'ನಾನೇನು ಮಾಡಿಲ್ಲ ಸರ್ ಎಳ್ಕೊಂಡು ಹೋಗಿ ಹೊಡೆದ್ರು....' ಸಿಂಧನೂರಿನಲ್ಲಿ ವ್ಯಕ್ತಿಗೆ ಥಳಿತ, ಓರ್ವ ಅರೆಸ್ಟ್!
ರಾಯಚೂರು ಜನವರಿ 24: ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಗುಂಪು ವ್ಯಕ್ತಿ ಮೇಲೆ ಹಲ್ಲೆ ನಡೆಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ 53 ವರ್ಷದ ನಿಂಗಪ್ಪನನ್ನು ಪುರುಷರ ಗುಂಪೊಂದು ಥಳಿಸುತ್ತಿರುವುದು ಕಂಡುಬಂದಿದೆ. ಸಂತ್ರಸ್ತೆ ತನ್ನನ್ನು ಬಿಡುವಂತೆ ದಾಳಿಕೋರರಲ್ಲಿ ಮನವಿ ಮಾಡಿದರೂ, ಆರೋಪಿಗಳು ಆತನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಈ ಘಟನೆ ಜನವರಿ 20ರಂದು ನಡೆದಿದೆ.

ಆತನ ಪತ್ನಿ ನಾಗಮ್ಮ ರಕ್ಷಿಸಲು ಯತ್ನಿಸಿದಾಗ ಆಕೆಯ ಮೇಲೂ ಚಪ್ಪಲಿ, ದೊಣ್ಣೆಗಳಿಂದ ಥಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ನಿಂಗಪ್ಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗಾಗಿ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆರೋಪಿಗಳ ಪ್ರಕಾರ, ನಿಂಗಪ್ಪ ಅದೇ ಗ್ರಾಮದ ಮಹಿಳೆಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಇದು ಆತನ ಮೇಲೆ ಹಲ್ಲೆಗೆ ಕಾರಣವಾಗಿದೆ. ಆದರೆ ಈ ಆರೋಪವನ್ನು ನಿಂಗಪ್ಪ ಹಾಗೂ ಆತನ ಕುಟುಂಬಸ್ಥರು ಅಲ್ಲಗಳಿದಿದ್ದಾರೆ.
ಗ್ರಾಮದ ಅಂಗಡಿಯಲ್ಲಿ ಕುಳಿತು ಮಾತನಾಡುವಾಗ ನಿಂಗಪ್ಪ ಅವರಿಗೆ 'ನೀನು ಕೆಳಜಾತಿಯವನು ನಮ್ಮ ಸರಿ ಸಮಾನವಾಗಿ ಕುಳಿತು ಮಾತನಾಡುತ್ತಿಯಾ' ಎಂದು ಕೆಲ ವ್ಯಕ್ತಿಗಳು ನಿಂದನೆ ಮಾಡಿದ್ದರು ಎನ್ನಲಾಗಿದೆ. ಇದನ್ನು ಇಲ್ಲಿಗೆ ಬಿಡದೆ ಇದೇ ವಿಚಾರವನ್ನು ಮುಂಡಿಟ್ಟುಕೊಂಡು ನಿಂಗಪ್ಪ ಹೊಲದಿಂದ ಮನೆಗೆ ಹೋಗುತ್ತಿದ್ದ ವೇಳೆ, 10 ಜನ ಗ್ರಾಮದ ಇನ್ನೊಂದು ಕೋಮಿನವರಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ನಿಂಗಪ್ಪ ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಬಕ್ಕೆ ಕಟ್ಟಿ ಹಾಕಿ ಕಲ್ಲು, ಕಟ್ಟಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲದೇ ಜಗಳ ಬಿಡಿಸಲು ಬಂದ ಪತ್ನಿ ನಿಂಗಮ್ಮ ಅವರ ಸೀರೆ ಎಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಜೀವಬೆದರಿಕೆ ಹಾಕಿದ್ದರೆ ಎಂದು ತುರ್ವಿಹಾಳ ಪೋಲಿಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ನಿಂಗಮ್ಮ ನಮೋದಿಸಿದ್ದಾರೆ.
ನಿಂಗಮ್ಮ ಅವರು ತುರಿವ್ಹಾಲ್ ಪೊಲೀಸರಿಗೆ ದೂರು ನೀಡಿ ಒಂಬತ್ತು ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಒಂಬತ್ತು ಪುರುಷರ ಮೇಲೆ ಐಪಿಸಿ ಸೆಕ್ಷನ್ 342 (ತಪ್ಪಾದ ಬಂಧನ), 143 (ಕಾನೂನುಬಾಹಿರ ಸಭೆ), 147 (ಗಲಭೆ), 506 (ಅಪರಾಧ ಬೆದರಿಕೆ) ಮತ್ತು ದೌರ್ಜನ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಹಿಳೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ನಿಂಗಪ್ಪ ವಿರುದ್ಧ ಪ್ರತಿದೂರು ದಾಖಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಇತರ ಎಂಟು ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications