ರೇವಣ್ಣ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದ ಎಚ್. ವಿಶ್ವನಾಥ್
ರಾಯಚೂರು, ಮಾರ್ಚ್ 9: ರೇವಣ್ಣನವರು ಸುಮಲತಾ ಬಗ್ಗೆ ಮನಬಂದಂತೆ ಹಗುರವಾಗಿ ಮಾತನಾಡಬಾರದಿತ್ತು. ಆ ಕುರಿತಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸಚಿವರಾಗಿ ರೇವಣ್ಣ ಅವರು ಸುಮಲತಾ ಬಗ್ಗೆ ಈ ರೀತಿ ಹಗುರವಾಗಿ ಮಾತನಾಡಬಾರದಿತ್ತು. ಹೇಳಿಕೆ ಕುರಿತು ಖುದ್ದು ಸಿಎಂ ಕುಮಾರಸ್ವಾಮಿ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡುವುದು ತಪ್ಪು ಎಂದಿದ್ದರು. ಆದರೆ, ರೇವಣ್ಣ ಮಾತ್ರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದು ಬೇಸರದ ವಿಚಾರ ಎಂದರು.
ಜೆಡಿಎಸ್ ಮಹಿಳೆಯರಿಗೆ ಅಪಾರವಾದ ಗೌರವ ಕೊಡುತ್ತದೆ ಎಂದ ವಿಶ್ವನಾಥ್, ಈ ರೀತಿಯ ಹೇಳಿಕೆಗಳನ್ನು ನೀಡಬಾರದಾಗಿತ್ತು. ಆದರೆ, ರೇವಣ್ಣ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ವಿನಂತಿಸಿಕೊಂಡರು.

ಜೆಡಿಎಸ್ ನಲ್ಲಿ ಮಾತ್ರ ಕುಟುಂಬ ರಾಜಕಾರಣವಿಲ್ಲ, ಅದು ಎಲ್ಲಾ ಪಕ್ಷದಲ್ಲಿದೆ. ಕಾಂಗ್ರೆಸ್, ಬಿಜೆಪಿಯಲ್ಲಿರುವುದು ಏನು? ಯಡಿಯೂರಪ್ಪ, ಸಿದ್ದರಾಮಯ್ಯ ಮನೆಯಲ್ಲಿ ರಾಜಕಾರಣವಿಲ್ಲವೇ ಎಂದು ಪ್ರಶ್ನಿಸಿದರು. ಎರಡಾದರೂ ಇರಲಿ, ನಾಲ್ಕಾದರೂ ಇರಲಿ ಅದು ಕುಟುಂಬ ರಾಜಕಾರಣವೇ ಎಂದು ವಿಶ್ವನಾಥ್ ಟೀಕಿಸಿದರು.
ಮೋದಿ ಉತ್ತರ ಕರ್ನಾಟಕದ ಕೇಂದ್ರದ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ ಎಂದು ಹರಿಹಾಯ್ದರು. ರಾಜ್ಯದ ಅವಭಿವೃದ್ಧಿ ವಿಷಯದಲ್ಲಿ ಮೋದಿ ತಾರತಮ್ಯ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ವಿಶ್ವನಾಥ್ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications