ರಾಯಚೂರಿನ ಏಳು ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ
ರಾಯಚೂರು, ಅಕ್ಟೋಬರ್ 02: ಸ್ವಚ್ಛತೆ , ನೈರ್ಮಲ್ಯ , ಕಂದಾಯ ವಸೂಲಿ ಸೇರಿ ಗ್ರಾಮೀಣ ಅಭಿವೃದ್ಧಿ ಇತರ ವಲಯಗಳಲ್ಲಿ ಮಹತ್ತರ ಸಾಧನೆ ತೋರಿದ ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳು , ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌ ರವಿಸಲಾಗುತ್ತಿದೆ. ಪುರಸ್ಕೃತ ಗ್ರಾಮ ಪಂಚಾಯಿತಿಗಳಿಗೆ ತಲಾ 5ಲಕ್ಷ ರೂಪಾಯಿ ಪ್ರೋತ್ಸಾಹ ಧನ ದೊರೆಯಲಿದ್ದು ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ.

ಜಿಲ್ಲೆಯ 2 ತಾಲೂಕಗಳಿಂದ ತಲಾ ಒಂದು ಗ್ರಾಮ ಪಂಚಾಯಿತಿ ಅನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಬ್ಯಾಗವಾಟ , ಕಾಡ್ಲೂರು , ಲಿಂಗಸೂಗೂರು, ಚಿತ್ತಾಪುರ , ತಿಡಿಗೋಳ , ರಾಮದುರ್ಗ , ಬಾಗಲವಾಡ , ಪಾಮನಕಲ್ಲೂರು ಗ್ರಾಮ ಪಂಚಾಯಿತಿಗಳು 2022-23ನೇ ಸಾಲಿನ ಪ್ರಶಸ್ತಿ ಮುಡಿಗೇರಿಸಿಕೊಂಡಿವೆ.
ಗ್ರಾಮ ಪಂಚಾಯಿತಿಗಳು ಶಾಸನ ಬದ್ಧ ಕಾರ್ಯಗಳ ಉತ್ತಮ ನಿರ್ವಹಣೆ , ಹಣಕಾಸಿನ ನಿರ್ವಹಣೆ , 15ನೇ ಹಣಕಾಸು ಆಯೋಗದಡಿ ಬಿಡುಗಡೆಯಾದ ಅನುದಾನದ ಬಳಕೆ , ಜಮಾ ಬಂಧಿ , ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನ , ಮೂಲ ಸೌಕರ್ಯಗಳ ವಿಭಾಗದಲ್ಲಿ ಕುಡಿಯುವ ನೀರು , ಬೀದಿ ದೀಪ , ವಸತಿ ಯೋಜನೆ , ನೈರ್ಮಲಿಕರಣ , ತ್ಯಾಜ್ಯ ನಿರ್ವಹಣೆ , ನಮ್ಮ ಗ್ರಾಮ ಯೋಜನೆ , ಯೋಜನೆಗಳ ಅನುಷ್ಠಾನ , ದಾಖಲಾತಿ ನಿರ್ವಹಣೆ , ತೆರಿಗೆ ವಸೂಲಾತಿ , ಜನಸ್ನೇಹಿ ಪಂಚಾಯಿತಿ ಆಡಳಿತ ವ್ಯವಸ್ಥೆ , ಗ್ರಾಮಸಭೆಗಳ ಆಯೋಜನೆ , ಸರಕಾರಿ ಸೇವೆಗಳ ಒದಗಿಸುವಿಕೆ ಸೇರಿ ಇತರ ಸೇವಾ ವಲಯಗಳಲ್ಲಿ ಒಟ್ಟು 300 ಅಂಕಗಳ ಪ್ರಶ್ನಾವಳಿಗೆ ತಾಲೂಕುವಾರು ದಾಖಲಾತಿ ಪರಿಶೀಲಿಸಿ ಅದರ ಆಧಾರದಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸುವ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಪಂಚಾಯಿತಿ ರಾಜ್ಯ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದಾರೆ.
ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಲಭ್ಯವಿರುವ ಸಂಪನ್ಮೂಲವನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ , ಮೂಲ ಸೌಕರ್ಯಗಳ ಅಭಿವೃದ್ಧಿ ,ಆಡಳಿತದಲ್ಲಿ ಸ್ಮಧಾರಣೆ ಹಾಗೂ ಸ್ವಚ್ಛತೆ ಸಾಧನೆಗಾಗಿ ಕಾಡ್ಲೂರು ಗ್ರಾಮ ಪಂಚಾಯಿತಿಗೆ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ.

ಬೇವಿನ ಬೆಂಚ್, ಕರೇಕಲ್ , ಅರಷಣಿಗಿ , ಗುರ್ಜಾಪುರ , ರಂಗಾಪುರ ಕಾಡ್ಲೂರು ಗ್ರಾಮ ಸೇರಿ ಏಳು ಗ್ರಾಮಗಳು ಒಳಪಟ್ಟಿವೆ. ಒಟ್ಟು 1,510 ಕುಟುಂಬಗಳಿದ್ದು 3,050 ಜನಸಂಖ್ಯೆ ಇದೆ. ಗ್ರಾಮಸಭೆ , ಸಾಮಾನ್ಯ ಸಭೆಯನ್ನು ನಿಗದಿತ ಸಮಯಕ್ಕೆ ನಡೆಸುವುದು , ಅಭಿವೃದ್ಧಿ ಕಾಮಗಾರಿಗಳ ಪಾರದರ್ಶಕ , ಶೌಚಾಲಯಗಳ ನಿರ್ಮಾಣ ಮತ್ತು ಬಳಕೆ , ನರೇಗಾ ಯೋಜನೆಗೆ ಉತ್ತಮ ಪ್ರಗತಿ , ಕಂದಾಯ ವಸೂಲಿ , ಕುಡಿಯುವ ನೀರು ಪೂರೈಕೆ , ಡಿಜಿಟಲ್ ಗ್ರಥಾಲಯ ಕಟ್ಟಡ , ಅಂಗನವಾಡಿ ಕಟ್ಟಡಗಳ ನಿರ್ಮಾಣ, ಶಾಲಾ ಮಕ್ಕಳ ವಿಜ್ಞಾನಗಳ ಸಾಮಾಗ್ರಿಗಳು ನೀಡುವಲ್ಲಿ ಸಾಧನೆ ತೋರಿರುವ್ಯದರಿಂದ ಪ್ರಶಸ್ತಿ ದೊರೆತಿದೆ.
ಗ್ರಾಮ ಪಂಚಾಯಿತಿ ಪ್ರಗತಿಯ ಆಧಾರದ ಮೇಲೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯೊಂದಿಗೆ 5 ಲಕ್ಷ ರೂಪಾಯಿ ವಿಶೇಷ ಅನುದಾನ ನೀಡಲಾಗುತ್ತದೆ. ಪುರಸ್ಕಾರದಿಂದ ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇವೆ ಎಂದು ಕಾಡ್ಲೂರು ಗ್ರಾಮ ಪಂಚಾಯಿತಿ ಪಿಡಿಒ ಮಹಾಂತಮ್ಮ ಹೇಳಿದರು.
ಜಿಲ್ಲೆಯ 2 ಪಂಚಾಯಿತಿಗಳಿಗೆ ಸ್ವಚ್ಛತೆ ನೈರ್ಮಲ್ಯ , ಕಂದಾಯ ವಸೂಲಿ ಸೇರಿ ಅಭಿವೃದ್ಧಿ ಇತರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನಮ್ಮ ಜಿಲ್ಲೆಯ 2 ಗ್ರಾಮ ಪಂಚಾಯಿತಿಗಳಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ದೊರೆತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ತುಕಾರಾಂ ಪಾಂಡೆ ಹೇಳಿದರು.
ಬರ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರು ಗುರಿಗಿಂತ ಹೆಚ್ಚಿನ ಕೆಲಸ ನೀಡಿದ್ದೇವೆ. ಸ್ವಚ್ಛತೆ , ನೈರ್ಮಲ್ಯ , ಕಂದಾಯ ವಸೂಲಿ ಪಾವತಿಸುವಲ್ಲಿ ಸಾಧನೆ ತೋರಿದ ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿ.ಪ್ರಕಾಶ್ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications