ರಾಯಚೂರಿನಲ್ಲಿ ಭಿನ್ನಮತ ಸ್ಫೋಟ: ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ..!
ರಾಯಚೂರು ಮಾರ್ಚ್ 28: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗ ಬಿಜೆಪಿ ಪಕ್ಷಕ್ಕೆ ಭಿನ್ನಮತದ ತಲೆ ನೋವು ಎದುರಾಗಿದೆ. ಟಿಕೆಟ್ ವಂಚಿತ ಅಭ್ಯರ್ಥಿ ಹಾಗೂ ಬೆಂಬಲಿಗರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಈ ಒಂದು ಅಸಮಾಧಾನ ಇಂದು ಅತಿರಿಕಕ್ಕೆ ಹೋಗಿ ಇಬ್ಬರು ಕಾರ್ಯಕರ್ತರು ಮೈ ಮೇಲೆ ಡೀಸೆಲ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು.
ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಬಿ ವಿ ನಾಯಕ ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ. ಬಿಜೆಪಿ ಸಹ ಇದಕ್ಕೆ ಹೊರತಾಗಿಲ್ಲ. ಒಂದು ಕಡೆ ಬಂಡಾಯವನ್ನು ಶಮನ ಮಾಡುತ್ತಿದ್ದಂತೆ ಮತ್ತೊಂದು ಕಡೆ ಅಸಮಾಧಾನ ಸ್ಫೋಟಗೊಳ್ಳುತ್ತಿದೆ. ಈ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್ ಕೊಟ್ಟಿರುವುದು ಬಿ.ವಿ. ನಾಯಕ ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ರೌದ್ರಾವತಾರ ತಾಳಿದ್ದು, ಪ್ರತಿಭಟನೆಯನ್ನು ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಡಿಸಲ್ ಸುರಿದುಕೊಂಡು ಹೈಡ್ರಾಮಾ ನಡೆಸಿದ್ದಾನೆ.

ನಮ್ಮ ಕುಟುಂಬದ ಇತಿಹಾಸದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದೆ. ಲೋಕಸಭಾ ಕ್ಷೇತ್ರದ ಪಕ್ಷದ ಟಿಕೆಟ್ ನೀಡುವ ಭರವಸೆ ನೀಡಿ ಪ್ರಚಾರ ಆರಂಭಸುವಂತೆ ಮುಖಂಡರು ಸೂಚಿಸಿದ್ದರು. ಆದರೆ, ಟಿಕೆಟ್ ನೀಡಲಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
'ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿ ಇತ್ತು. ನಾನು ಅಲ್ಪ ಮತಗಳಿಂದ ಸೋಲು ಅನುಭವಿಸಿದರೂ ಪಕ್ಷದ ಸಂಘಟನೆ ಬಲಗೊಂಡಿತು. ವಾಸ್ತವದಲ್ಲಿ ಲೋಕಸಭೆಗೆ ಸ್ಪರ್ಧಿಸುವ ಕಲ್ಪನೆಯನ್ನೂ ಮಾಡಿರಲಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ವಿರೋಧ ಪಕ್ಷ ನಾಯಕ ಆರ್.ಅಶೋಕ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟಿಕೆಟ್ ಭರವಸೆ ನೀಡಿದರು. ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕರಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ನಿಮಗೆ ಟಿಕೆಟ್ ನೀಡಲಾಗುವುದು. ವಿಶ್ವಾಸ ಮೂಡಿಸಿದರು' ಎಂದರು.

'ಹಾಲಿ ಸಂಸದರು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಮುಖಂಡರು ಪಕ್ಷದ ಕಾರ್ಯಕರ್ತರ ಪರಿಸ್ಥಿತಿಯನ್ನೂ ಅರ್ಥೈಸಿಕೊಳ್ಳಬೇಕು. ಕಾರ್ಯಕರ್ತರನ್ನೇ ಕಡೆಗಣಿಸಿದರೆ ಫಲಿತಾಂಶದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ' ಎಂದು ಹೇಳಿದರು.
ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್ ಮಾತನಾಡಿ,' ಬಿಜೆಪಿ ಟಿಕೆಟ್ ಬದಲಾವಣೆ ಮಾಡಿ ಬಿ.ವಿ ನಾಯಕ ಅವರಿಗೆ ನೀಡಬೇಕು. ಇಲ್ಲದೇ ಇದ್ದರೆ ಕೆಟ್ಟ ಪರಿಣಾಮ ಪಕ್ಷ ಎದುರಿಸುಬೇಕಾಗುತ್ತದೆ ಎಂಬುವುದನ್ನು ಪಕ್ಷದ ರಾಜ್ಯ ನಾಯಕರು ಅರಿತುಕೊಳ್ಳಬೇಕು' ಎಂದು ಎಚ್ಚರಿಸಿದರು.
ಮುಖಂಡರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ, ತಿಮ್ಮಾರೆಡ್ಡಿ ಬೋಗಾವತಿ, ಜಂಬಣ್ಣ, ಅನಿತಾ ಬಸವರಾಜ, ಶರಣಬಸವ ಜೋಳದಡಗಿ,ಅನಿಲ್ ಕುಮಾರ, ಗುರು ಉಪಸ್ಥಿತರಿದ್ದರು. ಸಭೆಯಲ್ಲಿ ಯುವಕರಿಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಕಾರ್ಯಕರ್ತರು ಅವರನ್ನು ತಡೆದು ಸಮಾಧಾನ ಪಡಿಸಿದರು. ನಂತರ 'ಗೋಬ್ಯಾಕ್ ಅಮರೇಶ್ವರ ನಾಯಕ' ಎಂದು ಘೋಷಣೆ ಕೂಗಿದರು. ಬ್ಯಾನರ್ಗಳನ್ನು ಪ್ರದರ್ಶಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications