ಚಳಿಗಾಲ, ದಿಢೀರ್ ದರ ಕುಸಿತ: ರಾಯಚೂರಿನಲ್ಲಿ ಹೇಗಿದೆ ಎಳನೀರು ವ್ಯಾಪಾರ..?
ರಾಯಚೂರು ಜನವರಿ 20: ಮಾರುಕಟ್ಟೆಯಲ್ಲಿ ಎಳನೀರು ದರ ದಿಢೀರ್ ಕುಸಿತವಾಗಿದ್ದು, ₹25 ಮತ್ತು ₹30 ಫಲಕಗಳನ್ನು ನೇತುಹಾಕಿ ಜನರ ಗಮನ ಸೆಳೆಯಲು ವ್ಯಾಪಾರಿಗಳು ಯತ್ನಿಸುತ್ತಿದ್ದಾರೆ.
ರಾಯಚೂರಿನ ಸ್ಟೇಷನ್ ರಸ್ತೆ, ಕೇಂದ್ರ ಬಸ್ ನಿಲ್ದಾಣದ ಎದುರು, ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೂ, ತೀನ್ ಕಂದಿಲ್, ಮಂತ್ರಾಲಯ ರಸ್ತೆ, ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತ, ಚಂದ್ರಬಂಡಾ ಮಾರ್ಗ, ಲಿಂಗಸುಗೂರು ಮಾರ್ಗ ಸೇರಿದಂತೆ ಅನೇಕ ಕಡೆಗಳಲ್ಲಿ ಎಳನೀರು ವ್ಯಾಪಾರಿಗಳಿದ್ದಾರೆ.
ಎಲ್ಲೆಡೆಯಲ್ಲೂ ದರ ಕುಸಿತದ ಫಲಕಗಳು ಗಮನ ಸೆಳೆಯುತ್ತಿದ್ದರೂ ಜನರು ಕಾದು ನಿಂತು ಎಳನೀರು ಸೇವಿಸುವ ದೃಶ್ಯ ಅಪರೂಪವಾಗಿದೆ. ಗೆಳೆಯರು ಗುಂಪುಗಳು, ಆರೋಗ್ಯದ ಬಗ್ಗೆ ಕಾಳಜಿವುಳ್ಳವರು ಹಾಗೂ ಬಿಸಿಲಿನ ತಾಪದಿಂದ ಸುಧಾರಿಸಿಕೊಳ್ಳಲು ಜನರು ಎಳನೀರು ಮೊರೆ ಹೋಗುವುದು ರಾಯಚೂರಿನಲ್ಲಿ ಸಾಮಾನ್ಯ.

ಪ್ರತಿದಿನ ಬೆಳಗಿನ ಜಾವ ಮತ್ತು ಸಂಜೆ ಹೊತ್ತು ಶೀತಗಾಳಿ ಬೀಸುತ್ತಿದೆ ಮತ್ತು ಚಳಿ ಆವರಿಸಿಕೊಳ್ಳುವುದು ಮುಂದುವರಿದಿದೆ. ಮೈ ಮನ ಮುದುರಿದ ಮೇಲೆ ಎಳನೀರು ಕುಡಿಯುವುದಕ್ಕೆ ಜನರು ಮನಸು ಮಾಡುತ್ತಿಲ್ಲ. ಆದರೆ, ಅನಾರೋಗ್ಯದ ಸಮಸ್ಯೆಯಿಂದ ಬಳಲುವವರು ಮತ್ತು ವೈದ್ಯರ ಸಲಹೆ ಪಡೆದವರು ಎಳನೀರು ಹುಡುಕಿಕೊಂಡು ಬಂದು ಸೇವಿಸುತ್ತಿದ್ದಾರೆ.
ರಾಯಚೂರಿಗೆ ಎಳನೀರು ಹೊರಜಿಲ್ಲೆಗಳಿಂದ ವಾರದಲ್ಲಿ ಎರಡು ಲಾರಿಗಳಷ್ಟು ಮಾತ್ರ ಬರುತ್ತಿದೆ. ಫೆಬ್ರವರಿ ಮಧ್ಯಭಾಗದಿಂದ ಬಿಸಿಲಿನ ಬೇಗೆ ಏರಿಕೆಯಾದಂತೆ ಎಳನೀರಿಗೂ ಬೇಡಿಕೆ ಹೆಚ್ಚಳವಾಗುತ್ತದೆ ಎಂದು ವ್ಯಾಪಾರಿಗಳು ನಿರೀಕ್ಷಿಸುತ್ತಿದ್ದಾರೆ.
ನಗರದ ಸಗಟು ವ್ಯಾಪಾರಿಗಳು ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಿಂದ ಎಳನೀರು ತರಿಸಿಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಿಂದಲೂ ಕೆಲವೊಬ್ಬರು ಎಳನೀರು ತೆಗೆದುಕೊಂಡು ಬಂದಿದ್ದಾರೆ. ಕಾವೇರಿ ನದಿಭಾಗದಲ್ಲಿ ಬೆಳೆಯುವ ಎಳನೀರು ರುಚಿಯಾಗಿರುತ್ತದೆ. ಜನರು ರುಚಿಯಾದ ಎಳನೀರು ಕೇಳುತ್ತಾರೆ. ಒಮ್ಮೆ ಸೇವಿಸಿದವರು ಮತ್ತೊಮ್ಮೆ ಎಳನೀರು ಹುಡುಕಿಕೊಂಡು ಬರುತ್ತಾರೆ.
ಸದ್ಯ ಚಳಿ ಬೀಳುತ್ತಿರುವುದರಿಂದ ಯಾವುದೇ ಎಳನೀರು ಸಾಕಷ್ಟು ಪ್ರಮಾಣದಲ್ಲಿ ಸಿಹಿಯಾಗಿರುವುದಿಲ್ಲ. ಬಿಸಿಲು ಹೆಚ್ಚಾದಂತೆ ಎಳನೀರಿಗೂ ರುಚಿ ಹೆಚ್ಚುತ್ತದೆ, ಬೇಡಿಕೆಯೂ ಸಾಮಾನ್ಯ ಸ್ಥಿತಿಗೆ ಬರುತ್ತದೆ. ಬೇಡಿಕೆ ಹೆಚ್ಚಾದಂತೆ ಎಳನೀರು ದರವು ಏರಿಕೆಯಾಗುತ್ತದೆ. ಕಳೆದ ವರ್ಷ ಬೇಸಿಗೆಯಲ್ಲಿ ಒಂದು ಎಳನೀರು ದರ ಗರಿಷ್ಠ ₹50 ಕ್ಕೆ ಮಾರಾಟವಾಗಿದೆ. ಈಗ ಅರ್ಧದಷ್ಟು ಕುಸಿತ ಕಂಡಿದೆ.
"ಎಳನೀರು ಆರೋಗ್ಯಕ್ಕೆ ಒಳ್ಳೆಯದು. ವಾರದಲ್ಲಿ ಕನಿಷ್ಠ ಐದು ದಿನ ಎಳನೀರು ಕುಡಿಯುತ್ತಾ ಬರುತ್ತಿದ್ದೇನೆ. ದುಬಾರಿ ಮದ್ಯ ಸೇವನೆಗಿಂತ ಎಳನೀರು ಸೇವಿಸುವುದು ಉತ್ತಮ. ಈಗ ₹25 ದರ ನಿಗದಿ ಮಾಡಿರುವುದು, ಕ್ರಮೇಣ ಹೆಚ್ಚಳ ಮಾಡುತ್ತಾರೆ" ಎಂದುರಾಯಚೂರು ನಗರ ನಿವಾಸಿ ರಮೇಶ್ ಹೇಳಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications