ರಾಯಚೂರಿನಲ್ಲಿ ದಿಕ್ಕು ತಪ್ಪಿದ ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್
ರಾಯಚೂರು, ಫೆಬ್ರವರಿ 8: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಇಳಿಯಬೇಕಾದ ಜಾಗದಲ್ಲಿ ಇಳಿಯದೇ ಮತ್ತೊಂದು ಜಾಗದಲ್ಲಿ ಲ್ಯಾಂಡ್ ಆದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಇದು ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ನಲ್ಲಿ ಇಳಿಯದೆ, ಮತ್ತೊಂದು ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ಈ ಬೆಳವಣಿಗೆಯಿಂದ ಸಿಎಂ ಸ್ವಾಗತಕ್ಕೆ ಕಾದಿದ್ದ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಗೊಂದಲಕ್ಕೆ ಒಳಗಾದರು.

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ಅವರ ಮೊಮ್ಮಗನ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು. ಈ ಹಿನ್ನೆಲೆ ರಾಯಚೂರು ರಸ್ತೆಯ ಶ್ರೀನಿವಾಸ್ ಲೇಔಟ್ನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರಿಗಾಗಿ ವಿಶೇಷವಾಗಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದರೆ, ಹೆಲಿಕಾಪ್ಟರ್ ದಿಕ್ಕು ತಪ್ಪಿ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಖಾಸಗಿ ಹೆಲಿಪ್ಯಾಡ್ನಲ್ಲಿ ಇಳಿದಿದೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ಮತ್ತೊಂದು ಹೆಲಿಪ್ಯಾಡ್ನಲ್ಲಿ ಇಳಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಅದೇ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದರಿಂದ, ಅವರು ಇಳಿದ ಹೆಲಿಪ್ಯಾಡ್ನಲ್ಲೇ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಇದನ್ನು ತಾಂತ್ರಿಕ ದೋಷ ಎಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿಪಡಿಸಲಾಗಿದ್ದ ಹೆಲಿಪ್ಯಾಡ್ಗೆ ಬದಲಾಗಿ ಮತ್ತೊಂದು ಸ್ಥಳದಲ್ಲಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಕುಟುಂಬದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಎಂ ಲಿಂಗಸುಗೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಕಲಬುರಗಿ ರಸ್ತೆಯಲ್ಲಿರುವ ಹೆಲಿಪ್ಯಾಡ್ನಲ್ಲಿ ಇಳಿಯಿತು. ಇದರಿಂದ ಭದ್ರತಾ ವ್ಯವಸ್ಥೆಗಳಲ್ಲಿ ಸ್ವಲ್ಪ ಗೊಂದಲ ಉಂಟಾದರೂ, ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಈ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಇದು ತಾಂತ್ರಿಕ ದೋಷದಿಂದ ಉಂಟಾಯಿತೇ ಅಥವಾ ಇತರೆ ಕಾರಣಗಳಿಂದಾಗಿತೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಗೊಂದಲಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications