ನರೇಗಾ ಕಾಮಗಾರಿಗಳಲ್ಲಿ ಅಕ್ರಮ: ರಾಯಚೂರಿನಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್
ರಾಯಚೂರು ನವೆಂಬರ್ 27: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ.

ನರೇಗಾ ಯೋಜನೆಯಡಿ 2020-21, 2021-22 ಹಾಗೂ 2022-23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ ₹11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ ₹32.51 ಕೋಟಿಯನ್ನು ಅಕ್ರಮವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ₹102.32 ಕೋಟಿಯನ್ನು ಶ್ರೀ ಮಾರುತೇಶ್ವರ ಎಂಟರ್ಪ್ರೈಸಸ್ಗೆ ನಿಯಮ ಮೀರಿ ಪಾವತಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
₹5.10 ಕೋಟಿ ರಾಜಧನವನ್ನು ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಪಾವತಿಸದೇ ಸರ್ಕಾರಕ್ಕೆ ನಷ್ಟಮಾಡಲಾಗಿದೆ. ವೈಯಕ್ತಿಯವಾಗಿ ಕಟ್ಟಿಕೊಂಡ ದನದ ಶೆಡ್ಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸದೆ ನಿಯಮ ಬಾಹಿರವಾಗಿ ಸಾಮಗ್ರಿ ಪೂರೈಕೆದಾರರಿಗೆ ಹಣ ಪಾವತಿಸಲಾಗಿದೆ. ಕಾಮಗಾರಿ ನಡೆದ ಸ್ಥಳಗಳಲ್ಲಿ ನಾಮಫಲಕ ಅಳವಡಿಸದೆ ಮತ್ತು ಹೆಚ್ಚುವರಿಯಾಗಿ ನಕಲಿ ಜಾಬ್ ಕಾರ್ಡ್ಗಳನ್ನು ಸೃಷ್ಟಿಸಿ ₹49.27 ಕೋಟಿಯನ್ನು ಸರ್ಕಾರಕ್ಕೆ ನಷ್ಟ ಮಾಡಲಾಗಿದೆ ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಪಂಚಾಯಿತಿ ಇಒ ಆಗಿದ್ದ ಮೊದಲನೇ ಆರೋಪಿ ಪಂಪಾಪತಿ ಹಿರೇಮಠ, ಎರಡನೇ ಆರೋಪಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕು ಇಒ ಬಸಣ್ಣ ನಾಯಕ ಹೇಮನೂರು ಅವರು ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.
ಅಂತಿಮ ವರದಿ ಬಂದ ಬಳಿಕ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ತಾಂತ್ರಿಕ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಅಕ್ರಮದಲ್ಲಿ ಭಾಗಿಯಾದವರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಅವ್ಯವಹಾರದ ಸಂಬಂಧ ಈವರೆಗೆ 60ಕ್ಕೂ ಹೆಚ್ಚು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತೆರಿಗೆ ವಂಚಿಸಿದ್ದ ಶ್ರೀ ಮಾರುತೇಶ್ವರ ಎಂಟರ್ಪ್ರೈಸಸ್ ಕಚೇರಿ ಮೇಲೆ ಕಳೆದ ಮೇ 12ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅವ್ಯವಹಾರ ಕುರಿತು ಪ್ರಕರಣ ದಾಖಲಾಗಿರುವ ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅವರಿಗೆ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications