ಸ್ಕೂಲ್ಗೆ ಚಕ್ಕರ್, ಕೂಲಿಗೆ ಹಾಜರ್! ರಾಯಚೂರಿನಲ್ಲಿ ಎಲ್ಲಿಗೆ ಬಂತು ನೋಡಿ ಮಕ್ಕಳ ಶಿಕ್ಷಣ....
ರಾಯಚೂರು ಫೆಬ್ರವರಿ 6: ಶಾಲೆಯಲ್ಲಿ ಓದುತ್ತಾ, ಆಟವಾಡಿಕೊಂಡಿರಬೇಕಾದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಬರಗಾಲ ಹಿನ್ನೆಲೆ ಬುತ್ತಿ, ನೀರಿನ ಬಾಟಲಿಯೊಂದಿಗೆ ದೊಡ್ಡವರಂತೆಯೇ ಸೊಂಟಕ್ಕೆ ಚೀಲ, ತಲೆಗೆ ಬಟ್ಟೆ ಕಟ್ಟಿಕೊಂಡು ಕೂಲಿ ಕೆಲಸಕ್ಕಾಗಿ ನಿತ್ಯ ಗೂಡ್ಸ್ ವಾಹನದದಲ್ಲಿ ಜೋಳ ಕಣ ಮಾಡಲು ಹೋಗುತ್ತಿದ್ದಾರೆ.
ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 4,18,322 ಮಕ್ಕಳು ದಾಖಲಾಗಿದ್ದಾರೆ. ಆದರೆ, ಬರಗಾಲ ಆವರಿಸಿರುವುದರಿಂದ ರೈತರು ನಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಸಾಲ ತೀರಿಸಲು ಪಾಲಕರು ಮಕ್ಕಳನ್ನು ಶಾಲೆ ಬಿಡಿಸಿ, ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ.

ಕಳೆದ ಜೂನ್ನಿಂದ 2024 ರ ಜನವರಿ ಅಂತ್ಯದವರೆಗೆ ಸುಮಾರು 2000 ಮಕ್ಕಳು ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳುತಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 2022 ರಿಂದ 24 ರ ವರೆಗೆ ಜಮೀನು, ಹೋಟೆಲ್, ಗ್ಯಾರೇಜ್ ಸೇರಿ ನಾನಾ ಸ್ಥಳಗಳಲ್ಲಿ ಕೆಲಸ ಮಾಡುವ ಕೇವಲ 14 ಪ್ರಕರಣಗಳನ್ನು ಮಾತ್ರ ದಾಖಲು ಮಾಡಿ, 28 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
2022-23 ರಲ್ಲಿ ಮೂರು ಪ್ರಕರಣಗಳ ಪೈಕಿ ಐದು ಮಕ್ಕಳು, 2023-24 ರಲ್ಲಿ 11 ಪ್ರಕರಣಗಳ ಪೈಕಿ 23 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯವಾಗಿ ಕಡಿಮೆ ಕೂಲಿಗೆ ದೊರೆಯುವ ಮಕ್ಕಳನ್ನೇ ಜಮೀನುಗಳ ಮಾಲೀಕರ ಅಥವಾ ಗುತ್ತಿಗೆ ಪಡೆದಿರುವ ರೈತರು ಎದರು ನೋಡುತ್ತಾರೆ. ದೊಡ್ಡವರಿಗೆ ಹೆಚ್ಚಿನ ಕೂಲಿ ನೀಡುವ ಬದಲು, ಮಕ್ಕಳಿಗೆ 100 ರಿಂದ 150 ರೂ. ನೀಡಿ ದುಡಿಸಿಕೊಳ್ಳುತ್ತಿದ್ದಾರೆ.
ಕೂಲಿಗಾಗಿ ಮಕ್ಕಳು ಗಂಜಳ್ಳಿ, ಹನುಮಾನದೊಡ್ಡಿ, ಕೊರ್ವಿಹಾಳ್, ಸಗಮಕುಂಟಾ, ಇಬ್ರಾಹಿಂದೊಡ್ಡಿ ಸೀಮಾಂತರದ ಹೊಲಗಳಿಗೆ ತೆರಳುತ್ತಿದ್ದಾರೆ. ನಿರಂತರ ಒಂದು ವಾರ ಮಕ್ಕಳು ಶಾಲೆಗೆ ಬಾರದಿದ್ದರೆ ಶಿಕ್ಷಕರು ಮಕ್ಕಳ ಬಗ್ಗೆ ಮಾಹಿತಿ ಪಡೆಯಬೇಕು. ಶಾಲೆಗೆ ಚಕ್ಕರ್ ಹಾಕಲು ಕಾರಣವೇನು ಎಂಬುದನ್ನು ಪತ್ತೆ ಮಾಡಬೇಕು. ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಕೌಟುಂಬಿಕ ಸಮಸ್ಯೆ ಇದ್ದಲ್ಲಿ ಅದನ್ನು ಹೋಗಲಾಡಿಸಲು ಪ್ರಯತ್ನಿಸಬೇಕು ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ತಿಳಿಹೇಳಬೇಕು. ಆದರೆ, ಈ ಬಗ್ಗೆ ಶಾಲೆಗಳ ಮುಖ್ಯ ಶಿಕ್ಷಕರು ಆಸ್ಥೆ ವಹಿಸಿದ ಕಾರಣ ಶಾಲೆ ಬಿಟ್ಟ ಅನೇಕ ಮಕ್ಕಳು ಜಮೀನುಗಳಲ್ಲಿ ಕೆಲಸ ಮಾಡುವಂತಾಗಿದೆ.

ಮಕ್ಕಳು ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳಿದರೆ, ಆ ಶಾಲೆಯ ಶಿಕ್ಷಕರು ಮಕ್ಕಳ ಮನೆಗೆ ತೆರಳಿ ಪೋಷಕರಿಗೆ ಮನವರಿಕೆ ಮಾಡಿ ಶಾಲೆಗೆ ಕರೆ ತರುವ ಕೆಲಸ ಮಾಡುತ್ತಿದ್ದಾರೆ. 14 ವರ್ಷದೊಳಗಿನ ಮಕ್ಕಳನ್ನು ಕೂಲಿ ಕೆಲಸಕ್ಕೆ ಸೇರಿಸಿಕೊಂಡರೆ ಅಂತಹವರ ವಿರುದ್ಧ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಯಚೂರು ಡಿಡಿಪಿಐ ಕೆ.ಡಿ.ಬಡಿಗೇರ ಹೇಳಿದರು.
-
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications