ರಾಯಚೂರು ಜಿಲ್ಲೆಯ ಈ ಭಾಗದ ಜನರಿಗೆ ಕುಡಿಯಲು ಕೆಮಿಕಲ್ ನೀರೇ ಗತಿ, ಏಕೆ?, ಇಲ್ಲಿದೆ ವಿವರ
ರಾಯಚೂರು, ಜೂನ್, 27: ತಾಲೂಕಿನ ಕೃಷ್ಣಾ ನದಿ ಸಮೀಪವಿರುವ 30-40 ಕೆಮಿಕಲ್ ಕಾರ್ಖಾನೆಗಳು ವೇಸ್ಟೇಜ್ ನೀರನ್ನು ನದಿಗೆ ಬಿಡುತ್ತಿದ್ದಾರೆ. ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.
ಕೃಷ್ಣಾ ನದಿಯ ನೀರು ಶಕ್ತಿನಗರದಿಂದ ಕುರ್ವಾಕುಲ, ನಾರದಗಡ್ಡೆ ಮೂಲಕ ತೆಲಂಗಾಣದ ಝೂರಾಲ್ ಜಲಾಶಯ ಸೇರಲಿದೆ. ನದಿಯ ಸರಹದ್ದಿನ ಗ್ರಾಮಗಳ ಜನರು ಕುಡಿಯಲು ಇದೇ ನೀರನ್ನು ಬಳಸುತ್ತಿದ್ದಾರೆ. ಹೀಗಾಗಿ ಇಲ್ಲಿನ ಜನರು ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ.

ಶಕ್ತಿನಗರ ಬಳಿಯಿರುವ ಕೆಮಿಕಲ್ ಕಾರ್ಖಾನೆಗಳು ಬಿಡುವ ವೇಸ್ಟೇಜ್ ನೀರು ಕೃಷ್ಣಾ ನದಿ ಸೇರುತ್ತಿದ್ದು, ಇಲ್ಲಿಂದಲೇ ರಾಯಚೂರು ನಗರ ಮತ್ತು ರಾಯಚೂರು ಗ್ರಾಮೀಣ ಭಾಗದ ಕೆಲ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ನದಿ ನೀರಿನಲ್ಲಿ ಕಾರ್ಖಾನೆಗಳ ಕೆಮಿಕಲ್ ಸೇರುವುದರಿಂದ ಜೀವಜಲವೇ ಜನರಿಗೆ ವಿಷವಾಗಿ ಪರಿಣಮಿಸಿದೆ. ಪರಿಸರ ಮಾಲಿನ್ಯ ಹಾಗೂ ನಿಯಂತ್ರಣ ಇಲಾಖೆಯ ತಜ್ಞರು ಈ ಬಗ್ಗೆ ವರದಿ ನೀಡಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.
ಸ್ಥಳೀಯರಿಂದ ತೀವ್ರ ಆಕ್ರೋಶ
ವಿಷಕಾರಿ ಕೆಮಿಕಲ್ ವೇಸ್ಟೇಜ್ ನೀರನ್ನೇ ಕುಡಿಯಲು ಪೂರೈಸಲಾಗುತ್ತಿದ್ದು, ಇದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 30 ರಿಂದ 40ಕ್ಕೂ ಹೆಚ್ಚು ಕೆಮಿಕಲ್ ಕಾರ್ಖಾನೆಗಳು ಅಕ್ರಮವಾಗಿ ಚರಂಡಿಗಳ ಮೂಲಕ ಹಳ್ಳಗಳಿಗೆ ಕೆಮಿಕಲ್ ವೇಸ್ಟೇಜ್ ನೀರು ಬಿಡುತ್ತಿವೆ. ಇದರಿಂದ ಕೃಷ್ಣಾ ನದಿ ನೀರು ಕಲುಷಿತಗೊಳ್ಳುತ್ತಿದೆ. ಇದೇ ನೀರನ್ನೇ ನಗರಸಭೆ ಮತ್ತು ಆಯಾ ಗ್ರಾಮಗಳಿಗೆ ಪಂಚಾಯಿತಿ ಕುಡಿಯಲು ಪೂರೈಸುತ್ತಿದೆ.
ರಾಯಚೂರು ತಾಲೂಕಿನ ವಡ್ಲೂರು ಗ್ರಾಮದ ಸುತ್ತಲಿನ ಕೆಮಿಕಲ್ ಕಾರ್ಖಾನೆಗಳು ಬಿಡುವ ವಿಷಕಾರಿ ವೇಸ್ಟೇಜ್ ನೀರು ಕೃಷ್ಣಾ ನದಿ ಸೇರಲಿದೆ. ತಾಲೂಕಿನ ತೆಲಂಗಾಣ ಗಡಿ ಭಾಗದ ಗುಂಜಳ್ಳಿ, ಹನುಮನದೊಡ್ಡಿ, ವಡ್ಲೂರು ಸೇರಿ ನಾಲ್ಕೈದು ಹಳ್ಳಿಗಳಿಗೆ ಇದೇ ನೀರನ್ನು ಪೂರೈಸಲಾಗುತ್ತದೆ. ಈ ಕುರಿತು ಹಲವು ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ಕೆಮಿಕಲ್ ಮಿಶ್ರಿತ ನೀರು ಸೇವನೆಯಿಂದ ಹಲವರು ಕ್ಯಾನ್ಸರ್, ಟಿಬಿ, ಥೈರಾಯ್ಡ್ ರೋಗಗಳಿಂದ ಬಳಲುತ್ತಿರುವುದು ಕಂಡುಬಂದಿದೆ.
ಸಾವನ್ನಪ್ಪುತ್ತಿರುವ ಪ್ರಾಣಿಗಳು
ಕಾರ್ಖಾನೆಗಳು ಹಳ್ಳಕ್ಕೆ ಬಿಡುವ ಕೆಮಿಕಲ್ ವೇಸ್ಟೇಜ್ ನೀರು ಕುಡಿದು ಕೇವಲ ಜನರು ಮಾತ್ರವಲ್ಲದೆ, ಜಾನುವಾರುಗಳು, ಮೀನುಗಳು, ಕುರಿ ಸೇರಿದಂತೆ ಇತರೆ ಪ್ರಾಣಿಗಳು ಸಹ ಸಾವನ್ನಪ್ಪುತ್ತಿವೆ. ಹೊಲಗಳಿಗೂ ಇದೇ ವಿಷಕಾರಿ ನೀರು ಹರಿಯುತ್ತಿದ್ದು, ಇದರಿಂದ ಇಳುವರಿ ಕುಂಠಿತಗೊಂಡಿದೆ.
ಕಠಿಣ ಕ್ರಮ ಕೈಗೊಳ್ಳಬೇಕಿದೆ
ರಾಯಚೂರು ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರದೇಶದಲ್ಲಿ ಅತಿ ಹೆಚ್ಚು ಫಾರ್ಮಾ ಕಂಪನಿಯಿಂದಲೇ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹಳ್ಳ ಸೇರುತ್ತಿದೆ. ಈ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆಗೆ ಮನವಿ ಸಲ್ಲಿಕೆಯಾಗಿದ್ದರೂ ಇದುವರೆಗೂ ಕ್ರಮ ಜರುಗಿಸಿಲ್ಲ. ಆದ್ದರಿಂದ ಜಿಲ್ಲಾಡಳಿತ ಇನ್ನಾದರೂ ಕಠಿಣ ಕ್ರಮಕೈಗೊಳ್ಳಬೇಕಿದೆ ಎನ್ನುವುದು ಇಲ್ಲಿನ ಜನರ ಆಗ್ರಹವಾಗಿದೆ.
ಶಕ್ತಿ ನಗರ ಬಳಿಯ ಕಾರ್ಖಾನೆಗಳು ಅಕ್ರಮವಾಗಿ ಚರಂಡಿಗಳ ಮೂಲಕ ಹಳ್ಳಗಳಿಗೆ ಕೆಮಿಕಲ್ ವೇಸ್ಟೇಜ್ ನೀರು ಬಿಡುತ್ತಿವೆ. ಚರಂಡಿ ನೀರು ಕೃಷ್ಣಾ ನದಿ ಸೇರುವುದರಿಂದ ಆ ನೀರು ಕಲುಷಿತಗೊಳ್ಳುತ್ತಿದೆ. ಇನ್ನು ಈ ಬಗ್ಗೆ ದೂರುಗಳು ಬಂದಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಕ್ರಮಕೈಗೊಳ್ಳಲು ಆದೇಶಿಸುತ್ತೇನೆ ಎಂದು ಜಿಲ್ಲಾಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications