ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ ತಪ್ಪಿದ ಬಿಜೆಪಿ ಟಿಕೆಟ್, ಕೆ.ಎಸ್.ಈಶ್ವರಪ್ಪ ಆಪ್ತ ಕಾಂಗ್ರೆಸ್‌ಗೆ!

|
Google Oneindia Kannada News

Recommended Video

ಕೆ ಎಸ್ ಈಶ್ವರಪ್ಪನವರ ಆಪ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ | Oneindia Kannada

ಬೆಂಗಳೂರು, ಏಪ್ರಿಲ್ 25 : ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗ ಬಿಜೆಪಿ ನಾಯಕರಿಗೆ ಕೆ.ವಿರೂಪಾಕ್ಷಪ್ಪ ಮುಜುಗರ ತಂದಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

ಕೆ.ವಿರೂಪಾಕ್ಷಪ್ಪ ಅವರು ಬೆಂಗಳೂರಿಗೆ ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾರೆ. ಕಾಂಗ್ರೆಸ್ ಸೇರುವುದಾಗಿ ಅವರು ಘೋಷಣೆ ಮಾಡಿದ್ದು, ಇಂದು ಅಥವ ನಾಳೆ ಪಕ್ಷ ಸೇರುವ ಸಾಧ್ಯತೆ ಇದೆ.

 ಸಿಗದ ಟಿಕೆಟ್: ರಾಜೀನಾಮೆ ನೀಡಿದ ರಾಯಣ್ಣ ಬ್ರಿಗೇಡ್‌ನ ವಿರೂಪಾಕ್ಷಪ್ಪ ಸಿಗದ ಟಿಕೆಟ್: ರಾಜೀನಾಮೆ ನೀಡಿದ ರಾಯಣ್ಣ ಬ್ರಿಗೇಡ್‌ನ ವಿರೂಪಾಕ್ಷಪ್ಪ

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತರಾದ ಕೆ.ವಿರೂಪಾಕ್ಷಪ್ಪ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷರಾಗಿದ್ದರು. 2018 ರ ಚುನಾವಣೆಗೆ ಸಿಂಧನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

Karnataka elections : K Virupakshappa to join Congress

ಬಿಜೆಪಿ ಸಿಂಧನೂರು ಕ್ಷೇತ್ರಕ್ಕೆ ಕೊಲ್ಲಾ ಶೇಷಗಿರಿ ರಾವ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈಗ ಕಾಂಗ್ರೆಸ್ ಸೇರುತ್ತಿದ್ದಾರೆ.

 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಕೊಪ್ಪಳದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಕೆ.ಎಸ್.ಈಶ್ವರಪ್ಪ ಜೊತೆ ಗುರುತಿಸಿಕೊಂಡ ನಾಯಕರು. ಚುನಾವಣೆಗೆ ಸ್ಪರ್ಧಿಸಲು ಈಶ್ವರಪ್ಪ ಅವರಿಗೆ ಟಿಕೆಟ್ ಸಿಕ್ಕಿದೆ. ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷರಾದ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈ ತಪ್ಪಿತ್ತು.

English summary
Koppal Former MP and Sangolli Rayanna Brigade state president K.Virupakshappa will join Congress. He is aspirant for BJP ticket in Sindhanur assembly constituency, Raichur, But, party dined ticket for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X