Get Updates
Get notified of breaking news, exclusive insights, and must-see stories!

ನರೇಗಾ ಕಾಮಗಾರಿಗಳಲ್ಲಿ ಅಕ್ರಮ: ರಾಯಚೂರಿನಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

ರಾಯಚೂರು ನವೆಂಬರ್ 27: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ.

Irregularity in Narega works: FIR against two officials in Raichur

ನರೇಗಾ ಯೋಜನೆಯಡಿ 2020-21, 2021-22 ಹಾಗೂ 2022-23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ ₹11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ ₹32.51 ಕೋಟಿಯನ್ನು ಅಕ್ರಮವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ₹102.32 ಕೋಟಿಯನ್ನು ಶ್ರೀ ಮಾರುತೇಶ್ವರ ಎಂಟರ್‌ಪ್ರೈಸಸ್‌ಗೆ ನಿಯಮ ಮೀರಿ ಪಾವತಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

₹5.10 ಕೋಟಿ ರಾಜಧನವನ್ನು ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಪಾವತಿಸದೇ ಸರ್ಕಾರಕ್ಕೆ ನಷ್ಟಮಾಡಲಾಗಿದೆ. ವೈಯಕ್ತಿಯವಾಗಿ ಕಟ್ಟಿಕೊಂಡ ದನದ ಶೆಡ್‌ಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸದೆ ನಿಯಮ ಬಾಹಿರವಾಗಿ ಸಾಮಗ್ರಿ ಪೂರೈಕೆದಾರರಿಗೆ ಹಣ ಪಾವತಿಸಲಾಗಿದೆ. ಕಾಮಗಾರಿ ನಡೆದ ಸ್ಥಳಗಳಲ್ಲಿ ನಾಮಫಲಕ ಅಳವಡಿಸದೆ ಮತ್ತು ಹೆಚ್ಚುವರಿಯಾಗಿ ನಕಲಿ ಜಾಬ್ ಕಾರ್ಡ್‌ಗಳನ್ನು ಸೃಷ್ಟಿಸಿ ₹49.27 ಕೋಟಿಯನ್ನು ಸರ್ಕಾರಕ್ಕೆ ನಷ್ಟ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಪಂಚಾಯಿತಿ ಇಒ ಆಗಿದ್ದ ಮೊದಲನೇ ಆರೋಪಿ ಪಂಪಾಪತಿ ಹಿರೇಮಠ, ಎರಡನೇ ಆರೋಪಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕು ಇಒ ಬಸಣ್ಣ ನಾಯಕ ಹೇಮನೂರು ಅವರು ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.

ಅಂತಿಮ ವರದಿ ಬಂದ ಬಳಿಕ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ತಾಂತ್ರಿಕ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಅಕ್ರಮದಲ್ಲಿ ಭಾಗಿಯಾದವರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಅವ್ಯವಹಾರದ ಸಂಬಂಧ ಈವರೆಗೆ 60ಕ್ಕೂ ಹೆಚ್ಚು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೆರಿಗೆ ವಂಚಿಸಿದ್ದ ಶ್ರೀ ಮಾರುತೇಶ್ವರ ಎಂಟರ್‌ಪ್ರೈಸಸ್‌ ಕಚೇರಿ ಮೇಲೆ ಕಳೆದ ಮೇ 12ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅವ್ಯವಹಾರ ಕುರಿತು ಪ್ರಕರಣ ದಾಖಲಾಗಿರುವ ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ ಅವರಿಗೆ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+