ರಾಯಚೂರು; ಅಕ್ರಮ ಮರಳು ದಂಧೆಗೆ ಬರಿದಾಗುತ್ತಿದೆ ಕೃಷ್ಣಾ ನದಿಯೊಡಲು, ಲೂಟಿಕೋರರಿಗೆ ಜನಪ್ರತಿನಿಧಿಗಳ ಸಾಥ್
ರಾಯಚೂರು, ನವೆಂಬರ್ 21: ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಎಗ್ಗಿಲ್ಲದಂತಾಗಿದೆ. ಹಗಲು ರಾತ್ರಿ ಮರಳನ್ನು ತೋಡಿ ತೋಡಿ ನದಿ ಒಡಲು ಬರಿದಾಗುತ್ತಿದೆ. ನದಿಯಾಶ್ರಿತ ಜೀವಿಗಳಿಗೂ ಇದು ಕೊಡಲಿಯೇಟಾಗಿದೆ.
ಆದರೆ ಈ ಅಕ್ರಮಕ್ಕೆ ಬ್ರೇಕ್ ಹಾಕಬೇಕಾದವರು ಮಾತ್ರ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ. ಗೊತ್ತಿದ್ದೂ ಗೊತ್ತಿಲ್ಲದಂತೆ ಜಾಣತನ ತೋರುತ್ತಿದ್ದಾರೆ. ಜನಪ್ರತಿನಿಧಿಗಳ ಈ ಜಾಣತನದಿಂದ ಪ್ರಕೃತಿ ಸಂಪತ್ತು ಲೂಟಿ ಆಗುತ್ತಿದೆ.

ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ
ನದಿಯ ತಟದಲ್ಲಿ ನಿಂತಿರುವ ಟಿಪ್ಪರ್ ಗಳಿಗೆ ಮರಳು ತುಂಬುತ್ತಿರುವ ಹಿಟಾಚಿ, ಮರಳು ಹೆಕ್ಕಿ ಹೆಕ್ಕಿ ಬರಿದಾಗಿರುವ ನದಿ ಒಡಲು. ಇದು ರಾಯಚೂರು ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ನೋಟ. ಜಿಲ್ಲೆಯ ಕೃಷ್ಣಾ ಹಾಗು ತುಂಗಭದ್ರಾ ನದಿಯನ್ನು ಎಗ್ಗಿಲ್ಲದೆ ಮರಳು ದಂಧೆಕೋರರು ಬಗೆಯುತ್ತಲೇ ಇದ್ದಾರೆ. ದೇವದುರ್ಗ ತಾಲೂಕಿನ ಕೃಷ್ಣಾ ನದಿ ತಟದ ಕರಕಳ್ಳಿ, ಲಿಂಗದಳ್ಳಿ, ಹೆರುಂಡಿ, ಅಂಜಳ, ಜೋಳದಡಗಿ, ಹೂವಿನ ಹೆಡಗಿ ಸೇರಿದಂತೆ ನದಿ ತಟದ ಗ್ರಾಮಗಳಲ್ಲಿ ಅಕ್ರಮ ಮರಳು ದಂಧೆ ಮುಂದುವರಿದಿದೆ. ಆದರೆ ಇದನ್ನು ಕೇಳುವವರೇ ಇಲ್ಲದಂತಾಗಿದೆ.

ಜನಪ್ರತಿನಿಧಿಗಳ ಕೃಪಾಕಟಾಕ್ಷ?
ಈ ರೀತಿ ನದಿಯ ಮರಳನ್ನು ಬಗೆಯುತ್ತಾ ಲಾಭ ಮಾಡಿಕೊಳ್ಳುವ ದಂಧೆಗೆ ಬ್ರೇಕ್ ಇಲ್ಲದಂತಾಗಿದೆ. ಅಕ್ರಮ ಸ್ಟಾಕ್ ಯಾರ್ಡ್ ಮಾಡಿಕೊಂಡು ದಂಧೆಕೋರರು ಹಗಲು ರಾತ್ರಿ ಮರಳು ಲೂಟಿ ಮಾಡುತ್ತಿದ್ದಾರೆ. ಆದರೆ ಇದಕ್ಕೆಲ್ಲ ನಿಯಂತ್ರಣ ಹೇರಬೇಕಿದ್ದವರೇ ಸಹಕಾರ ನೀಡುತ್ತಿದ್ದಾರೆ ಎನ್ನುವ ಆರೋಪ ಇದೆ. ಮರಳು ಅಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳ ಸಹಕಾರ, ಜನಪ್ರತಿನಿಧಿಗಳ ಕೃಪಾಕಟಾಕ್ಷ ಇದೆ ಅನ್ನುವ ಆರೋಪವೂ ಕೇಳಿಬಂದಿದೆ.

ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲ
ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶ ಪಾಲಿಸಬೇಕಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಾಮೂಲಿ ಹಣಕ್ಕೆ ಜೋತು ಬಿದ್ದು, ಗೊತ್ತಿದ್ದು ಗೊತ್ತಿಲ್ಲದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ದೇವದುರ್ಗ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನದಿಯಿಂದ ಮರಳು ಕೊಳ್ಳೆ ಹೊಡೆಯಲಾಗುತ್ತಿದೆ. ಜಿಲ್ಲೆಯ ಪ್ರಭಾವಿಗಳು ರಾಯಲ್ಟಿ ನಿಯಮ ಮೀರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನಲಾಗಿದೆ.

ಕಡಿವಾಣಕ್ಕೆ ಒತ್ತಾಯ
ಪ್ರಭಾವಿ ನಾಯಕರ ಸಂಬಂಧಿಗಳು, ಬೆಂಬಲಿಗರು, 15 ಟನ್ ಮರಳು ಸಾಗಾಣಿಕೆಗೆ ಪರವಾನಗಿ ಪಡೆದು 20ಟನ್ ಗೂ ಹೆಚ್ಚು ಮರಳನ್ನು ಸಾಗಿಸುತ್ತಿದ್ದಾರೆ. ಅಲ್ಲದೆ ನದಿ ತಟದಲ್ಲಿ ಮರಳು ಸ್ಟಾಕ್ ಮಾಡಿಕೊಂಡು ರಾತ್ರೋರಾತ್ರಿ ಮರಳನ್ನು ಸ್ಟಾಕ್ ಯಾರ್ಡ್ ಗೆ ಕದ್ದು ತುಂಬಿಕೊಳ್ಳುತ್ತಿದ್ದಾರೆ ಅನ್ನುವ ಆರೋಪ ಕೇಳಿಬರುತ್ತಿದೆ. ಹೀಗಾಗಿ ಅಕ್ರಮ ಮರಳು ದಂಧೆಯಿಂದ ನದಿ ತಟದ ಗ್ರಾಮಸ್ಥರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಕೃಷ್ಣಾ ಹಾಗು ತುಂಗಭದ್ರಾ ನದಿ ಒಡಲನ್ನು ದಂಧೆಕೋರರು ಬಗೆದು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳೇ ಪರೋಕ್ಷವಾಗಿ ದಂಧೆಯಲ್ಲಿ ತೊಡಗಿರುವುದು ವಿಪರ್ಯಾಸವೇ ಸರಿ. ಇನ್ನಾದರೂ ಸರ್ಕಾರ ಎಚ್ಚೆತ್ತು ಪ್ರಕೃತಿ ಸಂಪತ್ತನ್ನು ಉಳಿಸುವ ಕೆಲಸ ಮಾಡಬೇಕಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications