ಬಂಗಾರಪ್ಪನವರಂತೆ ನಿರ್ಧಾರ ತೆಗೆದುಕೊಂಡರೆ ಸಿಎಂ ಬೆನ್ನಿಗೆ ನಾವು ನಿಲ್ಲುತ್ತೇವೆ- ಮಧು ಬಂಗಾರಪ್ಪ
ರಾಯಚೂರು, ಸೆಪ್ಟೆಂಬರ್ 25: ಕಾವೇರಿ ವಿಚಾರದಲ್ಲಿ ಹಿಂದಿನ ಸಿಎಂ ಬಂಗಾರಪ್ಪನವರು ಕೈಗೊಂಡಿದ್ದ ದಿಟ್ಟ ನಿರ್ಧಾರವನ್ನೇನಾದರೂ ಇಂದಿನ ಸಿಎಂ ಸಿದ್ದರಾಮಯ್ಯ ಕೈಗೊಂಡರೆ, ಮುಂದೆ ಒದಗುವ ಎಲ್ಲಾ ಕಷ್ಟಕರ ಸಂದರ್ಭಗಳಲ್ಲಿ ನಾವು ಸಿಎಂ ಬೆನ್ನಿಗೆ ನಿಲ್ಲುತ್ತೇವೆ ಎಂದು ಮಾಜಿ ಸಿಎಂ ಬಂಗಾರಪ್ಪನವರ ಪುತ್ರ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಕಾವೇರಿ ಸಮಸ್ಯೆಯು ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಬಂಗಾರಪ್ಪನವರ ಕಾಲದ ಕಾನೂನು ಬೇರೆ ಈಗಿನ ಕಾನೂನು ಬೇರೆ. ಆದರೆ, ಅಂದು ಸಿಎಂ ಆಗಿದ್ದ ಬಂಗಾರಪ್ಪನವರು ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು. ಈಗೇನಾದರೂ ನಮ್ಮ ಸಿಎಂ ಸಿದ್ದರಾಮಯ್ಯನವರು, ಅಂದು ಬಂಗಾರಪ್ಪನವರು ಕೈಗೊಂಡಿದ್ದ ನಿರ್ಧಾರವನ್ನೇ ಕೈಗೊಂಡರೆ ನಾವು ಸಿಎಂ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಹೇಳಿದರು.

1991ರಲ್ಲಿ ಬಂಗಾರಪ್ಪನವರು ಸಿಎಂ ಆಗಿದ್ದಾಗಲೂ, ಕರ್ನಾಟಕಕ್ಕೆ ಇಂಥದ್ದೇ ಪರಿಸ್ಥಿತಿ ಬಂದೊಂದಗಿತ್ತು. ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿದ್ದಾಗಲೇ ಕಾವೇರಿ ಪ್ರಾಧಿಕಾರವು ತಮಿಳುನಾಡಿಗೆ 205 ಟಿಎಂಸಿ ನೀರು ಬಿಡುವಂತೆ ಆದೇಶಿಸಿತ್ತು. ಆದರೆ,ಇದರ ವಿರುದ್ಧ ಬಂಗಾರಪ್ಪ ಸೆಡ್ಡು ಹೊಡೆದರಲ್ಲದೆ, ತಮಿಳುನಾಡಿಗೆ ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದು ಘೋಷಿಸಿದ್ದರು. ಜೊತೆಗೆ, ಪ್ರಾಧಿಕಾರದ ಸೂಚನೆಯಂತೆ ನೀರು ಬಿಡದಿರಲು ಸುಗ್ರೀವಾಜ್ಞೆ ಹೊರಡಿಸಿದರು. ಆನಂತರ, ಈ ವಿಚಾರವನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ವರ್ಗಾಯಿಸಿತ್ತು.
ಸಿದ್ದರಾಮಯ್ಯನವರು ಆಗ ವಿರೋದ ಪಕ್ಷದಲ್ಲಿದ್ದರು. ಬಂಗಾರಪ್ಪನವರು ಪ್ರಾಧಿಕಾರದ ಸೂಚನೆಯ ವಿರುದ್ಧ ಕ್ಯಾಬಿನೆಟ್ನಲ್ಲಿ ಸುಗ್ರೀವಾಜ್ಞೆ ತಂದಿದ್ದನ್ನು ಸಿದ್ದರಾಮಯ್ಯನವರೇ ವಿರೋಧಿಸಿದ್ದರು. ಪ್ರಾಧಿಕಾರದ ವಿರುದ್ದ ಹೋಗಿದ್ದಕ್ಕೆ ಹೈ ಕೋರ್ಟ್ಲ್ಲಿ ಆಗ ನಮಗೆ ಛೀಮಾರಿ ಹಾಕಿದ್ದರು. ಅಷ್ಟರೊಳಗೆ ನಮ್ಮ ತಂದೆಯವರು ಏನೇನ್ ಮಾಡಬೇಕೋ ಮಾಡಿ ಮುಗಿಸಿಬಿಟ್ಟಿದ್ದರು ಎಂದರು.

ಮಾತು ಮುಂದುವರಿಸಿದ ಅವರು, ಅಂದಿನ ಕಾಲ ಬೇರೆ, ಇಂದಿನ ಕಾಲ ಬೇರೆ. ಈಗ ಸಿದ್ದರಾಮಯ್ಯನವರು ನಮ್ಮ ತಂದೆಯವರು ಅನುಸರಿಸಿದ ಕ್ರಮಗಳನ್ನೇನಾದರೂ ಅನುಸರಿಸಿದರೆ, ಅದರಿಂದಾಗುವ ಎಲ್ಲಾ ಪರಿಣಾಮಗಳ ವೇಳೆ ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಹೇಳಿದರು.
ಬಂಗಾರಪ್ಪನವರನ್ನು ಸ್ಮರಿಸಿದ ಹೋರಾಟಗಾರರು
ಇತ್ತೀಚಿಗೆ ಮಂಡ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು ಮಾಧ್ಯಮಗಳ ಮುಂದೆ, ಬಂಗಾರಪ್ಪನವರಂಥ ನಾಯಕ ಹಾಗೂ ಸಿಎಂ ನಮಗೆ ಮತ್ತೆ ಸಿಗಲಿಲ್ಲ ಎಂದು ಅಲವತ್ತುಕೊಂಡಿದ್ದರು. ಬಂಗಾರಪ್ಪನವರು ಕಾವೇರಿ ನದಿ ನೀರನ್ನು ಕೊಡುವುದಿಲ್ಲ ಎಂದು ಕಾವೇರಿ ನೀರು ಹಂಚಿಕಾ ಪ್ರಾಧಿಕಾರಕ್ಕೆ ಸೆಡ್ಡು ಹೊಡೆದಿದ್ದರು ಎಂದು ಸ್ಮರಿಸಿಕೊಂಡಿದ್ದರು.
ಬಂಗಾರಪ್ಪನವರ ನಡೆಯು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಹೋಗಿತ್ತು. ಅಷ್ಟರಮಟ್ಟಿಗೆ ನಮ್ಮ ನಾಡಿನ ನೆಲ, ಜಲದ ವಿಚಾರವಾಗಿ ಬಂಗಾರಪ್ಪನವರು ಹೋರಾಡಿದ್ದರಲ್ಲದೆ, ರೈತರ ಹಿತಕ್ಕಾಗಿ ಟೊಂಕ ಕಟ್ಟಿ ನಿಂತಿದ್ದರು. ತಮ್ಮ ನಡೆಗಳಿಂದ ಎಷ್ಟೇ ತೊಂದರೆಗಳು ಬಂದರೂ ಅದನ್ನು ಲೆಕ್ಕಿಸದೇ ರೈತರ ಹಿತ ಕಾಯ್ದರು. ಅಂಥ ಸಿಎಂ ಮತ್ತೆ ಬರಲಿಲ್ಲ ಎಂದು ಹೋರಾಟಗಾರರು ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications