ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅಸ್ತು: ಶಾಸಕರ ನಡುವೆ ಕ್ರೆಡಿಟ್ ವಾರ್
ರಾಯಚೂರು ಡಿಸೆಂಬರ್ 9: ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ಸಿರವಾರ, ದೇವದುರ್ಗ ಉಭಯ ತಾಲೂಕಿನ ನಡುವೆ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರವು ಅನುಮೋದನೆ ನೀಡಿದೆ.
ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಸಂತಸದ ಸಂಗತಿಯೇ ಆದರೂ ಇದರಿಂದ ಈಗ ರಾಯಚೂರು ಜಿಲ್ಲೆಯ ದೇವದುರ್ಗ , ಮಾನ್ವಿ ಹಾಗೂ ರಾಯಚೂರು ಗ್ರಾಮಾಂತರ ಶಾಸಕರುಗಳ ನಡುವೆ ಕ್ರೆಡಿಟ್ ವಾರ್ ಪ್ರಾರಂಭವಾಗಿದೆ.
ಉಭಯ ತಾಲೂಕಿನ ಬಾಗಲವಾಡ, ನೀರಮಾನ್ವಿ , ಮಲ್ಲಟ, ಹೀರಾ, ಅತ್ತನೂರು, ಚಿಕ್ಕಕೊಟ್ನೇಕಲ್, ತಡಕಲ್ , ಮಲ್ಲದಗುಡ್ಡ ಹಾಗೂ ಗ್ರಾಮಾಂಯತರ ಕ್ಷೇತ್ರದ ವ್ಯಾಪ್ತಿಯ ರಾಜಲಬಂಡಾ, ಸಾದಾಪೂರ ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ.

ದೇವದುರ್ಗ ಶಾಸಕರಾದ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಮುಂದಿನ ಸ್ಪರ್ಧಾಕಾಂಕ್ಷಿಯಾಗಿರುವ ಕೆ.ಶಿವನಗೌಡ ನಾಯಕರ ಒತ್ತಾಸೆಯಿಂದಲೇ ಈ ಎಲ್ಲಾ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾನ್ವಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಳ್ಳುವ ಮೂಲಕ ಕ್ರೆಡಿಟ್ ವಾರ್ ಪ್ರಾರಂಭವಾಗಿದೆ.
ಇದಕ್ಕೆ ವಿರುದ್ಧವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ವೆಂಕಟಪ್ಪ ನಾಯಕರ ಒತ್ತಾಸೆಯಿಂದಲೇ ಈ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವೆಂಕಟಪ್ಪ ನಾಯಕರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ಗಳನ್ನು ಹಂಚಿಕೊಳ್ಳುವ ಮೂಲಕ ಶಿವನಗೌಡ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.
ಮಾನ್ವಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಕುರ್ಡಿ ಹೋಬಳಿಯ ರಾಜಲಬಂಡಾ, ಸಾದಾಪೂರ ಗ್ರಾಮಗಳ ಬಹುದಿನಗಳ ಬೇಡಿಕೆಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಯ ಕ್ರೆಡಿಟ್ಅನ್ನು ಕೂಡ ಮಾನ್ವಿ ಶಾಸಕರು ಹಾಗೂ ದೇವದುರ್ಗದ ಶಾಸಕರು ಪಡೆಯುತ್ತಿರುವುದು ವಿಪರ್ಯಾಸವೇ ಸರಿ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಶಾಸಕ ಬಸನಗೌಡ ದದ್ದಲ್ ಅಭಿಮಾನಿಗಳು ಶಾಸಕರು ಸದನದಲ್ಲಿ ಧ್ವನಿ ಎತ್ತಿದ ವೀಡಿಯೋವನ್ನು ಹಾಗೂ ಪತ್ರಿಕಾ ವರದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಒಟ್ಟಿನಲ್ಲಿ ಸರ್ಕಾರದಿಂದ ಅನುಮೋದನೆಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ರೆಡಿಟ್ ವಾರ್ನಿಂದ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಮುನ್ನವೇ ರಂಗು ಬಂದಿದೆ. ಅಲ್ಲದೇ ಪರೋಕ್ಷವಾಗಿ ದೇವದುರ್ಗ ಶಾಸಕರ ಸ್ವಾಗತಕ್ಕೆ ಹಾಕಿದ ರತ್ನಗಂಬಳಿಯೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications