ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ಚಾಲನೆ
ರಾಯಚೂರು, ಜೂನ್.27: ಜಿಲ್ಲೆಯ ಎಪಿಎಂಸಿ ರಾಜೇಂದ್ರ ಗಂಜ್ ಆವರಣದಲ್ಲಿ ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಆರಂಭವಾಗಿದ್ದು, ಮೊದಲ ದಿನ ಬುಧವಾರ ಕರ್ನಾಟಕದ ಎತ್ತುಗಳಿಗಾಗಿ ಏರ್ಪಡಿಸಿದ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ಭರ್ಜರಿಯಾಗಿ ನಡೆಯಿತು.
ಎತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ, ಮುಂಗಾರು ಹಬ್ಬ ಪಶು ಸಂಗೋಪನಾ ಇಲಾಖೆಗೆ ಸಂಬಂಧಿಸಿದ್ದು, ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿದ ಹೆಮ್ಮೆ ನನಗಿದೆ.
ಭಾರವಾದ ಕಲ್ಲು ಎಳೆಯುವಾಗ ಎತ್ತುಗಳಿಗೆ ಹಿಂಸೆ ನೀಡುತ್ತಾರೆ ಎನ್ನುವುದು ಸರಿಯಲ್ಲ. ಆದರೆ ಎತ್ತುಗಳಿಗೆ ಹಿಂಸೆ ನೀಡುವುದು ಕಂಡು ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸೂಚಿಸಿದರು.

ಸಮ್ಮಿಶ್ರ ಸರ್ಕಾರದ ಕುರಿತು ಮಾತನಾಡಿದ ಅವರು, ಸರ್ಕಾರದ ಆಯುಷ್ಯ ಎರಡೂವರೆ ವರ್ಷ ಎಂಬುದು ಮಾಧ್ಯಮಗಳ ಸೃಷ್ಟಿ. ಸರ್ಕಾರಕ್ಕೆ ದೇವರ ಕೃಪೆ ಇದೆ, ದೇವರೇ ಎಲ್ಲಾ ನೋಡಿಕೊಳ್ಳುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು.
ಮುನ್ನೂರು ಕಾಪು ಸಮಾಜ, ಎಪಿಎಂಸಿ, ಹಟ್ಟಿಚಿನ್ನದಗಣಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಮತ್ತು ನಗರಸಭೆ ಸಹಯೋಗದಲ್ಲಿ ಜೂನ್ 27ರಿಂದ 29ರವರೆಗೆ ಮಾಜಿ ಶಾಸಕ ಹಾಗೂ ಮುಂಗಾರು ಸಾಂಸ್ಕೃತಿಕ ಹಬ್ಬದ ಅಧ್ಯಕ್ಷ ಎ.ಪಾಪರೆಡ್ಡಿ ಹಾಗೂ ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಇವರ ನೇತೃತ್ವದಲ್ಲಿ ಮುಂಗಾರು ಹಬ್ಬ ಜರುಗಲಿದೆ.
ನಾಳೆಯ ಕಾರ್ಯಕ್ರಮ: ಗುರುವಾರ ಬೆಳಗ್ಗೆ 8ಗಂಟೆಗೆ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ 2ಟನ್ ಭಾರವಾದ ಕಲ್ಲು ಎಳೆಯುವ ಅಖಿಲ ಭಾರತ ಮುಕ್ತ ಸ್ಪರ್ಧೆ ಜರುಗಲಿದ್ದು, ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸಾನ್ನಿಧ್ಯ ವಹಿಸಲಿದ್ದು, ಸಂಸದ ಬಿ.ವಿ.ನಾಯಕ ಉದ್ಘಾಟಿಸಲಿದ್ದಾರೆ.
ಸಂಜೆ 4ಗಂಟೆಗೆ ಎತ್ತುಗಳ ಬೃಹತ್ ಮೆರವಣಿಗೆ ಕಾರ್ಯಕ್ರಮ ಜರುಗಲಿದ್ದು, ರಾಜ್ಯದ ಹಾಗೂ ವಿವಿಧ ಭಾಗಗಳಿಂದ ಆಗಮಿಸುವ ಕಲಾತಂಡಗಳ ಕಲಾಪ್ರದರ್ಶನ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಸಂಜೆ 6ಗಂಟೆಗೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರರಾಜ್ಯ ಕಲಾವಿದರಿಂದ ನೃತ್ಯ ರೂಪಕ ಹಮ್ಮಿಕೊಂಡಿದೆ.
ಅಂತಿಮ ದಿನದ ಕಾರ್ಯಕ್ರಮ: ಅಂತಿಮ ದಿನ ಜೂ.29ರ ಶುಕ್ರವಾರ ಬೆಳಗ್ಗೆ 8ಗಂಟೆಗೆ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಎರಡೂವರೆ ಟನ್ ಭಾರವಾದ ಕಲ್ಲು ಎಳೆಯುವ ಅಖಿಲ ಭಾರತ ಮುಕ್ತ ಸ್ಪರ್ಧೆ ನಡೆಯಲಿದ್ದು, ಚಿಕ್ಕಸೂಗೂರು ಚೌಕಿಮಠದ ಡಾ.ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯವಹಿಸಲಿದ್ದು, ಶಾಸಕ ಡಾ.ಶಿವರಾಜ್ ಪಾಟೀಲ್ ಉದ್ಘಾಟಿಸಲಿದ್ದಾರೆ.
ನಗರದ ಶ್ರೀ ಮಾತಾ ಲಕ್ಷ್ಮಮ್ಮದೇವಿ ಕಲ್ಯಾಣ ಮಂಟಪದ ಆವರಣದಲ್ಲಿ ಕಲ್ಲುಗುಂಡು ಹಾಗೂ ಉಸುಕಿನ ಚೀಲ ಎತ್ತುವ ಸ್ಪರ್ಧೆ ಜೂ.29ರ ಮಧ್ಯಾಹ್ನ 3ಗಂಟೆಗೆ ಜರುಗಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications