Get Updates
Get notified of breaking news, exclusive insights, and must-see stories!

ರೇವಣ್ಣ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದ ಎಚ್. ವಿಶ್ವನಾಥ್

ರಾಯಚೂರು, ಮಾರ್ಚ್ 9: ರೇವಣ್ಣನವರು ಸುಮಲತಾ ಬಗ್ಗೆ ಮನಬಂದಂತೆ ಹಗುರವಾಗಿ ಮಾತನಾಡಬಾರದಿತ್ತು. ಆ ಕುರಿತಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸಚಿವರಾಗಿ ರೇವಣ್ಣ ಅವರು ಸುಮಲತಾ ಬಗ್ಗೆ ಈ ರೀತಿ ಹಗುರವಾಗಿ ಮಾತನಾಡಬಾರದಿತ್ತು. ಹೇಳಿಕೆ ಕುರಿತು ಖುದ್ದು ಸಿಎಂ ಕುಮಾರಸ್ವಾಮಿ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡುವುದು ತಪ್ಪು ಎಂದಿದ್ದರು. ಆದರೆ, ರೇವಣ್ಣ ಮಾತ್ರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದು ಬೇಸರದ ವಿಚಾರ ಎಂದರು.

ಜೆಡಿಎಸ್ ಮಹಿಳೆಯರಿಗೆ ಅಪಾರವಾದ ಗೌರವ ಕೊಡುತ್ತದೆ ಎಂದ ವಿಶ್ವನಾಥ್, ಈ ರೀತಿಯ ಹೇಳಿಕೆಗಳನ್ನು ನೀಡಬಾರದಾಗಿತ್ತು. ಆದರೆ, ರೇವಣ್ಣ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ವಿನಂತಿಸಿಕೊಂಡರು.

I apologize for the statement by Revanna about Sumalatha:H Vishwanath

ಜೆಡಿಎಸ್ ನಲ್ಲಿ ಮಾತ್ರ ಕುಟುಂಬ ರಾಜಕಾರಣವಿಲ್ಲ, ಅದು ಎಲ್ಲಾ ಪಕ್ಷದಲ್ಲಿದೆ. ಕಾಂಗ್ರೆಸ್, ಬಿಜೆಪಿಯಲ್ಲಿರುವುದು ಏನು? ಯಡಿಯೂರಪ್ಪ, ಸಿದ್ದರಾಮಯ್ಯ ಮನೆಯಲ್ಲಿ ರಾಜಕಾರಣವಿಲ್ಲವೇ ಎಂದು ಪ್ರಶ್ನಿಸಿದರು. ಎರಡಾದರೂ ಇರಲಿ, ನಾಲ್ಕಾದರೂ ಇರಲಿ ಅದು ಕುಟುಂಬ ರಾಜಕಾರಣವೇ ಎಂದು ವಿಶ್ವನಾಥ್ ಟೀಕಿಸಿದರು.

ಮೋದಿ ಉತ್ತರ ಕರ್ನಾಟಕದ ಕೇಂದ್ರದ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ ಎಂದು ಹರಿಹಾಯ್ದರು. ರಾಜ್ಯದ ಅವಭಿವೃದ್ಧಿ ವಿಷಯದಲ್ಲಿ ಮೋದಿ ತಾರತಮ್ಯ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ವಿಶ್ವನಾಥ್ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+