ನರೇಗಾ ಕಾಮಗಾರಿಗಳಲ್ಲಿ ಅಕ್ರಮ: ರಾಯಚೂರಿನಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್
ರಾಯಚೂರು ನವೆಂಬರ್ 27: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ.

ನರೇಗಾ ಯೋಜನೆಯಡಿ 2020-21, 2021-22 ಹಾಗೂ 2022-23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ ₹11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ ₹32.51 ಕೋಟಿಯನ್ನು ಅಕ್ರಮವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ₹102.32 ಕೋಟಿಯನ್ನು ಶ್ರೀ ಮಾರುತೇಶ್ವರ ಎಂಟರ್ಪ್ರೈಸಸ್ಗೆ ನಿಯಮ ಮೀರಿ ಪಾವತಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
₹5.10 ಕೋಟಿ ರಾಜಧನವನ್ನು ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಪಾವತಿಸದೇ ಸರ್ಕಾರಕ್ಕೆ ನಷ್ಟಮಾಡಲಾಗಿದೆ. ವೈಯಕ್ತಿಯವಾಗಿ ಕಟ್ಟಿಕೊಂಡ ದನದ ಶೆಡ್ಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸದೆ ನಿಯಮ ಬಾಹಿರವಾಗಿ ಸಾಮಗ್ರಿ ಪೂರೈಕೆದಾರರಿಗೆ ಹಣ ಪಾವತಿಸಲಾಗಿದೆ. ಕಾಮಗಾರಿ ನಡೆದ ಸ್ಥಳಗಳಲ್ಲಿ ನಾಮಫಲಕ ಅಳವಡಿಸದೆ ಮತ್ತು ಹೆಚ್ಚುವರಿಯಾಗಿ ನಕಲಿ ಜಾಬ್ ಕಾರ್ಡ್ಗಳನ್ನು ಸೃಷ್ಟಿಸಿ ₹49.27 ಕೋಟಿಯನ್ನು ಸರ್ಕಾರಕ್ಕೆ ನಷ್ಟ ಮಾಡಲಾಗಿದೆ ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಪಂಚಾಯಿತಿ ಇಒ ಆಗಿದ್ದ ಮೊದಲನೇ ಆರೋಪಿ ಪಂಪಾಪತಿ ಹಿರೇಮಠ, ಎರಡನೇ ಆರೋಪಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕು ಇಒ ಬಸಣ್ಣ ನಾಯಕ ಹೇಮನೂರು ಅವರು ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.
ಅಂತಿಮ ವರದಿ ಬಂದ ಬಳಿಕ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ತಾಂತ್ರಿಕ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಅಕ್ರಮದಲ್ಲಿ ಭಾಗಿಯಾದವರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಅವ್ಯವಹಾರದ ಸಂಬಂಧ ಈವರೆಗೆ 60ಕ್ಕೂ ಹೆಚ್ಚು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತೆರಿಗೆ ವಂಚಿಸಿದ್ದ ಶ್ರೀ ಮಾರುತೇಶ್ವರ ಎಂಟರ್ಪ್ರೈಸಸ್ ಕಚೇರಿ ಮೇಲೆ ಕಳೆದ ಮೇ 12ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅವ್ಯವಹಾರ ಕುರಿತು ಪ್ರಕರಣ ದಾಖಲಾಗಿರುವ ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅವರಿಗೆ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications