ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ ಎಂದು ರೇವಣ್ಣ ಹೇಳಿದ್ದು ಯಾರಿಗೆ?
ರಾಯಚೂರು, ಫೆಬ್ರವರಿ 14: ಸಚಿವ ಆನಂದ್ಸಿಂಗ್ಗೆ ಅರಣ್ಯ ಇಲಾಖೆ ನೀಡಿದ್ದು, ಕಳ್ಳನ ಕೈಯಲ್ಲಿ ಕೀಲಿಕೈ ನೀಡಿದಂತಾಗಿದೆ ಎಂದು ಮಾಜಿ ಸಚಿವ ಎಚ್ಎಂ ರೇವಣ್ಣ ವ್ಯಂಗ್ಯವಾಡಿದ್ದಾರೆ.
ಆನಂದ್ಸಿಂಗ್ಗೆ ಅರಣ್ಯ ಖಾತೆಯೇ ಮುಂದುವರೆದರೆ ಗಣಿ ವ್ಯವಹಾರದಲ್ಲಿ ಅರಣ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುವುದರಲ್ಲಿ ಸಂಶಯವಿಲ್ಲವೆಂದರು.
ಮೈತ್ರಿ ಸರ್ಕಾರ ರೂಪಿಸಿದ್ದ ಯೋಜನೆಗಳನ್ನು ಯಡಿಯೂರಪ್ಪ ಒಂದೊಂದಾಗಿ ರದ್ದು ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದ್ದಾರೆ.

ವಿಧಾನಸಭಾ ಪ್ರತಿಪಕ್ಷ ಸ್ಥಾನಕ್ಕೆ ಬೇಗ ಅಧ್ಯಕ್ಷರ ನೇಮಕವಾಗಬೇಕು. ಸಿದ್ದರಾಮಯ್ಯನವರೇ ಅಧ್ಯಕ್ಷರಾಗಬೇಕೆ? ಅಥವಾ ಇನ್ಯಾರಾದರೂ ಆಗಬೇಕಾ? ಎಂಬುದರ ಕುರಿತು ಹಿರಿಯರ ಅಭಿಪ್ರಾಯ ಪಡೆದಿದ್ದಾರೆ. ಇನ್ನೊಂದು ವಾರದಲ್ಲಿ ನೇಮಕವಾಗಲಿದೆ ಎಂದರು.
ಶೋಷಿತ ಸಮಾಜದಲ್ಲಿ ಮಠ ಮಾಡಿದ್ದೇವೆ. ನಾಯಕ, ಕುರುಬ ಸಮಾಜ ವಿರುದ್ಧ ದಿಕ್ಕಿನಲ್ಲಿ ಹೋಗುವ ಪರಿಪಾಠ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯದ ವಿರುದ್ಧ ವಿರುದ್ಧ ಪೋಸ್ಟ್ ಹಾಕುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.
ಎಸ್ಟಿಗೆ ಇರುವ ಮೀಸಲಾತಿಯನ್ನು ಶೇ. 3ರಷ್ಟು ಹೆಚ್ಚಿಸಬೇಕಾಗಿದೆ. ಕುರುಬ, ವಾಲ್ಮೀಕಿ ಹಾಗೂ ಮಾಲೇರ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವ ಕುರಿತು ಹಿಂದೆಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರು ಕೂಡ ಸಮಾಜದಲ್ಲಿ ನೆಮ್ಮದಿಯಾಗಿರಲಿ ಎಂಬ ಆಶಯ ನಮ್ಮದು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications