ಗ್ರಾಮೀಣಾಭಿವೃದ್ಧಿಗಾಗಿ ನರೇಗಾ ಯೋಜನೆ ಈ ಜಿಲ್ಲೆಯಲ್ಲಿ ಸಹಕಾರಿಯಾಗಿದ್ದು ಹೇಗೆ?
ರಾಯಚೂರು ಫೆಬ್ರವರಿ 23: ಗ್ರಾಮೀಣಾಭಿವೃದ್ಧಿಗಾಗಿ ನರೇಗಾ ಯೋಜನೆಯು ನಿರಂತರ ಅನುದಾನಗಳನ್ನು ನೀಡಿ, ಗ್ರಾಮೀಣ ಜನರಿಗೆ ಸಹಕಾರಿಯಾಗುವ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರ ದುಡಿಯುವ ಕೈಗಳಿಗೆ ನಿರಂತರ ಕೆಲಸ ನೀಡುತ್ತಾ, ಗ್ರಾಮ ಅಭಿವೃದ್ಧಿಯಲ್ಲಿ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಿದೆ. ರಾಜ್ಯ ಸರ್ಕಾರದ 2023-24 ನೇ ಸಾಲಿನ ಆಯವ್ಯಯದಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಘೋಷಿಸಿರುತ್ತಾರೆ. ಅವುಗಳಲ್ಲಿ ಸ್ಮಶಾನ ಅಭಿವೃದ್ಧಿ ಕಾರ್ಯಕ್ರಮ ಕೂಡ ಒಂದಾಗಿದೆ.

ರಾಯಚೂರು ತಾಲೂಕಿನ ಶಾಖವಾದಿ ಗ್ರಾಮ ಪಂಚಾಯತಿಯ ಆಶ್ರಯ ಕಾಲೋನಿಯಲ್ಲಿರುವ ಸ್ಮಶಾನ ಸ್ಥಳವು ಜಾಲಿ ಕಂಟಿಗಳು ಬೆಳೆದು ಅಂತಿಮ ಸಂಸ್ಕಾರ ಮಾಡಲು, ಗ್ರಾಮದ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದರು. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ರಾಯಚೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು 2023-24 ನೇ ಸಾಲಿನಲ್ಲಿ ಸ್ಥಳ ಅವಕಾಶಗಳನ್ನು ಗುರುತಿಸಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನಗಳ ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ.
ರಾಯಚೂರು ಜಿಲ್ಲೆಯ ರಾಯಚೂರು ತಾಲೂಕಿನ ಶಾಖವಾದಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖಾಂತರ ಅಂದಾಜು ಕೂಲಿಗಾಗಿ ₹ 21 ಸಾವಿರದ 630 ರೂಪಾಯಿ, ಸಾಮಾಗ್ರಿಗಾಗಿ ₹ 2 ಲಕ್ಷ 76 ಸಾವಿರದ 639 ರೂಪಾಯಿ ಒಟ್ಟು ₹2 ಲಕ್ಷ 98 ಸಾವಿರದ 268 ರೂಪಾಯಿ ವ್ಯಯಿಸಿ, 252 ಮಾನವ ದಿನಗಳನ್ನು ಸೃಜಿಸಿದೆ.
ಶಾಖವಾದಿ ಗ್ರಾಮದ ಆಶ್ರಾಯ ಕಾಲೋನಿಯ ಸ್ಮಶಾನ ಜಾಗದಲ್ಲಿ ತುಂಬಿರುವ ಎಲ್ಲಾ ಮುಳ್ಳು ಕಂಟಿಗಳನ್ನು ತೆಗೆದು, ಭೂಮಿಯನ್ನು ಸಮತಟ್ಟು ಮಾಡಿ, ಸುತ್ತಲೂ ಕಲ್ಲುಕಂಬಗಳನ್ನು ಹಾಕಿ, ತಂತಿ ಬೇಲಿಯನ್ನು ನಿರ್ಮಿಸಿ, ಮುಂಭಾಗದಲ್ಲಿ ಉತ್ತಮವಾಗಿ ಕಾಣಲು ಅರ್ಚ ಗೇಟ್ ನ್ನು ನಿರ್ಮಾಣ ಮಾಡಿದ್ದಾರೆ.

ಶಾಖವಾದಿ ಗ್ರಾಮ ಪಂಚಾಯತಿಯ ಶಾಖವಾದಿ ಹಾಗೂ ಕೂಡ್ಲೂರು ಗ್ರಾಮದಲ್ಲಿ ಎರಡು ಉತ್ತಮವಾದ ಸ್ಮಶಾನ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಿಂದಾಗಿ, ಮುಕ್ತಿಧಾಮದಲ್ಲಿ ಅಂತಿಮ ಸಂಸ್ಕಾರ ಮಾಡಲು ಸಾರ್ವಜನಿಕರಿಗೆ ಬಹಳ ಅನುಕೂಲಕರವಾಗಿದೆ. ಇನ್ನೂಳಿದಂತೆ ಪ್ರಸಕ್ತ ವರ್ಷದಲ್ಲಿ, ಚಂದ್ರಬಂಡ, ಚಿಕ್ಕಸೂಗುರು, ಹಿರಾಪೂರು, ಜಂಬಲದಿನ್ನಿ, ಕಾಡ್ಲೂರು, ಕಲ್ಮಲಾ, ಕಮಲಾಪೂರು, ಎಲ್.ಕೆ.ದೊಡ್ಡಿ, ಉಡಮಗಲ್, ಯದ್ಲಾಪೂರು ಮತ್ತು ಯಾಪಲದಿನ್ನಿ ಗ್ರಾಮ ಪಂಚಾಯತಿ ಸೇರಿ ಒಟ್ಟು ರಾಯಚೂರು ತಾಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿ ಸ್ಮಶಾನ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದೆ.
ನರೇಗಾ ಯೋಜನೆಯಡಿ ಗ್ರಾಮೀಣ ಮೂಲ ಸೌಕರ್ಯದಡಿ ಕಾಮಗಾರಿಗಳನ್ನು ಅನುಷ್ಠಾನ ಮಾಡುತ್ತಿರುವುದು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ ಎಂದು ತಾಪಂ ಇಒ ಚಂದ್ರಶೇಖರ ಪವಾರ್ ಹೇಳಿದರು.
ಉದ್ಯೋಗ ಖಾತರಿ ಯೋಜನೆ ಮೂಲಕ ಸ್ಮಶಾನವನ್ನು ಅಭಿವೃದ್ಧಿ ಮಾಡಿದೆ. ಇದರಿಂದಾಗಿ ಸ್ಮಶಾನ ಜಾಗದಲ್ಲಿ ಅಂತಿಮ ಸಂಸ್ಕಾರ ಮಾಡಲು ನಮಗೆ ತುಂಬಾ ಅನುಕೂಲವಾಗಿದೆ ಎಂದು ಶಾಖವಾದಿ ಗ್ರಾಮಸ್ಥ ಮಲ್ಲೇಶ್ , ಹನುಮಂತ ಹೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications