ರಾಯಚೂರು: ಶತಮಾನ ಪೂರೈಸಿದ ಆಂಧ್ರ ಗಡಿಭಾಗದ ಕನ್ನಡ ಮಾಧ್ಯಮ ಶಾಲೆ
ರಾಯಚೂರು, ನವೆಂಬರ್, 01: ಆಂಧ್ರಪ್ರದೇಶದ ನದಿಚಾಗಿ ಗ್ರಾಮದಲ್ಲಿರುವ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆ ಶತಮಾನ ಪೂರೈಸಿದೆ. ಹಾಗೆಯೇ ಕನ್ನಡ ಮಾಧ್ಯಮ ಉನ್ನತ ಪ್ರೌಢಶಾಲೆ ಐವತ್ತು ವರ್ಷಗಳನ್ನು ಪೂರೈಸಿರುವುದು ಅಲ್ಲಿನ ಜನರಿಗೆ ಕನ್ನಡ ನಾಡು, ನುಡಿಯ ಬಗ್ಗೆ ಇರುವ ಅಭಿಮಾನಕ್ಕೆ ಸಾಕ್ಷಿಯಾಗಿದೆ.
ಈ ಕನ್ನಡ ಮಾಧ್ಯಮ ಶಾಲೆ ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ದಡದ ಸಮೀಪದಲ್ಲಿ ಇದೆ. ರಾಜ್ಯದಲ್ಲಿ ಅನೇಕ ಕಡೆ ವಿದ್ಯಾರ್ಥಿಗಳ ಕೊರತೆಯಿಂದ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಆದರೆ ಆಂಧ್ರ ಪ್ರದೇಶದ ಗಡಿಭಾಗದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯವ ಮೂಲಕ ಕನ್ನಡ ಭಾಷಾ ಪ್ರೇಮವನ್ನು ಮೆರೆಯುತ್ತಿದ್ದಾರೆ.
ಶಾಲೆಯಲ್ಲಿರುವ ಒಟ್ಟು ಮಕ್ಕಳ ಸಂಖ್ಯೆ
ನದಿಚಾಗಿಯ ಕನ್ನಡ ಮಾಧ್ಯಮ ಶಾಲೆಯನ್ನು 1913ರಲ್ಲಿ ಬ್ರಿಟೀಷ್ ಅಧಿಕಾರಿಗಳು ಬಳ್ಳಾರಿ ಶಿಕ್ಷಣಾಧಿಕಾರಿಗಳಿಂದ ಮಂಜೂರು ಮಾಡಿಸಿದ್ದರು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ ಒಟ್ಟು 227 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ ಎಂದು ಮುಖ್ಯ ಶಿಕ್ಷಕ ಗುರುರಾಜ ಶೆಟ್ಟಿ ಅವರು ತಿಳಿಸಿದ್ದಾರೆ. ಇನ್ನು ಐವತ್ತು ವರ್ಷಗಳನ್ನು ಪೂರೈಸಿರುವ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 6ರಿಂದ 10ನೇ ತರಗತಿವರೆಗೆ 263 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ ಎಸ್.ಲಕ್ಷ್ಮಿಕಾಂತನಾರಾಯಣ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲು ಮನವಿ
ಆಂಧ್ರ ಪ್ರದೇಶದ ಕೌತಳಂ ಮಂಡಲದ ವ್ಯಾಪ್ತಿಯ ಗ್ರಾಮಗಳಾದ ನದಿಚಾಗಿ, ಮೈಲಾಪೂರ, ವಲ್ಲೂರು, ಅಗಸಲದಿನ್ನಿ, ಬಾಪೂರಂ, ರೌಡೂರು, ಉಪ್ಪರಹಾಳು, ಕುಂಟ್ನಾಳ್, ಬದನೇಹಾಳ್, ಕಾಮಾವರಂ, ಕೌತಳಂ ಗ್ರಾಮಗಳಲ್ಲಿನ ಒಟ್ಟು 11 ಜಿಲ್ಲಾ ಪರಿಷತ್ ಮಂಡಲ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗಳು ಇವೆ. ಇಲ್ಲಿ 1,886 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಹಾಗೂ 8 ಜಿಲ್ಲಾ ಪರಿಷತ್ ಕನ್ನಡ ಉನ್ನತ ಪ್ರೌಢಶಾಲೆಗಳಲ್ಲಿ 1,754 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ಆಂಧ್ರದ ಗಡಿ ಭಾಗದಲ್ಲಿನ ಕನ್ನಡ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುತ್ತಿದೆ. ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಬೋಧನೆಗೆ ಅಗತ್ಯ ಶಿಕ್ಷಕರ ನೇಮಕ ಸೇರಿದಂತೆ ಮೂಲಸೌಕರ್ಯವನ್ನು ಕಲ್ಪಿಸಬೇಕು. ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕೈಗೊಳ್ಳಲು ಅವಕಾಶವನ್ನು ಕಲ್ಪಿಸಬೇಕು. ಕರ್ನಾಟಕ ರಾಜ್ಯದಲ್ಲಿನ ವಸತಿ ನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಮೀಸಲಾತಿ ನೀಡಬೇಕು ಎಂದು ಆಂಧ್ರಪ್ರದೇಶದ ಗಡಿಭಾಗದ ಗ್ರಾಮಸ್ಥರು ಮನವಿ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications