ರಾಯಚೂರಿನಲ್ಲಿ ಸತತ ಮಳೆಗೆ ಮಸ್ಕಿ ಜಲಾಶಯ ಭರ್ತಿ
ರಾಯಚೂರು, ಅಕ್ಟೋಬರ್ 21: ರಾಯಚೂರಿನಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಸ್ಕಿ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಸದ್ಯಕ್ಕೆ 500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಮಸ್ಕಿ ಜಲಾಶಯದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದ್ದು, ಹೆಚ್ಚುವರಿ ನೀರನ್ನು ಹಳ್ಳಕ್ಕೆ ಹರಿಸಲಾಗಿದೆ. ಇದರಿಂದ ಮಸ್ಕಿ ಹಳ್ಳವೂ ತುಂಬಿ ಹರಿಯುತ್ತಿದ್ದು, ಸುತ್ತಮುತ್ತಲ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿದೆ. ಅಕ್ಟೋಬರ್ 11ರಂದು ಮಸ್ಕಿ ನಾಲೆಯ ಜಲಾನಯನ ಪ್ರದೇಶಗಳಾದ ಗಜೇಂದ್ರಗಡ, ಕುಷ್ಟಗಿ ಭಾಗದಲ್ಲಿ ಭಾರೀ ಪ್ರಮಾಣ ಮಳೆಯಾಗಿದ್ದರಿಂದ ಮಸ್ಕಿ ಅಣೆಕಟ್ಟೆಯಿಂದ ನೀರನ್ನು ಹೊರ ಬಿಡಲಾಗಿತ್ತು. ಈ ಕಿರು ಜಲಾಶಯದ ನಾಲ್ಕು ಗೇಟ್ ಗಳ ಮೂಲಕ 1,600 ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದ್ದು, ಮಸ್ಕಿ ಹಳ್ಳದ ಕಡೆ ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಯುವಕರು ಸಿಲುಕಿಕೊಂಡಿದ್ದರು. ಅದರಲ್ಲಿ ಒಬ್ಬರನ್ನು ರಕ್ಷಣೆ ಮಾಡಿದ್ದು, ಮತ್ತೊಬ್ಬರು ಕೊಚ್ಚಿ ಹೋಗಿದ್ದರು. ಶೋಧ ಕಾರ್ಯ ನಡೆದಿದ್ದರೂ ಚನ್ನಬಸವ ಎಂಬುವರು ಪತ್ತೆಯಾಗಿಲ್ಲ.

ನಿನ್ನೆಯಿಂದ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ಮಸ್ಕಿ ಪಟ್ಟಣದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಜಿಲ್ಲಾಡಳಿತ ಮತ್ತೆ ಎಚ್ಚರಿಕೆ ನೀಡಿದೆ. ಮಸ್ಕಿ ಜಲಾಶಯ 0.5 ಟಿಎಂಸಿ ಸಾಮರ್ಥ್ಯ ಹೊಂದಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications