ಸಚಿವ ಶ್ರೀರಾಮುಲು ಆಪ್ತನ ಮಗಳ ಮದುವೆಯಲ್ಲಿ ಕೊರೊನಾ ನಿಯಮ ಪಾಲನೆ ಇಲ್ಲ

ರಾಯಚೂರು, ಅಕ್ಟೋಬರ್ 30: ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಹೊರವಲಯದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆಪ್ತ ನಾಗರಾಜ್ ನೆಕ್ಕಂಟಿ ತನ್ನ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದಾರೆ.

ಸಚಿವ ಬಿ.ಶ್ರೀರಾಮುಲು ಸ್ವತಃ ಈ ಅದ್ಧೂರಿ ಮದುವೆಗೆ ಆಗಮಿಸಿ ವಧು-ವರರಿಗೆ ಶುಭ ಹಾರೈಸಿ ಹೋಗಿದ್ದಾರೆ. ಆದರೆ ಕೊರೊನಾ ಇರುವ ಸಂದರ್ಭದಲ್ಲಿ ಅದ್ಧೂರಿ ಮದುವೆ ಮಾಡಿರುವುದು ಸರ್ಕಾರದ ನಿಯಮಗಳ ಸಂಪೂರ್ಣ ಉಲ್ಲಂಘನೆಯಾಗಿದೆ.

ಸಿಂಧನೂರು ನಗರದ ಹೊರವಲಯದಲ್ಲಿ ಇರುವ ಹೊಸಳ್ಳಿ ಜೆ.ಇ ಗ್ರಾಮ ವ್ಯಾಪ್ತಿಯಲ್ಲಿನ ಕಮ್ಮವಾರಿ ಸಂಘದ ಯಲಮಂಚಿಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ ಸುಮಾರು 80 ಲಕ್ಷ ರೂ. ಮೌಲ್ಯದ ಸೆಟ್ ಹಾಕಿಸಿ ಮದುವೆ ಮಾಡಲಾಗಿದೆ.

Raichuru: COVID-19 Norms Violated At The Minister B Sriramulus Close Aide Daughters Marriage

ಸಚಿವ ಶ್ರೀರಾಮುಲು ಆಪ್ತ ನಾಗರಾಜ್ ನೆಕ್ಕಂಟಿ ತಮ್ಮ ಮಗಳ ಮದುವೆಯನ್ನು ಕೋವಿಡ್ ನಿಯಮ ಉಲ್ಲಂಘಿಸಿ ಸಾವಿರಾರು ಜನರನ್ನು ಸೇರಿಸಿ ಅದ್ಧೂರಿಯಾಗಿ ಮಾಡಿದ್ದಾರೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಮದುವೆಯ ಮೆರವಣಿಗೆ ನಡೆದಿದೆ. ಯಾರೋಬ್ಬರು ಮಾಸ್ಕ್ ಹಾಕದೇ ಗುಂಪು ಗುಂಪಾಗಿ ಸೇರಿಕೊಂಡು ಮದುವೆ ಕಾರ್ಯ ಮಾಡಿರುವುದು ಕಂಡುಬಂದಿದೆ.

ಇಡೀ ಕಲ್ಯಾಣ ಮಂಟಪಕ್ಕೆ ಅದ್ಧೂರಿಯಾಗಿ ಅಲಂಕಾರ ಮಾಡಲಾಗಿತ್ತು. ಇದೇ ವೇಳೆ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಮದುವೆಯ ಮೆರವಣಿಗೆ ನಡೆದಿದೆ. ಮದುವೆ ಮೆರವಣಿಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿದ್ದವು. ನೂರಾರು ಬಂಧು ಬಳಗ, ಸಾವಿರಾರು ಜನ ಮದುವೆಯಲ್ಲಿ ಭಾಗವಹಿಸಿದ್ದರು.

Raichuru: COVID-19 Norms Violated At The Minister B Sriramulus Close Aide Daughters Marriage

ಕಲ್ಯಾಣ ಮಂಟಪದ ವ್ಯವಸ್ಥಾಪಕರಿಗೆ ಹೊಸಳ್ಳಿ ಇ.ಜೆ ಗ್ರಾ.ಪಂ ಕೊವಿಡ್ ನಿಯಮ ಪಾಲಿಸುವಂತೆ ಈ ಮೊದಲೆ ಸೂಚಿಸಿತ್ತು. ಆದರೆ ಗ್ರಾಮ ಪಂಚಾಯತಿಯ ಮುನ್ನೆಚ್ಚರಿಕೆ ಪತ್ರವನ್ನು ಉಲ್ಲಂಘಿಸಿ ಅದ್ಧೂರಿ ಮದುವೆ ಮಾಡಲಾಗಿದ್ದು, ಕಲ್ಯಾಣ ಮಂಟಪದ ವ್ಯವಸ್ಥಾಪಕರು ಸಹ ಕೋವಿಡ್ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+