ED Raid: ಬಸನಗೌಡ ದದ್ದಲ್ ನಿವಾಸದ ಮೇಲೆ ಇಡಿ ದಾಳಿ
ರಾಯಚೂರು ಜುಲೈ 10: ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದ ಮೇಲೆ ಬೆಳಿಗ್ಗೆ 7 ಗಂಟೆಗೆ ದಾಳಿ ಮಾಡಿದ್ದು, ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮಂಗಳವಾರ ಎಸ್ ಐಟಿ ಅಧಿಕಾರಿಗಳು ದದ್ದಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇವತ್ತು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಇದೇ ಅವಧಿಯಲ್ಲೇ 18 ದಾಳಿ ನಡೆಸಿರುವ ಮಾಹಿತಿ ಇದೆ.

ಜೊತೆಗೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕ ಬಸನಗೌಡ ದದ್ದಲ್ ಬೆಂಗಳೂರು ನಿವಾಸದಲ್ಲಿ ಉಳಿದುಕೊಂಡಿದ್ದು, ನಗರದ ಮನೆಯಲ್ಲಿ ಅವರ ಪತ್ನಿ & ಅಳಿಯ ಸೇರಿ ಕೆಲಸಗಾರರು ಮಾತ್ರ ಇದ್ದರು.
ಅಧಿಕಾರಿಗಳು ದದ್ದಲ್ ಅಳಿಯ ಚನ್ನಬಸವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಅವರನ್ನು ಒಂಟಿಯಾಗಿ ಬಿಡದೆ ವಿಚಾರಣೆ ಮಾಡುತ್ತಿದ್ದಾರೆ. ಅಧಿಕಾರಿಗಳು ಮನೆಯ ಸದಸ್ಯರ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ ಬಸನಗೌಡ ದದ್ದಲ್ ರ ಕಾರುಗಳನ್ನು ಕೂಡ ಶೋಧಿಸಲಾಗಿದೆ.
ಬಸನಗೌಡ ದದ್ದಲ್ ಬೆಂಗಳೂರು ನಿವಾಸದಲ್ಲಿ ಉಳಿದುಕೊಂಡಿದ್ದು, ನಗರದ ಮನೆಯಲ್ಲಿ ಅವರ ಪತ್ನಿ & ಅಳಿಯ ಸೇರಿ ಕೆಲಸಗಾರರು ಮಾತ್ರ ಇದ್ದರು.
ಅಧಿಕಾರಿಗಳು ದದ್ದಲ್ ಅಳಿಯ ಚನ್ನಬಸವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಅವರನ್ನು ಒಂಟಿಯಾಗಿ ಬಿಡದೆ ವಿಚಾರಣೆ ಮಾಡುತ್ತಿದ್ದಾರೆ. ಅಧಿಕಾರಿಗಳು ಮನೆಯ ಸದಸ್ಯರ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ ಬಸನಗೌಡ ದದ್ದಲ್ ರ ಕಾರುಗಳನ್ನು ಕೂಡ ಶೋಧಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications