ದೇವದುರ್ಗ: ಕೆಐಎಡಿಬಿ ನಿರ್ಲಕ್ಷ್ಯ, ಉದ್ಯೋಗ ಸೃಷ್ಟಿಗೆ ಆಪತ್ತು
ರಾಯಚೂರು, ಸೆಪ್ಟೆಂಬರ್, 22: ದೇವದುರ್ಗ ತಾಲೂಕು ಕೇಂದ್ರದಲ್ಲಿ ಇದುವರೆಗೂ ಕೈಗಾರಿಕಾ ವಲಯ ಅಭಿವೃದ್ಧಿಗೊಳಿಸಿ ಉದ್ದಿಮೆಗಳನ್ನು ಆರಂಭಿಸಲು ಅವಕಾಶ ಮಾಡಿಲ್ಲ. ಇದರಿಂದ ಯುವಕರು ಉದ್ಯೋಗವಿಲ್ಲದೇ ಪರಿತಪಿಸುವಂತಾಗಿದೆ.
ದೇವದುರ್ಗವನ್ನು ನಿಜಕ್ಕೂ ಅಭಿವೃದ್ಧಿ ಮಾಡುವ ಕಾಳಜಿ ಇದ್ದರೆ, ಸಣ್ಣಸಣ್ಣ ಉದ್ದಿಮೆಗಳನ್ನು ಸ್ಥಾಪಿಸಬೇಕು. ಇದಕ್ಕೆ ಪರ್ಯಾಯವಾಗಿ ಕೈಗಾರಿಕಾ ವಲಯವೊಂದನ್ನು ಅಭಿವೃದ್ಧಿ ಪಡಿಸುವ ಅಗತ್ಯವಿದೆ ಎಂದು ಪ್ರಗತಿಪರರು ಒತ್ತಾಯಿಸುತ್ತಿದ್ದಾರೆ. ಕೈಗಾರಿಕಾ ವಲಯ ಅಭಿವೃದ್ಧಿಗಾಗಿ ದೇವದುರ್ಗ ಪಟ್ಟಣದಿಂದ ಜಾಲಹಳ್ಳಿ ಮಾರ್ಗದಲ್ಲಿ ಮೂರು ದಶಕಗಳ ಹಿಂದೆಯೇ 30 ಹೆಕ್ಟೇರ್ ಜಮೀನು ಕಾಯ್ದಿರಿಸಲಾಗಿದೆ. ಇದುವರೆಗೂ ಮೀಸಲು ಜಮೀನು ಬಳಕೆ ಆಗಿಲ್ಲ. ಅದರಲ್ಲಿ ದೊಡ್ಡಮಟ್ಟದ ಮುಳ್ಳಿನ ಪೊದೆಗಳು ಬೆಳೆದಿವೆ. ಇದರ ಮಧ್ಯೆ ಜಮೀನು ನೀಡಿದವರು ಹೆಚ್ಚುವರಿ ಪರಿಹಾರಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ತೀರ್ಪಿನ ಬಳಿಕ ಪರಿಹಾರ ವಿತರಣೆಯೂ ಮುಗಿದಿದೆ. ಪಹಣಿಗಳಲ್ಲಿ ಈಗಾಗಲೇ ಕೆಐಎಡಿಬಿ ಹೆಸರು ಸೇರ್ಪಡೆ ಆಗಿದೆ.
ಕೆಐಎಡಿಬಿ ನಿರ್ಲಕ್ಷ್ಯ, ಉದ್ಯೋಗ ಸೃಷ್ಟಿಗೆ ಆಪತ್ತು
ಮುಳ್ಳಿನ ಪೊದೆಗಳನ್ನು ಕತ್ತರಿಸಿ ಸರ್ವೇ ಮಾಡಿಸಬೇಕಾದ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಕಚೇರಿಯ ಎಂಜಿನಿಯರ್ಗಳು ಇದುವರೆಗೂ ಸ್ಪಂದಿಸುತ್ತಿಲ್ಲ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯು 2017ರಿಂದಲೂ ಸಭೆಗಳನ್ನು ನಡೆಸಿ ಸೂಚನೆ ನೀಡುತ್ತಾ ಬಂದಿದೆ. ಆದರೆ ಕೈಗಾರಿಕಾ ವಲಯ ಅಭಿವೃದ್ಧಿಪಡಿಸುವ ಕೆಲಸ ಮಾತ್ರ ಆಗುತ್ತಿಲ್ಲ. ಉದ್ದಿಮೆಗಳನ್ನು ಸ್ಥಾಪಿಸುವುದಕ್ಕೆ ಯೋಜನೆ ಮಾಡಿಕೊಂಡವರಿಗೆ ಸೂಕ್ತ ಸ್ಥಳಾವಕಾಶ ಇಲ್ಲದೆ ನಿರಾಸೆ ಅನುಭವಿಸುತ್ತಿದ್ದಾರೆ.

ಭೂ ಕಬಳಿಕೆಗೆ ಕಾಯುತ್ತಿರುವ ರಾಜಕಾರಣಿಗಳು
ದೇವದುರ್ಗಕ್ಕೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಉದ್ದಿಮೆಗಳು ಬರುವುದಕ್ಕೆ ಅವಕಾಶ ಆಗುತ್ತಿಲ್ಲ. ಹೀಗಾಗಿ ಯುವಕರಿಗೆ ಉದ್ಯೋಗಾಕಾಶಗಳು ಇಲ್ಲ. ರಾಘವೇಂದ್ರ ಕುಷ್ಟಗಿ ಅವರ ನೇತೃತ್ವದಲ್ಲಿ ಜನಸಂಗ್ರಾಮ ಪರಿಷತ್ ನಡೆಸಿದ ಹೋರಾಟದಿಂದಾಗಿ ದೇವದುರ್ಗ ಕೈಗಾರಿಕಾ ವಲಯದ ಜಮೀನು ಉಳಿದಿದೆ. ಮೂಲ ಉದ್ದೇಶಕ್ಕೆ ಬಳಕೆ ಆಗದ ಭೂಮಿಯನ್ನು ಅತಿಕ್ರಮಿಸುವುದಕ್ಕೆ ರಾಜಕಾರಣಿಗಳು ಮತ್ತು ಭೂ ಪರಿಹಾರ ಪಡೆದುಕೊಂಡವರು ಕಾತುರದಿಂದ ಕಾಯುತ್ತಿದ್ದಾರೆ. ಕೈಗಾರಿಕಾ ವಲಯದ ಅಭಿವೃದ್ಧಿಗಾಗಿ ಜನಸಂಗ್ರಾಮ ಪರಿಷತ್ನಿಂದ ಜಿಲ್ಲಾಡಳಿತಕ್ಕೆ ನಿರಂತರ ಒತ್ತಾಯವನ್ನು ಮಾಡಲಾಗುತ್ತಿದೆ. 'ಕೆಐಎಡಿಬಿ ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು. ದೇವದುರ್ಗದಲ್ಲಿ ತುರ್ತಾಗಿ ಕೈಗಾರಿಕಾ ವಲಯದ ಅಭಿವೃದ್ಧಿಗಾಗಿ ಜಿಲ್ಲಾಡಳಿತವೇ ನೇರವಾಗಿ ಕ್ರಮವಹಿಸಬೇಕು' ಎನ್ನುವುದು ಹೋರಾಟಗಾರರ ಒತ್ತಾಯ ಆಗಿದೆ.
ಬೆಳೆದು ನಿಂತ ದಟ್ಟನೆಯ ಮುಳ್ಳಿನ ಗಿಡಗಳು
ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರು ಕಳೆದ ಜೂನ್ನಲ್ಲಿ ಏಕಗವಾಕ್ಷಿ ಸಮಿತಿ ಸಭೆ ನಡೆಸಿದ್ದಾರೆ. ದೇವದುರ್ಗದ ಕೈಗಾರಿಕಾ ವಲಯ ಮೀಸಲು ಜಾಗದಲ್ಲಿ ಗಿಡಗಂಟಿಗಳನ್ನು ತೆರವು ಮಾಡಿಲ್ಲ. ನೀಲನಕ್ಷೆಯನ್ನು ಏಕೆ ತಯಾರಿಸಿಲ್ಲ? ಎಂದು ಕೆಐಎಡಿಬಿ ಎಇಇ ಅವರನ್ನು ಪ್ರಶ್ನಿಸಿದ್ದಾರೆ. 'ಈ ಹಿಂದೆ ಏಕಗವಾಕ್ಷಿ ಸಮಿತಿ ಸಭೆಗಳಲ್ಲಿ ನೀಡಿದ್ದ ಸೂಚನೆಗಳಂತೆ ಯಾವುದೇ ಕ್ರಮ ಜರುಗಿಸಿಲ್ಲ. ಈ ಬಗ್ಗೆ ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮತ್ತು ಕೈಗಾರಿಕಾ ವಲಯದ ಹೆಚ್ಚುವರಿ ಕಾರ್ಯದರ್ಶಿಗೆ ಪತ್ರ ಬರೆಯಬೇಕು' ಎಂದು ಸೂಚಿಸಿದ್ದಾರೆ.

ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ
"ಕೈಗಾರಿಕಾ ವಲಯಕ್ಕಾಗಿ ಮೀಸಲಿಟ್ಟ ಜಾಗದಲ್ಲಿ ಬೆಳೆದ ಮುಳ್ಳಿನ ಪೊದೆಗಳು ಬೆಳೆಯುತ್ತಲೇ ಇವೆ. ಆದರೆ ಜಿಲ್ಲಾಡಳಿತ ಮಾತ್ರ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಕೆಲಸ ನಡೆಯಬೇಕು ಎಂದರೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು," ಎಂದು ಜನಸಂಗ್ರಾಮ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ನಾಯಕ ಅಭಿಪ್ರಾಯವನ್ನು ಹೊರಹಾಕಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications