ತಿಮ್ಮಾಪುರ ಏತ ನೀರಾವರಿ ಯೋಜನೆ ಉದ್ಘಾಟನೆ: ಡಿಸೆಂಬರ್ 19ಕ್ಕೆ ಸಿಂಧನೂರಿಗೆ ಸಿಎಂ, ಡಿಸಿಎಂ ಭೇಟಿ!
ರಾಯಚೂರು ಡಿಸೆಂಬರ್ 15: ಸಿಂಧನೂರು ತಾಲೂಕಿನ ಮಹಾತ್ವಾಕಾಂಕ್ಷಿ ತಿಮ್ಮಾಪುರ ಏತ ನೀರಾವರಿ ಯೋಜನೆ ಉದ್ಘಾಟನೆ ಹಾಗೂ ಸಿಂಧನೂರಿನ ಸರಕಾರಿ ಮಹಾ ವಿದ್ಯಾಲಯದ 50 ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಲಿದ್ದಾರೆ.
40 ಸಾವಿರ ಎಕರೆ ಭೂಮಿಗೆ ನೀರುಣಿಸುವ ತಿಮ್ಮಾಪುರ ಏತ ನೀರಾವರಿ ಯೋಜನೆ ಉದ್ಘಾಟನೆಯ ಹಂತದಲ್ಲಿ ಇದೆ. ನೀರಾವರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕು. ಸರಕಾರಿ ಮಹಾ ವಿದ್ಯಾಲಯದ 50ನೇ ವರ್ಷದ ಸಂಭ್ರಮಾಚರಣೆ, ಜಲಧಾರೆ ಯೋಜನೆಗೆ ಚಾಲನೆ, ಟ್ರಾಫಿಕ್ ಪೊಲೀಸ್ ಠಾಣೆ ಕಟ್ಟಡ ಉದ್ಘಾಟನೆ, ನಾನಾ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಗಳು ನಡೆಯಲಿವೆ. ಗೃಹ ಮಂತ್ರಿ ಜಿ. ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್, ಸುಧಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು.

ಅಧಿಕಾರಿಗಳು ತಂಡಗಳನ್ನು ರಚಿಸಿಕೊಂಡು ಸಮಿತಿಗಳನ್ನು ಮಾಡಿಕೊಳ್ಳಬೇಕು. ಕಾರ್ಯಕ್ರಮ ಕುರಿತಂತೆ ರೂಪುರೇಷೆ ಸಿದ್ಧಪಡಿಸಬೇಕು. ಸಚಿವರನ್ನು ಸ್ವಾಗತಿಸುವುದು ಸೇರಿದಂತೆ ನಿಯಮಾನುಸಾರ ಎಲ್ಲಾ ರೀತಿಯಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಬೇಕು. ಯಾರು ಎಲ್ಲಿರಬೇಕು? ಎಂಬುದನ್ನು ಮೊದಲೇ ನಿರ್ಧರಿಸಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಮೊದಲು ಸಿಂಧನೂರು ನಗರದಲ್ಲಿ ಕಾರ್ಯಕ್ರಮ ಮಾಡಿ ನಂತರ ಒಳ ಬಳ್ಳಾರಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು.
ಹೆಲಿಪ್ಯಾಡ್ಗಳನ್ನು ಎಲ್ಲೆಲ್ಲಿ ಮಾಡುವುದು ಸೂಕ್ತ ಎಂಬ ಕುರಿತಾಗಿಯೂ ಶಾಸಕರು ಪಿಡಬ್ಲ್ಯೂಡಿ ಎಇಇ ಚಂದ್ರಶೇಖರ ಪಾಟೀಲ್ ಜತೆ ಚರ್ಚಿಸಿದರು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದಾಗ ಹೆಲಿಪ್ಯಾಡ್ ಸಮಸ್ಯೆಯಿಂದಾಗಿ ಹೆಲಿಕಾಪ್ಟರ್ ಮಣ್ಣಿನಲ್ಲಿಯೇ ಸಿಕ್ಕಿ ಹಾಕಿಕೊಂಡಿತ್ತು.
ಈ ಬಾರಿ ಸೂಕ್ತ ಸ್ಥಳವನ್ನು ಹೆಲಿಪ್ಯಾಡ್ಗಾಗಿ ಆಯ್ಕೆ ಮಾಡಿರಿ ಎಂಬ ಅಭಿಪ್ರಾಯ ವ್ಯಕ್ತವಾಯಿತು. ನಗರದ ಕಾರ್ಯಕ್ರಮಕ್ಕೆ ಸರಕಾರಿ ಹಾಗೂ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಲಿದ್ದು, ದೊಡ್ಡ ಮಟ್ಟದ ಮೆರವಣಿಗೆ ಮಾಡಲಾಗುವುದು. ಸರಕಾರಿ ಕಾಲೇಜಿನ ಸುವರ್ಣ ಸಂಭ್ರಮವಾಗಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಳ ಬಳ್ಳಾರಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲರನ್ನೂ ಆಹ್ವಾನಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಆದೇಶಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications