Raichur: ಫಿನಾಯಿಲ್ ವಾಸನೆಗೆ ಮೂರ್ಛೆ ತಪ್ಪಿದ ನಾಗರಹಾವು: ಸಮಯಪ್ರಜ್ಞೆಯಿಂದ ಉಳಿದ ಜೀವ
ರಾಯಚೂರು, ನವೆಂಬರ್ 15: ಫಿನಾಯಿಲ್ ವಾಸನೆಗೆ ನಾಗರ ಹಾವೊಂದು ಮೂರ್ಛೆ ಹೋಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿನಡೆದಿದೆ.
ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಿಲ್ಲಿಸಲಾಗಿದ್ದ ಇನೋವಾ ಕಾರಿನಲ್ಲಿ ಏಕಾಏಕಿ ನಾಗರ ಹಾವು ಪ್ರತ್ಯಕ್ಷವಾಗಿದೆ. ನಾಗರ ಹಾವನ್ನು ಕಂಡ ಚಾಲಕ ಭಯದಿಂದ ಹಾವು ಹೊರಬರಲು ಚಾಲಕ ಫಿನಾಯಿಲ್ ಸಿಂಪಡನೆ ಮಾಡಿದ್ದಾರೆ. ಈ ವೇಳೆ ಫಿನಾಯಿಲ್ ವಾಸನೆಗೆ ನಾಗರಹಾವು ಕಾರಿನಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ.

ಕೂಡಲೇ ಕಾರು ಚಾಲಕ ಲಿಂಗಸೂಗೂರಿನ ಉರಗ ತಜ್ಞ ಖಾಲೀದ್ ಚಾವೂಸ್ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞರ ಸಹಾಯದಿಂದ ನಾಗರ ಹಾವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಕೂಡಲೇ ನಾಗರಹಾವಿಗೆ ಕೃತಕ ಆಮ್ಲಜನಕ ನೀಡಿ ರಕ್ಷಣೆ ಮಾಡಲಾಗಿದೆ. ಚಿಕಿತ್ಸೆಯ ಬಳಿಕ ನಾಗರ ಹಾವು ಚೇತರಿಸಿಕೊಂಡಿಕೊಂಡಿದ್ದಾರೆ. ನಂತರ ಉರಗತಜ್ಞ ಖಾಲೀದ್ ಚಾವೂಸ್ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಹಾವುಗಳಿಗೆ ಪಿಐಟಿ ಅಳವಡಿಕೆ
ಮಾನವ-ಹಾವಿನ ಸಂಘರ್ಷ ತಡೆಗಾಗಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮಹತ್ವದ ಅಧ್ಯಯನಕ್ಕೆ ಮುಂದಾಗಿದೆ. ಹಾವುಗಳಿಗೆ ನಿಷ್ಕ್ರಿಯ ಇಂಟಿಗ್ರೇಟೆಡ್ ಟ್ರಾನ್ಸ್ಪಾಂಡರ್ (ಪಿಐಟಿ) ಟ್ಯಾಗ್ಗಳನ್ನು ಅಳವಡಿಸಲು ಕರ್ನಾಟಕ ಅರಣ್ಯ ಇಲಾಖೆಯು ಸಂಶೋಧನಾ ಮೌಲ್ಯಮಾಪನ ಸಮಿತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಸಂಸ್ಥೆಗೆ ಅನುಮತಿ ನೀಡಿದೆ.
ಇದು ಹಾವುಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಮಾನವ-ಹಾವುಗಳ ಘರ್ಷಣೆಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ನಾಗರಹಾವು, ರಸೆಲ್ಸ್ ವೈಪರ್ ಮತ್ತು ಪಿಟ್ ವೈಪರ್ಗಳ ಕುರಿತು ಮೂರು ಖಾಸಗಿ ಕಾರ್ಯಯೋಜನೆಗಳ ಮುಖಾಂತರ ಕರ್ನಾಟಕ ಅರಣ್ಯ ಇಲಾಖೆಯು ಟೆಲಿಮೆಟ್ರಿಕ್ ಅಧ್ಯಯನಗಳನ್ನು ನಡೆಸುತ್ತಿವೆ.
ಅರಣ್ಯ ಇಲಾಖೆಯು ಎಲ್ಲಾ ರೀತಿಯ ಹಾವುಗಳನ್ನು ಗಣನೆಗೆ ತೆಗೆದುಕೊಳ್ಳಲಿದೆ. ಕೆಟಿಆರ್ ಸಂಸ್ಥೆಯಲ್ಲಿ ತರಬೇತಿ ಪಡೆದ ಸಿಬ್ಬಂದಿ, ಉರಗತಜ್ಞದಿಂದ ರಕ್ಷಿಸಲ್ಪಟ್ಟ ಪ್ರತಿಯೊಂದು ಹಾವು ವಿಷಕಾರಿ ಅಥವಾ ವಿಷಕಾರಿಯಲ್ಲದಿದ್ದರೂ ಅದರೊಳಗೆ ಮೈಕ್ರೋಚಿಪ್ ಅನ್ನು ಸೇರಿಸುತ್ತಾರೆ. ದತ್ತಾಂಶದ ಆಧಾರದ ಮೇಲೆ ಸಂಘರ್ಷವನ್ನು ತಗ್ಗಿಸುವ ಕ್ರಮ ಇದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications