ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.48 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ
ರಾಯಚೂರು, ಆಗಸ್ಟ್ 18: ರಾಯಚೂರು ಜಿಲ್ಲೆಯ ಬಸವ ಸಾಗರ ಜಲಾಶಯ(ನಾರಾಯಣಪುರ ಜಲಾಶಯ) ದಿಂದ ಕೃಷ್ಣಾ ನದಿಗೆ 2.48 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ನಾರಾಯಣಪುರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಜನತೆಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
ನೆರೆಯ ರಾಜ್ಯ ಮಹಾರಾಷ್ಟ್ರ ಮತ್ತು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಸದ್ಯ ಬಸವ ಸಾಗರ ಜಲಾಶಯಕ್ಕೆ 2.5 ಲಕ್ಷ ಕ್ಯೂಸೆಕ್ಸ್ ನೀರು ಒಳ ಹರಿವಿದ್ದು, ಹೊರ ಹರಿವು 2.48 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಗರಿಷ್ಠ ಜಲಾಶಯದ ಮಟ್ಟ 492.25 ಮೀಟರ್ ಇದ್ದು, ಸದ್ಯ ೪೮೯.೯೫ ಮೀಟರ್ ನೀರಿದೆ. ಈ ಜಲಾಶಯದಲ್ಲಿ 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಸದ್ಯ 23.82 ಟಿಎಂಸಿ ನೀರು ಸಂಗ್ರಹವಿದೆ.
ಕೃಷ್ಣ ನದಿ ನೀರಿನಲ್ಲಿ ಕೊಚ್ಚಿ ಬಂದಿರುವ ಜೋಡೆತ್ತುಗಳು ಪ್ರವಾಹದಲ್ಲಿ ಈಜಿ ದಡ ಸೇರಿವೆ. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ರೈತರಿಂದ ಎತ್ತುಗಳ ರಕ್ಷಣೆ ಮಾಡಲಾಗಿದೆ.
ಮಹಾರಾಷ್ಟ್ರ ಘಟ್ಟಪ್ರದೇಶದಲ್ಲಿ ವರುಣನ ಅಬ್ಬರ ಮುಂದುವೆರೆದಿದ್ದು, ಅಲ್ಲಿನ ಎಲ್ಲ ಜಲಾಶಯಗಳು ಭರ್ತಿಗೊಂಡಿವೆ. ಹೀಗಾಗಿ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications