'ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ'
ರಾಯಚೂರು, ಜನವರಿ 12 : 2018ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಎದುರಿಸಲು ಸೂಚಿಸಿದೆ. ಇನ್ನು ನಾನು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಇಲ್ಲಿ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಹಾಗೂ ನಾನು ಸೇರಿ ಪಕ್ಷ ಸಂಘಟಿಸುತ್ತಿದ್ದೇವೆ. ಕಾಂಗ್ರೆಸ್ ಶಾಸಕರು ಇಲ್ಲದ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದೇವೆ. ಎಲ್ಲ ಕಡೆ ಪಕ್ಷಕ್ಕೆ ಉತ್ತಮ ಬೆಂಬಲ ಸಿಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲಸ ಜನರಿಗೆ ಮೆಚ್ಚುಗೆಯಾಗಿದೆ. ಎಲ್ಲ ವರ್ಗದ ಜನರಿಗೆ ರಾಜ್ಯ ಸರಕಾರ ಅನುಕೂಲ ಮಾಡಿದೆ ಎಂದರು.
ಜನಸಂಖ್ಯೆ ಆಧಾರದ ಮೇಲೆ ಅನುದಾನ ನೀಡಲು ಬಹಳ ವರ್ಷಗಳಿಂದ ಕೇಳುತ್ತಿದ್ದೇವೆ. ಆ ಪದ್ಧತಿಯನ್ನು ಸಿದ್ದರಾಮಯ್ಯ ಸರಕಾರ ಜಾರಿ ಮಾಡಿದೆ. ದೇಶದಲ್ಲೇ ಇದೇ ಮೊದಲು ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಗಾಂಧೀಜಿಯ ರಾಮರಾಜ್ಯದ ಕನಸು ಸಿದ್ದರಾಮಯ್ಯ ನನಸು ಮಾಡಿದ್ದಾರೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುನಿಯಪ್ಪ ಹೇಳಿದರು.

ಸದಾಶಿವ ಆಯೋಗ ವರದಿ ಜಾರಿಗೆ ಎಲ್ಲ ದಲಿತ ಸಂಘಟನೆಗಳು ಒಂದಾಗಿವೆ. ಮೀಸಲಾತಿಯನ್ನು ಹಂಚಿಕೊಂಡು ತಿನ್ನಲು ನಾವು ಒಂದಾಗಿದ್ದೇವೆ. ಎಲ್ಲ ಜಾತಿಯ ಬಂಧುಗಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಬೇಡಿಕೆ. ಸದಾಶಿವ ಆಯೋಗದ ವರದಿ ಜಾರಿಯಿಂದ ಯಾವುದೇ ಜಾತಿಗೂ ಅನ್ಯಾಯವಾಗಲ್ಲ. ಒಳಮೀಸಲಾತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದರು.
ತಾವೇ ಜವಾಬ್ದಾರಿ ತೆಗೆದುಕೊಂಡು ನ್ಯಾಯ ಕೊಡಿಸಬೇಕು ಎಂದು ಖರ್ಗೆ ಅವರಿಗೂ ಮನವಿ ಮಾಡಿದ್ದೇವೆ. ಅವರು ರಾಷ್ಟ್ರ ನಾಯಕರು. ಅವರೇ ಸದಾಶಿವ ಆಯೋಗದ ವರದಿ ಜಾರಿ ವಿಚಾರದಲ್ಲಿ ನ್ಯಾಯ ಕೊಡಿಸಬೇಕು. ಈ ಸಂಬಂಧ ಖರ್ಗೆ ಅವರ ಜೊತೆ ಮಾತಾಡಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂದಿರುವುದಾಗಿ ತಿಳಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications