ಮಾನ್ವಿಯಲ್ಲಿ ಅಕ್ರಮ ಮರಳು ಗಣಿಕಾರಿಕೆಗಿಲ್ಲ ಕಡಿವಾಣ, ಇದಕ್ಕೆ ಪ್ರಮುಖ ಕಾರಣ ಇಲ್ಲಿದೆ
ರಾಯಚೂರು, ಆಗಸ್ಟ್, 11: ಮಾನ್ವಿ ತಾಲೂಕಿನ ಬುರಾನಪುರ ಸಮೀಪ ಅಕ್ರಮವಾಗಿ ಮರಳು ಸಂಗ್ರಹಿಸಿದ ಸ್ಥಳಕ್ಕೆ ತೆರಳಿದ್ದ ಹಟ್ಟಿಚಿನ್ನದ ಗಣಿ ಸಿಬ್ಬಂದಿ ನೀಲಪ್ಪ ಎಂಬುವರ ಮೇಲೆ ಮರಳು ದಂಧೆಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
2018ರ ಡಿಸೆಂಬರ್ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ತಡೆಗೆ ಮುಂದಾಗಿದ್ದ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರ ಮೇಲೆ ಮರಳು ತುಂಬಿದ ಲಾರಿ ಹರಿದು ಮೃತಪಟ್ಟಿದ್ದರು. ಇದೀಗ ಮತ್ತೆ ಹಲ್ಲೆ ನಡೆದಿರುವುದು ನೌಕರರು ಮರಳು ಗಣಿಗಾರಿಕೆ ನಿರ್ವಹಣೆ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕುವಂತೆ ಮಾಡಿದೆ. ತಾಲೂಕಿನ ತುಂಗಭದ್ರ ನದಿ ಪಾತ್ರದಲ್ಲಿ ಕೆಲ ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆ ದಂಧೆಗೆ ಕಡಿವಾಣ ಇಲ್ಲದಂತಾಗಿದೆ.

ಸರ್ಕಾರ ಅಧಿಕೃತವಾಗಿ ಮರಳುಗಾರಿಕೆ ಹಾಗೂ ಸಂಗ್ರಹ ಘಟಕಗಳನ್ನು ಆರಂಭಿಸಿದ್ದರೂ ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ಮಧ್ಯೆ ಸಮನ್ವಯದ ಕೊರತೆ ಪ್ರಭಾವಿಗಳ ಒತ್ತಡ ಅಕ್ರಮ ಮರಳು ದಂಧೆಗೆ ಕಡಿವಾಣ ಬೀಳುತ್ತಿಲ್ಲ ಎಂಬುದು ಸ್ಥಳೀಯ ಸಂಘ ಸಂಸ್ಥೆಗಳ ಆರೋಪವಾಗಿದೆ. ಮಾನ್ವಿ ತಾಲೂಕಿನ ಉಮಳಿಪನ್ನೂರು, ಮದ್ಲಾಪೂರ, ಚೀಕಲಪರ್ವಿ ಹಾಗೂ ಯಡಿವಾಳ ಗ್ರಾಮಗಳಲ್ಲಿ ಒಟ್ಟು 5 ಮರಳು ಗಾಣಿಗಾರಿಕೆ ಘಟಕಗಳನ್ನು ಜಿಲ್ಲಾಡಳಿತ ಈ ಹಿಂದೆ ಗುರುತಿಸಿತ್ತು.
ಆದರೆ ಈಚೆಗೆ ರಾಜ್ಯ ಸರ್ಕಾರ ಚೀಕಲಪರ್ವಿ ಹಾಗೂ ಯಡಿವಾಳ ಗ್ರಾಮದ ಎರಡು ಘಟಕಗಳಲ್ಲಿ ಮಾತ್ರ ಮರಳು ಗಣಿಗಾರಿಕೆ ನಿರ್ವಹಣೆಯನ್ನು ಹಟ್ಟಿ ಚಿನ್ನದ ಗಣಿ ನಿಗಮಕ್ಕೆ ವಹಿಸಿತ್ತು. ಪ್ರತಿ ದಿನ ಸರ್ಕಾರಕ್ಕೆ ರಾಜಧನ (ರಾಯಲ್ಟಿ) ಪಾವತಿಸಿದ ನೂರಾರು ಲಾರಿ, ಟಿಪ್ಪರ್ಗಳಲ್ಲಿ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಸಿದರೂ ವಿವಿಧೆಡೆ ಅಕ್ರಮವಾಗಿ ಮರಳು ಸಂಗ್ರಹ ಹಾಗೂ ಸಾಗಾಣಿಕೆ ಕಂಡುಬಂದಿದೆ.
ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲದಿರುವುದು, ಹೆಚ್ಚಿನ ಸಂಖ್ಯೆಯ ತಪಾಸಣಾ ಸಿಬ್ಬಂದಿ ಕೊರತೆ ಹಾಗೂ ಅಧಿಕಾರಿಗಳ ಕಟ್ಟುನಿಟ್ಟಿನ ಕಾರ್ಯಚರಣೆಯ ವೈಪಲ್ಯವೇ ಅಕ್ರಮ ಮರಳು ದಂಧೆಗೆ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ಘಟನೆ ನಂತರ ಯಡಿವಾಳ ಹಾಗೂ ಚೀಕಲಪರ್ವಿ ಗ್ರಾಮಗಳ ಮರಳು ಸಂಗ್ರಹ ಘಟಕ (ಸ್ಟಾಕ್ ಯಾರ್ಡ್)ಗಳಿಂದ ಮರಳು ಸಾಗಣೆಗೆ ಹಾಗೂ ಮರಳು ತುಂಬುವ ಕಾರ್ಯವನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.
ಇತ್ತೀಚೆಗೆ ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ, ರಾಯಚೂರಿನಲ್ಲಿ ಅಂಥದ್ದೇ ಘಟನೆ ನಡೆದಿದೆ. ತುಂಗಭದ್ರಾ ನದಿ ತೀರದ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿ, ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ತೆಗೆದುಕೊಂಡು ಹೋಗುತ್ತಿದ್ದ ರಕ್ಷಣಾ ಪಡೆ ಸಿಬ್ಬಂದಿಯ ಮೇಲೆ ಕಿರಾತಕರು ಹಲ್ಲೆ ನಡೆಸಿದ್ದಾರೆ. ಮಾನ್ವಿ ತಾಲೂಕಿನ ಬೂರನಾಪುರ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ.
ರಕ್ಷಣಾ ಪಡೆಯಲ್ಲಿದ್ದ ಮಾಜಿ ಯೋಧ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಕ್ಷಣಾ ಪಡೆಯ ಸಿಬ್ಬಂದಿ ನೀಲಪ್ಪ ಎನ್ನುವರ ಮೇಲೆ ಕಬ್ಬಿಣದ ಜಾಕ್ನಿಂದ 6 ಜನ ಗುಂಪು ಹಲ್ಲೆ ನಡೆಸಿದೆ. ಈ ಕುರಿತಂತೆ ದೂರು ದಾಖಲಿಸಲಾಗಿದೆ.
ಸಿಬ್ಬಂದಿ ಮೇಲೆ ಅಕ್ರಮ ಮರಳು ದಂಧೆಕೋರರಿಂದ ನಡೆದ ಹಲ್ಲೆ ಘಟನೆಯ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಹಶೀಲ್ದಾರ್ ರಾಜು ಫಿರಂಗಿ ಹೇಳಿದರು. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯ ಕಂಡುಕೊಳ್ಳಬೇಕು. ಜೊತೆಗೆ ಕಟ್ಟುನಿಟ್ಟಿನ ಕಾರ್ಯಾಚರಣೆ ಅಗತ್ಯ ಎಂದು ಮಾನ್ವಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಪ್ರಭುರಾಜ ಕೊಡ್ಲಿ ಹೇಳಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications