ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಡ್ರೋನ್ ಕಾಣಿಕೆ; ಡ್ರೋನ್ ವಿಶೇಷತೆ ಏನು?
ರಾಯಚೂರು, ಅಕ್ಟೋಬರ್, 13; ರಾಯಚೂರು ಕೃಷಿ ವಿಶ್ವ ವಿದ್ಯಾಲಯ ಡ್ರೋನ್ ಬಳಸಿ ಕ್ರಿಮಿನಾಶಕ ಸಿಂಪರಣೆ ಸಾಧ್ಯ ಎಂಬುದನ್ನು ಸಂಶೋಧನೆಯ ಮೂಲಕ ಖಚಿತಪಡಿಸಿದೆ. ಆದ್ದರಿಂದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಮೂರು ಡ್ರೋನ್ಗಳನ್ನು ಒದಗಿಸಲು ಮುಂದಾಗಿದೆ.
ಡ್ರೋನ್ ಬಳಸುವುದರಿಂದ ಕೃಷಿ ಚಟುವಟಿಕೆಗಳಿಗೆ ವೇಗ ದೊರೆಯುವ ನಿರೀಕ್ಷೆಯಿದೆ. ಆಧುನಿಕ ತಂತ್ರಜ್ಞಾನದ ಡ್ರೋನ್ ಯಂತ್ರವನ್ನು ಸಾಮಾನ್ಯವಾಗಿ ಭದ್ರತಾ ಕಾರ್ಯಗಳಿಗೆ ಬಳಸಲಾಗುತ್ತದೆ. ಸಬ್ ಮಿಷನ್ ಅಗ್ರಿಕಲ್ಚರ್ ಮೆಕ್ಯಾನಿಸಂ ಕಾರ್ಯಕ್ರಮದಡಿ ಮೂರು ಡ್ರೋನ್ಗಳನ್ನು ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಬಳಸಲು ಅವಕಾಶ ದೊರೆತಿದೆ.
ರಾಯಚೂರು, ಕಲಬುರಗಿ ಮತ್ತು ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರಗಳಿಗೆ ತಲಾ ಒಂದು ಡ್ರೋನ್ ವಿತರಿಸಲು ನಿರ್ಧರಿಸಲಾಗಿದೆ. ತಲಾ 23 ಕೆ.ಜಿ. ತೂಕದ ಡ್ರೋನ್ಗಳು ಬ್ಯಾಟರಿ ಮೂಲಕ 20 ಲೀಟರ್ ಕ್ರಿಮಿನಾಶಕ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿವೆ. 21 ನಿಮಿಷ ಕಾರ್ಯ ನಿರ್ವಹಿಸುವ ಬ್ಯಾಟರಿ ಹೊಂದಿರುವ ಈ ಡ್ರೋನ್ಗಳು, ಪ್ರತಿ ನಿಮಿಷಕ್ಕೆ 3 ಲೀಟರ್ ಕ್ರಿಮಿನಾಶಕ ಸಿಂಪಡಣೆ ಮಾಡುವ ಸಾಮರ್ಥ್ಯ ಹೊಂದಿವೆ ಎಂದು ಕೃಷಿ ವಿಶ್ವ ವಿದ್ಯಾಲಯದ ಮೂಲಗಳು ತಿಳಿಸಿವೆ.

ಈ ಡ್ರೋನ್ ವಿಶೇಷತೆ ಏನು?
ತಲಾ 10 ಲಕ್ಷ ರೂಪಾಯಿ ಅಂದಾಜು ಮೊತ್ತದ ಡ್ರೋನ್ ಯಂತ್ರಗಳು ರಾಯಚೂರು ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕ ಬಳಕೆಗೆ ಸನ್ನದ್ಧವಾಗಲಿವೆ. ರಾಯಚೂರಿನಲ್ಲಿ ಮಿಶ್ರ ಬೆಳೆ, ಕಲಬುರಗಿಯಲ್ಲಿ ತೊಗರಿ ಹಾಗೂ ಗಂಗಾವತಿಯಲ್ಲಿ ಭತ್ತದ ಬೆಳೆಗೆ ಕ್ರಿಮಿನಾಶಕ ಸಿಂಪಡಣೆಗೆ ಈ ಡ್ರೋನ್ಗಳನ್ನು ಬಳಸಲು ನಿರ್ಧರಿಸಲಾಗಿದೆ.
ಡ್ರೋನ್ಗಳನ್ನು ಬಳಸಿ ಬೆಳೆಗಳಿಗೆ ಮೇಲ್ಭಾಗದಿಂದ ಕ್ರಿಮಿನಾಶಕ ಸಿಂಪಡಿಸಲಾಗುತ್ತದೆ. ಈ ಮೂಲಕ ಕೀಟನಾಶಕಕ್ಕೆ ಡ್ರೋನ್ ವ್ಯವಸ್ಥೆ ನೆರವಾಗಲಿದೆ. ಎತ್ತರದಲ್ಲಿ ಬೆಳೆಯುವ ಬೆಳೆಗಳಿಗೆ ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಣೆ ಪರಿಣಾಮಕಾರಿ ಆಗಿದೆ. ಭವಿಷ್ಯದಲ್ಲಿ ಈ ತಂತ್ರಜ್ಞಾನ ಸಾಕಷ್ಟು ಉಪಯೋಗಕ್ಕೆ ಬರಲಿದೆ. ಅಷ್ಟೇ ಅಲ್ಲದೆ ಹಣ ಮತ್ತು ಸಮಯ ಉಳಿಯಲಿದೆ ಎಂಬ ವಿಶ್ವಾಸವಿದೆ. ಕೇಂದ್ರದ ಐಸಿಎಆರ್ನಿಂದ ರಾಯಚೂರು ಕೃಷಿ ವಿಶ್ವ ವಿದ್ಯಾಲಯಕ್ಕೆ ಮೂರು ಡ್ರೋನ್ಗಳು ಮಂಜೂರಾಗಿದೆ.
ರಾಯಚೂರು, ಗಂಗಾವತಿ ಮತ್ತು ಕಲಬುರಗಿ ಕೃಷಿ ವಿಜ್ಞಾನ ಕೇಂದ್ರಗಳಿಗೆ ಡ್ರೋನ್ಗಳನ್ನು ಒದಗಿಸಲಾಗುವುದು. ಇವುಗಳನ್ನು ರೈತರಿಗೆ ಪ್ರಾಯೋಗಿಕ ಮಾಹಿತಿ ನೀಡಲು ಬಳಸಲಾಗುತ್ತದೆ. ಡ್ರೋನ್ ಬಳಸಿ ಕ್ರಿಮಿನಾಶಕ ಸಿಂಪಡಣೆ ಸುಲಭವಾಗಲಿದೆ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಕೆ.ಎನ್. ಕಟ್ಟಿಮನಿ ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications