ರಾಯಚೂರಿನಲ್ಲಿ ಬಿರುಗಾಳಿ ಆಲಿಕಲ್ಲು ಮಳೆ, ನೆಲಕಚ್ಚಿದ ಮಾವು ತೋಟಗಳು
ರಾಯಚೂರು, ಮೇ 17: ಬಿರುಗಾಳಿ, ಗುಡುಗು ಸಹಿತ ಸೋಮವಾರ ಸಂಜೆ ಸುರಿದ ಆಲಿಕಲ್ಲಿನ ಮಳೆಯಿಂದ ರೈತರ ಮಾವು ತೋಟಗಳು ನೆಲಕೆಚ್ಚಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೇಸಿಗೆಯ ಬಿಸಿಲಿನಲ್ಲಿ ಬೆಂಡಾದ ಭೂಮಿಗೆ ಮಳೆ ತಂಪೆರಿದಿದೆ.
ರಾಯಚೂರು ತಾಲ್ಲೂಕಿನ ವಡ್ಲುರು, ಹನುಮನದೊಡ್ಡಿ , ದೇವಸೂಗೂರು , ಯದ್ಲಾಪುರ, ಶಕ್ತಿನಗರ, ಕೊರವಿಹಾಳ್, ಕೊರ್ತಕುಂದಾ ಗ್ರಾಮಗಳಲ್ಲಿ ಬಿರುಗಾಳಿ, ಗುಡುಗು ಸಹಿತಿ ಆಲಿಕಲ್ಲು ಮಳೆ ಸುರಿದಿದೆ. ಆ ಸೀಮಾಂತರದ ಪ್ರದೇಶದ ಜಮೀನುಗಳಲ್ಲಿ ಬೆಳೆದಿದ್ದ ಮಾವು ತೋಟಗಳು ಹಾಳಾಗಿರುವುದರಿಂದ ಸಾಲ ಮಾಡಿ ಬೆಳೆದಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು , ಅಕಾಲಿಕ ಮಳೆಗೆ ಬೇಸಿಗೆಯ ನಡುವೆಯೂ ನೀರುಣಿಸಿ ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆದ ರೈತರಿಗೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಸತತ ನಾಲ್ಕು ವರ್ಷಗಳ ಬರಕ್ಕೆ ಮಂಕಾಗಿದ್ದ ಮಾವು ಬೆಳೆಗಾರರ ಮುಖದಲ್ಲಿ ಈ ಬಾರಿ ಮಂದಹಾಸ ಮೂಡಿತ್ತು. ಹೀಗಾಗಿ ಒಳ್ಳೆಯ ಲಾಭದ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಸಿಡಿಲು ಬಡಿದಂತಾಗಿದೆ.
6 ಎಕೆರೆಯಲ್ಲಿ ಬೆಳೆದಿದ್ದ ಮಾವು ತೋಟ
ಮಳೆಗಿಂತ ಗಾಳಿ ಮತ್ತು ಆಲಿಕಲ್ಲುಗಳು ಆರ್ಭಟ ಹೆಚ್ಚಾಗಿತ್ತು. 6 ಎಕೆರೆಯಲ್ಲಿ ಬೆಳೆದಿದ್ದ ಮಾವು ತೋಟ ತೋಟ ನೆಲಕೆಚ್ಚಿದ್ದು 12 ಲಕ್ಷಾ ರೂಪಾಯಿ ನಷ್ಟವಾಗಿದೆ ಎಂದು ಕೊರವಿಹಾಳ್ ಗ್ರಾಮದ ರೈತ ರವೀಂದ್ರ ಅವರನ್ನು ಸಂಪರ್ಕಿಸಿದಾಗ ಹೇಳಿದರು.

ಸಿಡಿಲಿಗೆ ಎರಡು ಕುರಿ ಬಲಿ
ಆಲಿಕಲ್ಲು ಮಳೆಯಿಂದಾಗಿ ದೇವಸೂಗೂರು ಗ್ರಾಮದ ಜನತಾ ಕಾಲೊನಿಯಲ್ಲಿ ಎರಡು ಕುರಿಗಳು ಮೃತಪಟ್ಟಿವೆ. ಜಂಭಣ್ಣ ಪೂಜಾರಿ ಅವರ ಟಗರುಗಳು ಮೃತಪಟ್ಟಿದ್ದು ಅಂದಾಜು 40 ಸಾವಿರ ರೂಪಾಯಿ ನಷ್ಟ ಆಗಿದೆ. ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಸುರೇಶ್ ಮತ್ತು ಪಶು ವೈದ್ಯ ಡಾ.ಮಹಾದೇವಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications