ಸಿಂಧನೂರು ಕ್ಷೇತ್ರಕ್ಕೆ ಕೊನೆಗೂ ಲಭಿಸಿತು ಸಚಿವ ಸ್ಥಾನದ ಭಾಗ್ಯ!
ರಾಯಚೂರು, ಮೇ.06 : ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡಗೆ ಸಚಿವ ಸ್ಥಾನ ಲಭಿಸಿರುವ ಹಿನ್ನೆಲೆಯಲ್ಲಿ ಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇಲ್ಲಿಯವರೆಗೂ ಸಿಂಧನೂರಿನಿಂದ ಒಬ್ಬರೂ ಸಚಿವರಾಗಿಲ್ಲ. ಇದೀಗ ಮೊದಲ ಬಾರಿಗೆ ಸಿಂಧನೂರು ಕ್ಷೇತ್ರಕ್ಕೆ ಮಂತ್ರಿಗಿರಿ ಪಟ್ಟ ಒಲಿದಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಸಮಾರಂಭ ಬುಧವಾರ (ಜೂನ್ 06) ದಂದು ರಾಜಭವನದಲ್ಲಿ ನಡೆದಿದ್ದು, ನೂತನ ಸಚಿವರುಗಳಿಗೆ ರಾಜ್ಯಪಾಲ ವಜುಭಾಯಿ ವಾಲ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ಸಿನಿಂದ 15 ಹಾಗೂ ಜೆಡಿಎಸ್ ನಿಂದ 8 ಮತ್ತು ಕೆಪಿಜೆಪಿ 1 ಹಾಗೂ ಬಹುಜನ ಸಮಾಜವಾದಿ ಪಕ್ಷದಿಂದ 1 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಜೆಡಿಎಸ್ ನಿಂದ ಎಚ್ ಡಿ ರೇವಣ್ಣ, ಬಂಡೆಪ್ಪ ಕಾಶೆಂಪೂರ, ಜಿಟಿ ದೇವೇಗೌಡ, ಡಿಸಿ ತಮ್ಮಣ್ಣ, ಎಂಸಿ ಮನಗೂಳಿ, ಎಸ್ ಆರ್ ಶ್ರೀನಿವಾಸ್, ವೆಂಕಟರಾವ್ ನಾಡಗೌಡ, ಸಿಎಸ್ ಪುಟ್ಟರಾಜು, ಸಾ.ರ ಮಹೇಶ್ ಅವರಿಗೆ ಸಚಿವ ಸ್ಥಾನ ಲಭಿಸಿದೆ.












Click it and Unblock the Notifications