ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಶಿಷ್ಟ ಜನಾಂಗಕ್ಕೆ ಶೇ 7.5 ಮೀಸಲಾತಿಗೆ ಸರ್ಕಾರ ಬದ್ಧ: ಶ್ರೀರಾಮುಲು

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಮೇ 22: "ಪರಿಶಿಷ್ಟ ಜನಾಂಗಕ್ಕೆ ಶೇ 7.5 ಮೀಸಲಾತಿ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಕೆಲವೊಂದು ಕಾನೂನು ತೊಡಕುಗಳ ಕಾರಣ ವಿಳಂಬವಾಗಿದೆ. ಸ್ವಾಮೀಜಿ ಅವರು ಮುಷ್ಕರ ನಿಲ್ಲಿಸಿ ಸಹಕಾರ ನೀಡಬೇಕು" ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, "ಎಸ್‌ಟಿ ಸಮಾಜಕ್ಕೆ ಶೇ 7.5 ಮೀಸಲಾತಿ ಕೊಡಿಸುವುದಾಗಿ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದೆ. ರಕ್ತ ಅಲ್ಲ ಅದಕ್ಕೆ ಜೀವ ಬೇಕಾದರೂ ಕೊಡುತ್ತೇನೆ. ಆದರೆ, ಕಾಂಗ್ರೆಸ್‌ನವರಿಗೆ ತಾಳ್ಮೆ ಇಲ್ಲ" ಎಂದರು.

"ಮೀಸಲಾತಿ ಕೊಟ್ಟ ಮೇಲೆ ಮುಂದೆ ಯಾವುದೇ ಕಾನೂನು ತೊಡಕು ಬರಬಾರದು ಎಂಬ ಉದೇಶದಿಂದ ಎಲ್ಲಾ ತೊಡಕುಗಳನ್ನು ನಿವಾರಿಸಿ ಈಗ ಕೊನೆಯ ಹಂತಕ್ಕೆ ಬಂದಿದ್ದೇವೆ. ನಮ್ಮ ಸರ್ಕಾರ ಇನ್ನೂ ಒಂದು ವರ್ಷ ಅಧಿಕಾರದಲ್ಲಿರುತ್ತದೆ. ಅಷ್ಟರೊಳಗೆ ನಾವು ಮಾತು ಕೊಟ್ಟಂತೆ ಮೀಸಲಾತಿ ನೀಡುತ್ತೇವೆ" ಎಂದು ತಿಳಿಸಿದರು.

Government Committed To Provide Reservation Says B Sriramulu

ಹಿಂದುಳಿದ ಜನಾಂಗಕ್ಕೆ ಬಿಜೆಪಿಯಿಂದ ನ್ಯಾಯ; "ಎಸ್‌ಟಿ ಸೇರಿದಂತೆ ಎಲ್ಲಾ ಹಿಂದುಳಿದ ಜನಾಂಗಕ್ಕೆ ಏನಾದರೂ ನ್ಯಾಯ ಸಿಕ್ಕಿದ್ದರೆ ಅದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮಾತ್ರ, ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇದ್ದಾಗ ಈ ಜನಾಂಗಕ್ಕೆ ಏನೂ‌ ಮಾಡದೇ ಈಗ ಮಾತನಾಡುತ್ತಿದ್ದಾರೆ" ಎಂದರು.

"ಸ್ವಾಮೀಜಿ ಧರಣಿ ಕುಳಿತು 100 ದಿನಗಳಗಾಗಿದೆ. ಮಸ್ಕಿಯಲ್ಲಿ ನಡೆದ ಮೀಸಲಾತಿ ಪ್ರತಿಭಟನೆಯಲ್ಲಿ ಶೇಖರಗೌಡ ಕಾಟಗಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂತಹ ಅವಘಡ ಮುಂದೆ ಆಗುವುದು ಬೇಡ" ಎಂದು ಮನವಿ ಮಾಡಿದರು.

ಪರಿಷತ್ ಚುನಾವಣೆ; ಜೂನ್ 3ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವಂತೆ ಬಿಜೆಪಿ ಕೋರ್ ಕಮಿಟಿಯಿಂದ ಮಾಜಿ ಶಾಸಕ ಪ್ರತಾಪಗೌಡ ಹೆಸರು ಹೈಕಮಾಂಡ್‌ಗೆ ಶಿಫಾರಸು ಮಾಡಿದೆ" ಎಂದು ಬಿ. ಶ್ರೀರಾಮುಲು ತಿಳಿಸಿದರು.

"ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರತಾಪಗೌಡ ಪಾಟೀಲ ತ್ಯಾಗವನ್ನು ಪಕ್ಷ ಮರೆಯುವುದಿಲ್ಲ. ಬರುವ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನ ದೊರೆಯಲಿದೆ" ಎಂದರು.

English summary
Our government committed provide reservation said transport minister B. Sriramulu at Raichur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X