Leopard Attack: ಮೂವರ ಮೇಲೆ ಚಿರತೆ ದಾಳಿ- ಚಿರತೆ ಕೊಂದು ಮೆರವಣಿಗೆ ಮಾಡಿದ ಗ್ರಾಮಸ್ಥರು
ರಾಯಚೂರು ಜುಲೈ 08: ದೇವದುರ್ಗ ತಾಲ್ಲೂಕಿನ ಡಿ.ಕರಡಿಗುಡ್ಡ ಗ್ರಾಮದ ಹೊರವಲಯದಲ್ಲಿ ಮೂವರ ಮೇಲೆ ಚಿರತೆ ದಾಳಿ ಮಾಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ದೊಣ್ಣೆಗಳಿಂದ ಹೊಡೆದು ಚಿರತೆಯನ್ನೇ ಕೊಂದು ಹಾಕಿದ್ದಾರೆ.
ಗ್ರಾಮದ ಬಾಲಕನೊಬ್ಬ ಬೆಳಿಗ್ಗೆ 8 ಗಂಟೆಗೆ ಬಯಲು ಶೌಚಕ್ಕೆ ಹೊರಟಿದ್ದಾಗ ಚಿರತೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಬಾಲಕ ತಕ್ಷಣ ಮರಳಿ ಮನೆಗೆ ಬಂದು ಗ್ರಾಮಸ್ಥರಿಗೆ ಚಿರತೆ ಕಾಣಿಸಿದ್ದನ್ನು ತಿಳಿಸಿದ್ದಾನೆ.

ಮಕ್ಕಳ ಮೇಲೆ ದಾಳಿ ಮಾಡಿದರೆ ಕಷ್ಟ ಎಂದು ಆತಂಕಗೊಂಡ ಗ್ರಾಮಸ್ಥರು ಗುಂಪು ಕಟ್ಟಿಕೊಂಡು ಶಿಳ್ಳೆ ಕೇಕೆ ಹಾಕುತ್ತ ಪೊದೆಗಳತ್ತ ಹೋಗಿದ್ದಾರೆ. ಇದೇ ಅವಧಿಯಲ್ಲಿ ಹಠಾತ್ ಎರಗಿದ ಚಿರತೆ ಗ್ರಾಮದ ರಮೇಶ (35) ಮೇಲೆ ದಾಳಿ ಮಾಡಿ ಬಲಗೈ ಕಚ್ಚಿ ಗಾಯಗೊಳಿಸಿದೆ. ಬಿಡಿಸಲು ಹೋದ ಮಲ್ಲಣ್ಣ (42), ರಂಗನಾಥ (29) ಅವರ ಮೇಲೆಯೂ ದಾಳಿ ಮಾಡಿದೆ. ಮೂವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೊಬೈಲ್ ಮೂಲಕ ಮಾಹಿತಿ ನೀಡಿದರು. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿರತೆಗೆ ಅರವಳಿಕೆ ನೀಡಿ ಅಥವಾ ಬಲೆ ಹಾಕಿ ಹಿಡಿದು ಬೇರೆ ಕಡೆ ಸಾಗಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಸಮಪರ್ಕವಾದ ಉತ್ತರ ದೊರೆಯಲಿಲ್ಲ. ಮಧ್ಯಾನ 2 ಗಂಟೆ ಸುಮಾರಿಗೆ ಮತ್ತೊಬ್ಬ ಗ್ರಾಮಸ್ಥನ ಮೇಲೆ ದಾಳಿ ನಡೆಸಿದೆ. ಹೀಗಾಗಿ ಗ್ರಾಮಸ್ಥರು ರೊಚ್ಚಿಗೆದ್ದು ದೊಣ್ಣೆಗಳನ್ನು ಹಿಡಿದುಕೊಂಡು ಗುಡ್ಡದ ಮೇಲೆ ಹೋಗಿ ಹೊಡೆದು ಅದನ್ನು ಕೊಂದು ಹಾಕಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಚಿರತೆಯನ್ನು ಕೊಂದ ನಂತರ ಕೆಲವರು ಚಿರತೆ ಶವದೊಂದಿಗೆ ಪೊಟೊ ತೆಗೆಸಿಕೊಂಡರು. ನಂತರ ಅದರ ಕಾಲುಗಳನ್ನು ಹಿಡಿದು ಎತ್ತುಕೊಂಡು ಮೆರವಣಿಗೆ ಮಾಡಿದರು. ಅರಣ್ಯ ಇಲಾಖೆ ಸಿಬ್ಬಂದಿ ಮೂಕ ಪ್ರೇಕ್ಷಕರಾಗಿದ್ದರು.
'ಗ್ರಾಮದಲ್ಲಿ ಮೂವರ ಮೇಲೆ ಚಿರತೆ ದಾಳಿ ನಡೆಸಿರುವ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಪ್ರಕರಣವನ್ನು ಅವಲೋಕಿಸಿ ಚಿರತೆ ಕೊಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಅರಣ್ಯ ಇಲಾಖೆಯ ಡಿಸಿಎಫ್ ಪ್ರವೀಣ ಹೇಳಿದ್ದಾರೆ.
ಮೇ 18 ರಂದು ವಾಚನಾಯಕ ತಾಂಡದಲ್ಲಿ ಆಕಳು ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಾಲಹಳ್ಳಿ, ಬಿ. ಗಣೇಕಲ್, ಎನ್ ಗಣೇಕಲ್, ಆಲ್ಕೋಡ ಮತ್ತು ಅರಕೇರಾದಲ್ಲಿ ಹೋಬಳಿ ವ್ಯಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಎರಡು ತಿಂಗಳಲ್ಲಿ ತಾಲ್ಲೂಕಿನಾದ್ಯಂತ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅರಣ್ಯ ಇಲಾಖೆಯ ಅಧಿಕಾರಿಗಳ ಸ್ಪಂದನೆ ದೊರೆಯದ ಕಾರಣ ಗ್ರಾಮಸ್ಥರೇ ಚಿರತೆಯನ್ನು ಕೊಂದು ಹಾಕಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications