ಸಿದ್ದಲಿಂಗ ಮಹಾಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
Recommended Video
ಚಿಕ್ಕಸೂಗುರಿನ ಚೌಕಿಮಠದ ಸಿದ್ದಲಿಂಗ ಮಹಾಸ್ವಾಮಿಗಳು ಮದ್ಯ ಮಾರಾಟ ಮಾಡುವ ಸರ್ಕಾರ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ಬೊಕ್ಕಸ ತುಂಬಿಸಿಕೊಳ್ಳುವ ಆಸೆಯಿಂದ ಸರ್ಕಾರ ಮದ್ಯದಂಗಡಿಗಳನ್ನ ತೆರೆದಿದೆ. ಈ ರೀತಿ ಮಾಡದೆ, ಇನ್ನಷ್ಟು ದಿನ ಮದ್ಯದ ಅಂಗಡಿಗಳನ್ನು ಮುಚ್ಚಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.
''ಮದ್ಯಪಾನ ನಿಷೇಧಕ್ಕೆ ಕೆಲ ಸಂಘ ಸಂಸ್ಥೆಗಳು ನಿರಂತರ ಹೋರಾಟ ನಡೆಸಿದ್ದರೂ, ಸಾಧ್ಯವಾಗದ್ದನ್ನ ಕೊರೊನಾ ವೈರಸ್ ಮಾಡಿತ್ತು. ಲಾಕ್ಡೌನ್ ವೇಳೆ ಶೇಕಡ 90ರಷ್ಟು ಜನ ಸಂಪೂರ್ಣವಾಗಿ ಮದ್ಯಪಾನ ತ್ಯಜಿಸಿದ್ದರು. ಇನ್ನಷ್ಟು ದಿನ ಮುಂದುವರೆದಿದ್ದರೆ ಉಳಿದ ಜನರು ಮದ್ಯಪಾನ ಮಾಡುವುದನ್ನು ಬಿಡುತ್ತಿದ್ದರು.'' ಎಂದಿದ್ದಾರೆ.

ಕೊರೊನಾ ವೈರಸ್ ತಡೆಗೆ ಮಠಗಳು ನೀಡಿರುವ ಸಲಹೆಯನ್ನು ಸರ್ಕಾರ ನಿರ್ಲಕ್ಷಾ ಮಾಡಿದೆ. ಅದನ್ನು ಪರಿಗಣಿಸಬೇಕು. ಶ್ರೀಮಂತ ಮಠಗಳಿಗೆ ಮಾತ್ರವಲ್ಲದೆ ನಮ್ಮ ಮಠಗಳಿಗೂ ಅನುದಾನ ನೀಡಬೇಕು ಎಂದಿದ್ದಾರೆ.
ಇಂದಿನಿಂದ ಮದ್ಯ ಮಾರಾಟ ಪ್ರಾರಂಭವಾಗಿದ್ದು, ಬೆಂಗಳೂರು ಸೇರಿದಂತೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯದ ಅಂಗಡಿಗಳಲ್ಲಿ ಜನ ಸಾಲುಗಟ್ಟಿ ನಿಂತು ಮದ್ಯ ಪಡೆದುಕೊಳ್ಳುತ್ತಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications