Get Updates
Get notified of breaking news, exclusive insights, and must-see stories!

ಯಾರೂ ಜೆಡಿಎಸ್ ಬಿಡಲ್ಲ, ಬೇರೆಯವರೇ ನಮ್ಮಲ್ಲಿಗೆ ಬರ್ತಾರೆ: ಶರವಣ

ರಾಯಚೂರು, ಜನವರಿ 9: ಸಂಕ್ರಾಂತಿಯ ನಂತರ ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಹಾಗೂ ರಾಯಚೂರು ಜಿಲ್ಲೆಯ ಜೆಡಿಎಸ್ ಜವಾಬ್ದಾರಿ ವಹಿಸಿರುವ ಟಿ.ಎ.ಶರವಣ ಮಂಗಳವಾರ ಹೇಳಿಕೆ ನೀಡಿದರು.

ಜೆಡಿಎಸ್ ನ ಹಾಲಿ ಶಾಸಕರಿಗೆ ಎಲ್ಲರಿಗೂ ಸ್ಪರ್ಧೆಗೆ ಪಕ್ಷದ ಟಿಕೆಟ್ ಖಚಿತ ಎಂದು ಹೇಳಿದ ಅವರು, ಪಕ್ಷದ ಯಾವುದೇ ಶಾಸಕರು ಜೆಡಿಎಸ್ ಬಿಡುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿಲ್ಲ ಎಂದರು. ಜೆಡಿಎಸ್ ಶಾಸಕರನ್ನು ಬಿಜೆಪಿಯು ತನ್ನೆಡೆಗೆ ಸೆಳೆದಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದರು.

Karnataka assembly elections JDS candidates list will release after Sankranti

ಒಂದು ವೇಳೆ ಪಕ್ಷದ ಮುಖಂಡರಲ್ಲಿ ವೈಮನಸ್ಯ ಅಥವಾ ಅಸಮಾಧಾನ ಇದ್ದರೆ ಬಗೆಹರಿಸಲಾಗುವುದು. ಸಂಕ್ರಾಂತಿ ಹಬ್ಬದ ನಂತರ ಹೈದರಾಬಾದ್- ಕರ್ನಾಟಕ ಜಿಲ್ಲೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಇನ್ನು ವಿವಿಧ ಪಕ್ಷಗಳ ಮುಖಂಡರು, ಈ ಹಿಂದೆ ಜನತಾ ಪಕ್ಷವಾಗಿದ್ದಾಗ ಜತೆಯಲ್ಲಿದ್ದವರು ಸಹ ಸಂಪರ್ಕದಲ್ಲಿದ್ದಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+