'ನಾನೇನು ಮಾಡಿಲ್ಲ ಸರ್ ಎಳ್ಕೊಂಡು ಹೋಗಿ ಹೊಡೆದ್ರು....' ಸಿಂಧನೂರಿನಲ್ಲಿ ವ್ಯಕ್ತಿಗೆ ಥಳಿತ, ಓರ್ವ ಅರೆಸ್ಟ್!
ರಾಯಚೂರು ಜನವರಿ 24: ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಗುಂಪು ವ್ಯಕ್ತಿ ಮೇಲೆ ಹಲ್ಲೆ ನಡೆಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ 53 ವರ್ಷದ ನಿಂಗಪ್ಪನನ್ನು ಪುರುಷರ ಗುಂಪೊಂದು ಥಳಿಸುತ್ತಿರುವುದು ಕಂಡುಬಂದಿದೆ. ಸಂತ್ರಸ್ತೆ ತನ್ನನ್ನು ಬಿಡುವಂತೆ ದಾಳಿಕೋರರಲ್ಲಿ ಮನವಿ ಮಾಡಿದರೂ, ಆರೋಪಿಗಳು ಆತನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಈ ಘಟನೆ ಜನವರಿ 20ರಂದು ನಡೆದಿದೆ.

ಆತನ ಪತ್ನಿ ನಾಗಮ್ಮ ರಕ್ಷಿಸಲು ಯತ್ನಿಸಿದಾಗ ಆಕೆಯ ಮೇಲೂ ಚಪ್ಪಲಿ, ದೊಣ್ಣೆಗಳಿಂದ ಥಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ನಿಂಗಪ್ಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗಾಗಿ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆರೋಪಿಗಳ ಪ್ರಕಾರ, ನಿಂಗಪ್ಪ ಅದೇ ಗ್ರಾಮದ ಮಹಿಳೆಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಇದು ಆತನ ಮೇಲೆ ಹಲ್ಲೆಗೆ ಕಾರಣವಾಗಿದೆ. ಆದರೆ ಈ ಆರೋಪವನ್ನು ನಿಂಗಪ್ಪ ಹಾಗೂ ಆತನ ಕುಟುಂಬಸ್ಥರು ಅಲ್ಲಗಳಿದಿದ್ದಾರೆ.
ಗ್ರಾಮದ ಅಂಗಡಿಯಲ್ಲಿ ಕುಳಿತು ಮಾತನಾಡುವಾಗ ನಿಂಗಪ್ಪ ಅವರಿಗೆ 'ನೀನು ಕೆಳಜಾತಿಯವನು ನಮ್ಮ ಸರಿ ಸಮಾನವಾಗಿ ಕುಳಿತು ಮಾತನಾಡುತ್ತಿಯಾ' ಎಂದು ಕೆಲ ವ್ಯಕ್ತಿಗಳು ನಿಂದನೆ ಮಾಡಿದ್ದರು ಎನ್ನಲಾಗಿದೆ. ಇದನ್ನು ಇಲ್ಲಿಗೆ ಬಿಡದೆ ಇದೇ ವಿಚಾರವನ್ನು ಮುಂಡಿಟ್ಟುಕೊಂಡು ನಿಂಗಪ್ಪ ಹೊಲದಿಂದ ಮನೆಗೆ ಹೋಗುತ್ತಿದ್ದ ವೇಳೆ, 10 ಜನ ಗ್ರಾಮದ ಇನ್ನೊಂದು ಕೋಮಿನವರಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ನಿಂಗಪ್ಪ ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಬಕ್ಕೆ ಕಟ್ಟಿ ಹಾಕಿ ಕಲ್ಲು, ಕಟ್ಟಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲದೇ ಜಗಳ ಬಿಡಿಸಲು ಬಂದ ಪತ್ನಿ ನಿಂಗಮ್ಮ ಅವರ ಸೀರೆ ಎಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಜೀವಬೆದರಿಕೆ ಹಾಕಿದ್ದರೆ ಎಂದು ತುರ್ವಿಹಾಳ ಪೋಲಿಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ನಿಂಗಮ್ಮ ನಮೋದಿಸಿದ್ದಾರೆ.
ನಿಂಗಮ್ಮ ಅವರು ತುರಿವ್ಹಾಲ್ ಪೊಲೀಸರಿಗೆ ದೂರು ನೀಡಿ ಒಂಬತ್ತು ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಒಂಬತ್ತು ಪುರುಷರ ಮೇಲೆ ಐಪಿಸಿ ಸೆಕ್ಷನ್ 342 (ತಪ್ಪಾದ ಬಂಧನ), 143 (ಕಾನೂನುಬಾಹಿರ ಸಭೆ), 147 (ಗಲಭೆ), 506 (ಅಪರಾಧ ಬೆದರಿಕೆ) ಮತ್ತು ದೌರ್ಜನ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಹಿಳೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ನಿಂಗಪ್ಪ ವಿರುದ್ಧ ಪ್ರತಿದೂರು ದಾಖಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಇತರ ಎಂಟು ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications