ಜಲಚರಗಳ ಜೀವಕ್ಕೆ ಕುತ್ತು ತಂದ ರಾಯಚೂರಿನ ವಿದ್ಯುತ್ ಸ್ಥಾವರಗಳು
ರಾಯಚೂರು, ಜುಲೈ.30: ರಾಜ್ಯಕ್ಕೆ ವಿದ್ಯುತ್ ನೀಡುವ ರಾಯಚೂರು ಜಿಲ್ಲೆಯ ಆರ್ ಟಿಪಿಎಸ್, ವೈಟಿಪಿಎಸ್ ಘಟಕಗಳಿಂದ ಕೃಷ್ಣಾ ನದಿ ವಿಷಕಾರಿಯಾಗುತ್ತಿದೆ. ಇತ್ತೀಚೆಗೆ ಪದೇ ಪದೇ ವಿದ್ಯುತ್ ಸ್ಥಾವರಗಳಿಂದ ಕೃಷ್ಣಾ ನದಿಗೆ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಹರಿಸಲಾಗುತ್ತಿದೆ.
ವಿದ್ಯುತ್ ಉತ್ಪಾದನಾ ಘಟಕಗಳಿಗೆ ಬಳಸುವ ತೈಲ, ಇನ್ನಿತರ ರಾಸಾಯನಿಕ ಮಿಶ್ರಿತ ನೀರು ಕೃಷ್ಣಾ ನದಿಯ ಒಡಲಿಗೆ ರಾಜಾರೋಷವಾಗಿ ಸೇರುತ್ತಿದೆ. ರಾಯಚೂರು ತಾಲೂಕಿನ ಕಾಡ್ಲೂರು ಮಾರ್ಗದ ನಾಲೆಗಳಿಂದ ಕೃಷ್ಣಾ ನದಿಗೆ ಕಲುಷಿತ ನೀರು ಹರಿಯುತ್ತಿದೆ.
ಇದರಿಂದ ಜನರ ಜೀವನಾಡಿ ಕೃಷ್ಣಾ ನದಿಯ ಒಡಲು ವಿಷವಾಗುತ್ತಿದೆ. ಸಹಜವಾಗಿ ಕೃಷ್ಣಾ ನದಿ ದಡದ ಗ್ರಾಮಗಳ ಗ್ರಾಮಸ್ಥರಲ್ಲಿ ಆತಂಕ ಕಾಡುತ್ತಿದೆ. ಅಲ್ಲದೇ ವಿದ್ಯುತ್ ಘಟಕಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರು ಕೃಷ್ಣಾ ನದಿಗೆ ಸೇರುವುದರಿಂದ ಜಲಚರಗಳ ಜೀವಕ್ಕೆ ಕುತ್ತು ಬರುತ್ತಿದೆ.

ಆರ್ ಟಿಪಿಎಸ್, ವೈಟಿಪಿಎಸ್ ಘಟಕಗಳ ನಿರ್ಲಕ್ಷ್ಯದ ವಿರುದ್ಧ ಸಂಬಂಧಿಸಿದ ಅಧಿಕಾರಿಗಳ ಗಮನ ತಂದರೂ ಪ್ರಯೋಜನವಾಗಿಲ್ಲ. ಹೀಗಾಗಿ ಆರ್.ಟಿಪಿಎಸ್, ವೈಟಿಪಿಎಸ್ ವಿರುದ್ಧ ಈ ಭಾಗದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿಂದೆ ಕೂಡ ಆರ್,ಟಿಪಿಎಸ್ ಘಟಕದಿಂದ ರಾಸಾಯನಿಕ ಮಿಶ್ರಿತ ನೀರು ನೀರಿನ ಹೊಂಡಕ್ಕೆ ಸೇರಿ ಎರಡು ಮೊಸಳೆ, ಸಾವಿರಾರು ಮೀನುಗಳು ಸಾವನ್ನಪ್ಪಿದ್ದವು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications