ದೇವದುರ್ಗದಲ್ಲಿ ಕರ್ತವ್ಯನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಪುತ್ರನಿಂದ ಹಲ್ಲೆ!
ರಾಯಚೂರು ಫೆಬ್ರವರಿ 12: ಕರ್ತವ್ಯನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಪುತ್ರ ಹಲ್ಲೆ ಮಾಡಿದ ಆರೋಪ ದೇವದುರ್ಗದಲ್ಲಿ ಕೇಳಿ ಬಂದಿದೆ. ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕರ್ತವ್ಯನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ.
ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೆಡ್ ಕಾನ್ಸ್ಟೆಬಲ್ ಹನುಮಂತರಾಯ ಆರೋಪಿಸಿದ್ದಾರೆ. ಹನುಮಂತರಾಯ ಅವರು ತಾವು ಕರ್ತವ್ಯದಲ್ಲಿ ಇದ್ದಾಗಲೇ ಜೆಡಿಎಸ್ ಶಾಸಕಿ ಪುತ್ರ ತಮ್ಮ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಸದ್ಯ ಹನುಮಂತರಾಯ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ತಾಲ್ಲೂಕಿನ ದೊಂಡಂಬಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಶಾಸಕಿ ಕರೆಮ್ಮ ಅವರ ಪುತ್ರ ಹಾಗೂ ಆಪ್ತ ಸಹಾಯಕ ಪ್ರವಾಸಿ ಮಂದಿರಕ್ಕೆ ಬರುವಂತೆ ಕರೆ ಮಾಡಿದ್ದರಿಂದ ಪ್ರವಾಸಿ ಮಂದಿರಕ್ಕೆ ಹೋದೆ ಎಂದು ಹಲ್ಲೆಗೊಳಗಾದ ಹನುಮಂತರಾಯ ತಿಳಿಸಿದ್ದಾರೆ.
ದೊಂಡಂಬಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ಬೀಟ್ನಲ್ಲಿದ್ದ ಪೊಲೀಸ್ ಸಿಬ್ಬಂದಿ ಪ್ರೇಮಾ ಹಾಗೂ ಅಲ್ಲಾಬಕ್ಷ್ ಪೊಲೀಸ್ ಠಾಣೆಗೆ ಮಾಹಿತಿ ನೀಡದೆ ಇರುವುದು ಘಟನೆಗೆ ಕಾರಣ ಎನ್ನುವ ಮಾತು ಪೊಲೀಸ್ ವಲಯದಲ್ಲಿ ಕೇಳಿ ಬರುತ್ತಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಕೆಲ ಬಿಜೆಪಿ ಮುಖಂಡರು, 'ಪೊಲೀಸರಿಗೆ ಈ ಪರಿಸ್ಥಿತಿ ಬಂದಿದೆ. ತಾಲ್ಲೂಕಿನ ಜನ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ' ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸ್ ಇನ್ಸ್ಪೆಕ್ಟರ್ ಅಶೋಕ ಸದಲಗಿ ನಿರಾಕರಿಸಿದರು.
ಠಾಣೆ ಮುಂದೆ ಪೊಲೀಸರ ವಿರುದ್ಧ ಕಿಡಿಕಾರಿದ ಶಾಸಕಿ ಕರೆಮ್ಮ ನಾಯಕ್..?
ದೇವದುರ್ಗ ಪೇದೆ ಮೇಲೆ ಹಲ್ಲೆ ಪ್ರಕರಣಕ್ಕೆ ವಿಚಾರಕ್ಕೆ ಪೊಲೀಸರು ಸುಳ್ಳು ಕೇಸ್ ದಾಖಲಿಸಿಕೊಂಡು ನನ್ನ ಹೆಸರು ಕೆಡಿಸಲು ಹುನ್ನಾರ ಮಾಡಿದ್ದಾರೆ ಎಂದು ಪುತ್ರ, ಆಪ್ತ ಸಹಾಯಕನ ಪರ ರಾತ್ರಿಯಿಡೀ ಪೊಲೀಸ್ ಠಾಣೆ ಮುಂದೆ ಕೂತು ಪ್ರತಿಭಟನೆ ಮಾಡಿ, ಪೊಲೀಸರ ವಿರುದ್ದ ಶಾಸಕಿ ಕರೆಮ್ಮ ಅವರು ಅಸಮಧಾನ ಹೊರಹಾಕಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ಪ್ರವಾಸಿ ಮಂದಿರದಲ್ಲಿ ಹಲ್ಲೆ ಘಟನೆ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇದೆ ದೂರು ದಾಖಲಿಸಿದ್ದಾರೆ. ಶಾಸಕಿ ಪುತ್ರ ಸಂತೋಷ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ರಫೀಕ್ ಸೇರಿ 8 ಜನ ವಿರುದ್ದ ಕೇಸ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪೊಲೀಸ್ ಠಾಣೆ ಮುಂದೆ, ಪುತ್ರ, ಸಹೋದರ ಹಾಗೂ ಆಪ್ತ ಕಾರ್ಯದರ್ಶಿ ಪರವಹಿಸಿ ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೂರ್ವಾಪರ ಪರಿಶೀಲನೆ , ತನಿಖೆ ಮಾಡದೆ ಪಿ.ಎ ಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಪೇದೆ ಕುಡಿದಿದ್ದಾನೆ ಅವನ ಮಾತು ನಂಬಿ ಜಾತಿನಿಂದನೆ ಕೇಸ್ ಹೇಗೆ ಹಾಕಿದ್ರಿ, ನಾವೂ ಸಹ ಅಟ್ರಾಸಿಟಿ ದಾಖಲಿಸುತ್ತೇವೆ ಎಂದು ಶಾಸಕಿ ಪಟ್ಟು ಹಿಡಿದಾಗ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications