ಮಸ್ಕಿ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ
ರಾಯಚೂರು, ಏಪ್ರಿಲ್ 16: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಏಪ್ರಿಲ್ 15ರಂದು ಮುಕ್ತಾಯವಾಗಿದೆ. ಇನ್ನು ಕೋವಿಡ್ ನಿಯಮಗಳ ಪ್ರಕಾರ ಮನೆ ಮನೆ ಪ್ರಚಾರ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.
ಮಸ್ಕಿ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.15ರ ಸಂಜೆ 7 ಗಂಟೆಯ ಬಳಿಕ ಕ್ಷೇತ್ರದವರಲ್ಲದವರು ಕ್ಷೇತ್ರ ಬಿಟ್ಟು ಹೋಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿ ಬಳಿಕ ಇದುವರೆಗೆ 60 ದೂರು ದಾಖಲಾಗಿವೆ. 46 ಕೋವಿಡ್ ಪ್ರಕರಣ, 14 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಾಗಿವೆ. ಇದರಲ್ಲಿ 7 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
ಇದುವರೆಗೆ 3.50 ಲಕ್ಷ ಮೌಲ್ಯದ ವಸ್ತು ಹಾಗೂ 1.33 ಲಕ್ಷ ಮೌಲ್ಯದ 355 ಲೀ. ಮದ್ಯ ಜಪ್ತಿ ಮಾಡಲಾಗಿದೆ. ಕೋವಿಡ್ ಸೋಂಕಿತರು ಮತ್ತು ಸಂಪರ್ಕಿತರು ಮತದಾನ ದಿನದ ಸಂಜೆ 6ರಿಂದ 7 ಗಂಟೆಯವರೆಗೆ ಮತದಾನ ಮಾಡಲು ಸಮಯ ನಿಗದಿ ಮಾಡಲಾಗಿದೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಸೋಂಕು ಬಾಧಿಸಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತ 18 ಜನರ ವರದಿ ಇನ್ನಷ್ಟೇ ಬರಬೇಕಾಗಿದೆ. ಪ್ರಾಥಮಿಕ ಸಂಪರ್ಕಿತರು ಸಂಜೆ 6 ರಿಂದ 7ಕ್ಕೆ ಮತದಾನ ಮಾಡಬೇಕು ಎಂದರು.
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಮಾತನಾಡಿ, ಕ್ಷೇತ್ರದಲ್ಲಿ ಒಟ್ಟು 62 ಸೂಕ್ಷ್ಮ, 07 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 739 ಪೊಲೀಸ್ ಕಾನ್ಸ್ಟೆಬಲ್, 71 ಎಎಸ್ಐ, 25 ಪಿಎಸ್ಐ, 07 ಸಿಪಿಐ, 03 ಡಿಎಸ್ಪಿ, 1 ಸಿಆರ್ಪಿಎಫ್ ಮತ್ತು ಒಂದು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಇದುವರೆಗೂ 7 ಐಪಿಸಿ ಪ್ರಕರಣ ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಹಣ ಹಂಚಿಕೆ ವೈರಲ್ ಆದ ಬಗ್ಗೆ ವಿಡಿಯೋದಲ್ಲಿ ಕಂಡು ಬಂದ ಎಲ್ಲ ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications