Raichur: ಈ ಶಾಲೆಯಲ್ಲಿ ಇಂಗ್ಲಿಷ್ ಪಠ್ಯವಿದೆ ಶಿಕ್ಷಕರೇ ಇಲ್ಲ..!
ರಾಯಚೂರು ಮಾರ್ಚ್ 9: ಕವಿತಾಳ ಪಟ್ಟಣದ ಕನ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾಗಿ ನಾಲ್ಕು ವರ್ಷಗಳಾದರೂ ಶಿಕ್ಷಕರ ನೇಮಕವಾಗಿಲ್ಲ. ಹೀಗಾಗಿ ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲಿಷ್ ಮಾಧ್ಯಮದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.
ಇಂಗ್ಲಿಷ್ ಮಾಧ್ಯಮದಲ್ಲಿ ಅಂದಾಜು 35 ಮಕ್ಕಳು ಸೇರಿದಂತೆ 1ರಿಂದ 7ನೇ ತರಗತಿಯ ವರೆಗೆ ಒಟ್ಟು 276 ವಿದ್ಯಾರ್ಥಿಗಳು ಕಲಿಯುತ್ತಿರುವ ಈ ಶಾಲೆಯಲ್ಲಿ 12 ಜನ ಶಿಕ್ಷಕ ಹುದ್ದೆಗಳ ಮಂಜೂರಾತಿ ಇದೆ. ಪ್ರಸ್ತುತ 9 ಜನ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಭರಿಸಲು ಸಾಧ್ಯವಾಗದ ಬಹುತೇಕ ಬಡ ಮತ್ತು ಮಧ್ಯಮ ವರ್ಗದ ಪಾಲಕರು ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮಕ್ಕೆ ಸೇರಿಸಿದ್ದಾರೆ. ಸದ್ಯ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
12 ಕೊಠಡಿಗಳಿದ್ದು ತರಗತಿ ನಡೆಸಲು ಅನುಕೂಲವಿದೆ. ಆದರೆ ಆವರಣ ಇಲ್ಲದ ಕಾರಣ ಮಕ್ಕಳಿಗೆ ಆಟವಾಡಲು ಮತ್ತು ಬೆಳಿಗ್ಗೆ ಪ್ರಾರ್ಥನೆಗೆ ನಿಂತುಕೊಳ್ಳಲೂ ಜಾಗದ ಕೊರತೆ ಇದೆ. ಆಟವಾಡಲು ಆವರಣವೇ ಇಲ್ಲ ಎನ್ನುವ ಕಾರಣಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಯನ್ನೇ ಮಂಜೂರು ಮಾಡಿಲ್ಲ. ಹೀಗಾಗಿ ವೈಯಕ್ತಿಕ ಆಟ ಹೊರತು ಪಡಿಸಿ ಗುಂಪು ಆಟಗಳಲ್ಲಿ ಮಕ್ಕಳು ಭಾಗವಹಿಸುತ್ತಿಲ್ಲ.

ಕುಡಿಯಲು ಯೋಗ್ಯವಿಲ್ಲದ ಕಾರಣ ಕೊಳವೆಬಾವಿ ನೀರನ್ನು ಬಳಕೆಗೆ ಮತ್ತು ಬಿಸಿಯೂಟ ತಯಾರಿಕೆಗೆ ನಲ್ಲಿ ನೀರು ಉಪಯೋಗಿಸಲಾಗುತ್ತಿದೆ. ಶುದ್ಧ ನೀರಿನ ಕೊರತೆಯಿಂದ ಮಕ್ಕಳು ಮನೆಯಿಂದಲೇ ನೀರು ತಂದು ಕುಡಿಯುವಂತ ಪರಿಸ್ಥಿತಿ ಇದೆ.
ಬಿಸಿಯೂಟ ಕೊಠಡಿಯ ಚಾವಣಿ ಸಿಮೆಂಟ್ ಕಳಚಿ ಬೀಳುತ್ತಿದೆ. ಆರು ಶೌಚಾಲಯಗಳಲ್ಲಿ ಎರಡು ನಿರುಪಯುಕ್ತವಾಗಿವೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇನ್ನೂ ಎರಡು ಶೌಚಾಲಯಗಳ ಅಗತ್ಯವಿದೆ. ಕಾಂಪೌಂಡ್ ಕಿರಿದಾಗಿದ್ದು ಶಾಲಾ ಸಮಯ ಮುಗಿದ ನಂತರ ಕಾಂಪೌಂಡ್ ಜಿಗಿದು ಒಳ ಬರುವ ಕಿಡಿಗೇಡಿಗಳು ನೀರಿನ ಪೈಪ್ ಮುರಿಯುವುದು, ಬೀಡಿ ಸಿಗರೇಟು, ಗುಟಕಾ ಸೇದಿ ಎಸೆಯುತ್ತಾರೆ ಎನ್ನುವ ದೂರು ಇದೆ.
'ಪಾಲಕರ ಒತ್ತಾಯದ ಮೇರೆಗೆ ಈಚೆಗೆ ಒಬ್ಬ ಅತಿಥಿ ಶಿಕ್ಷಕಿಯನ್ನು ನೇಮಿಸಿದ್ದಾರೆ. ಇಂಗ್ಲಿಷ್ ಮಾಧ್ಯಮಕ್ಕೆ ಪ್ರವೇಶ ಪಡೆದ ಕಾರಣ ಈಗಾಗಲೇ ಕನ್ನಡ ಮಾಧ್ಯಮ ಕೃಪಾಂಕದಿಂದ ವಂಚಿತರಾಗಿದ್ದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವೂ ಸಿಗುತ್ತಿಲ್ಲ. ಪ್ರತ್ಯೇಕ ಶಿಕ್ಷಕರ ನೇಮಕಕ್ಕೆ ಇಲಾಖೆ ಕ್ರಮ ಕೈಗೊಳ್ಳಬೇಕು' ಎಂದು ಪಾಲಕ ಹಂಪಣ್ಣ ಕಂದಗಲ್ ಒತ್ತಾಯಿಸಿದರು.
ಬಿಸಿಯೂಟದ ಅಡುಗೆ ಕೊಠಡಿ ಶೌಚಾಲಯ ಮಕ್ಕಳಿಗೆ ಕುಳಿತುಕೊಳ್ಳಲು ಬೆಂಚುಗಳು ಶುದ್ಧ ಕುಡಿಯುವ ನೀರು ಮತ್ತು ಕಾಂಪೌಂಡ್ ಎತ್ತರಿಸುವ ಕೆಲಸ ತುರ್ತಾಗಿ ಆಗಬೇಕು ಎಂದು ಎಸ್ ಡಿಎಂಸಿ ಅಧ್ಯಕ್ಷ ಬಲವಂತ ಯಾದವ ಒತ್ತಾಯಿಸಿದರು
ತಾಲ್ಲೂಕಿನ 15 ಬಹುಭಾಷೆ ಶಾಲೆಗಳಿಗೆ ಸರ್ಕಾರ ಶಿಕ್ಷಕ ಹುದ್ದೆ ಮಂಜೂರು ಮಾಡಿಲ್ಲ. ಹೀಗಾಗಿ ಅತಿಥಿ ಶಿಕ್ಷಕರು ಹಾಗೂ ಕನ್ನಡ ಮಾಧ್ಯಮ ಶಿಕ್ಷಕರ ಸೇವೆ ಪಡೆಯಲಾಗುತ್ತಿದೆ ಎಂದು ಬಿಇಒ ಚಂದ್ರಶೇಖರ ದೊಡ್ಮನಿ ಮಾನ್ವಿ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications