'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ'- ನರೇಗಾ ಯೋಜನೆಯಡಿ ಲಕ್ಷಾಂತರ ನಿರುದ್ಯೋಗಿಗಳಿಗೆ ಉದ್ಯೋಗ
ರಾಯಚೂರು ಏಪ್ರಿಲ್ 25 : ಜನರ ವಲಸೆ ತಡೆಯಲು ನರೇಗಾ ಯೋಜನೆಯಡಿ 'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ' ಪಡೆಯಿರಿ ಎಂಬ ಅಭಿಯಾನದ ಮೂಲಕ ಬರೋಬ್ಬರಿ 5,15,038 ಜನರಿಗೆ ಉದ್ಯೋಗ ನೀಡಿದ ಇಲ್ಲಿನ ಜಿ.ಪಂ. ರಾಜ್ಯದಲ್ಲಿಯೇ ನಾಲ್ಕನೇ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಮಳೆಯಾಗದ ಹಿನ್ನೆಲೆ ಈ ಬಾರಿ ತೀವ್ರ ಬರಗಾಲ ಆವರಿಸಿದ್ದು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅನೇಕ ಕುಟುಂಬಗಳು ಜೀವನ ನಿರ್ವಹಣೆಗಾಗಿ ದೂರದ ಪ್ರದೇಶಗಳಿಗೆ ಗುಳೆ ಹೋಗುತ್ತಿವೆ. ಆದರೆ, ಇದಕ್ಕೆ ಕಡಿವಾಣ ಹಾಕಲು ಮನರೇಗಾದಡಿ ಹೆಚ್ಚು ಕೆಲಸ ನೀಡಲಾಗುತ್ತಿದೆ. ಜತೆಗೆ 'ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತರಿ' ಎಂದು ಭರವಸೆ ನೀಡುತ್ತಿದೆ.

ಈ ಅಭಿಯಾನದ ಮೂಲಕ ಗ್ರಾಮೀಣ ಜನರಿಗೆ ನಿರಂತರ ಕೆಲಸ ಒದಗಿಸುವುದು, ಕೂಲಿ ಆಧಾರಿತ ಕಾಮಗಾರಿಗಳನ್ನು ಸೃಜಿಸಿ ಹೆಚ್ಚಿನ ಜನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವುದಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರತಿ ಕುಟುಂಬಗಳನ್ನು ಸಂಪರ್ಕಿಸಿ ಮನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡುವುದು, ಕೂಲಿ ಬೇಡಿಕೆ ಪಡೆಯಲು ಗ್ರಾ.ಪಂ .ಮಟ್ಟದಲ್ಲಿನ ಸ್ವ ಸಹಾಯ ಸಂಘದ ಸದಸ್ಯರು, ಯುವಕ ಸಂಘಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ರೈತ ಸಂಘಗಳು, ಕಾಯಕ ಬಂಧುಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ.
ಜಿಲ್ಲೆಯಲ್ಲಿ 3 ಲಕ್ಷ 55 ಸಾವಿರ ಕೂಲಿ ಕಾರ್ಮಿಕರು ಹೆಸರು ನೋಂದಾಯಿಸಿದ್ದಾರೆ. ಈ ಪೈಕಿ 5 ಲಕ್ಷ 15 ಸಾವಿರ ಕೂಲಿ ಕಾರ್ಮಿಕರು ಸಕ್ರಿಯವಾಗಿದ್ದು, ಕಳೆದ 22 ದಿನದಲ್ಲಿ 5 ಲಕ್ಷ 15 ಸಾವಿರದ ಕಾರ್ಮಿಕರಿಗೆ ಕೆಲಸ ನೀಡಿ 12 ಕೋಟಿ 92 ಲಕ್ಷ ರೂ. ಪಾವತಿಸಲಾಗಿದೆ.
ಬೇಸಿಗೆ ನಿಮಿತ್ತ ಮಹಿಳೆಯರಿಗೆ ಶೇ. 40 ರಷ್ಟು ಮತ್ತು ಪುರುಷರಿಗೆ ಶೇ. 30ರಷ್ಟು ಕೆಲಸದಲ್ಲಿ ವಿನಾಯಿತಿ ಸಹ ನೀಡಲಾಗುತ್ತಿದೆ. ಪ್ರಸ್ತುತ ಕೂಲಿ 316 ರೂ. ನಿಂದ 349 ಕ್ಕೆ ಹೆಚ್ಚಿಸಲಾಗಿದೆ. ವಿಶೇಷವಾಗಿ ಜಲ ಸಂರಕ್ಷಣೆ ಕಾಮಗಾರಿಗಳಾದ ಕೆರೆ ಹೂಳೆತ್ತುವುದು, ಬದು ನಿರ್ಮಾಣ, ಚೆಕ್ಡ್ಯಾಂ ನಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎನ್ನುತ್ತದೆ ಜಿಪಂ. ಜಿಲ್ಲೆಯಲ್ಲಿ ಪ್ರಸ್ತುತ ಉಷ್ಣಾಂಶ ಶೇ. 41ರಷ್ಟಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ನೆರಳು ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆ ಅಲ್ಲದೆ ಅಗತ್ಯವಿದ್ದರೆ ಆಂಬ್ಯುಲೆನ್ಸ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ.
ಇದರಿಂದ ಕಾರ್ಮಿಕರು ನಿಶ್ಚಿಂತೆಯಿಂದ ಕೆಲಸ ಮಾಡುವಂತಾಗಿದೆ. ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಮನರೇಗಾ ಯೋಜನೆಯಡಿ ಸ್ಥಳೀಯವಾಗಿ ಅಕುಶಲ ಕೆಲಸ ಒದಗಿಸಲು ಹಾಗೂ ವಿಶೇಷಚೇತನರು, ಮಹಿಳೆಯರು, ಹಿರಿಯ ನಾಗರಿಕರು, ಲಿಂಗತ್ವ ಅಲ್ಪಸಂಖ್ಯಾತರು, ದುರ್ಬಲ ವರ್ಗಗಳನ್ನು ಕರೆತರಲು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ರಾಯಚೂರು ಜಿಪಂ ಯೋಜನಾ ನಿರ್ದೇಶಕ ವಿ .ಪ್ರಕಾಶ ಹೇಳಿದರು.
ಗುಳೆ ತಡೆದು ಹೆಚ್ಚು ಕೂಲಿ ಕಾರ್ಮಿಕರಿಗೆ ಸ್ವ ಗ್ರಾಮದಲ್ಲಿಯೇ ಕೆಲಸ ನೀಡುವ ಮೂಲಕ ರಾಜ್ಯದಲ್ಲಿಯೇ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜಾರಿ ಮಾಡಲಾಗುತ್ತಿದೆ. ಪ್ರಸ್ತುತ ಆರ್ಥಿಕ ವರ್ಷ ಆರಂಭವಾಗಿ 22 ದಿನ ಪೂರ್ಣಗೊಂಡಿದ್ದು, ಹೆಸರು ನೋಂದಾಯಿಸಿದ ಕೂಲಿ ಕಾರ್ಮಿಕರಿಗೆ ಬೇಡಿಕೆಗೆ ತಕ್ಕಂತೆ ಕೂಲಿ ಕೆಲಸ ನೀಡಲಾಗಿದೆ. ಒಟ್ಟಾರೆ, ಹೆಚ್ಚು ಮಾನವ ದಿನ ಸೃಜಿಸುವ ಮೂಲಕ ರಾಯಚೂರು ಜಿಪಂ ರಾಜ್ಯದಲ್ಲಿ4ನೇ ಸ್ಥಾನದಲ್ಲಿದೆ ಎಂದು ರಾಯಚೂರು ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಹೇಳಿದರು
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications