ಮಸ್ಕಿ: ವಟಗಲ್ ಸರ್ಕಾರಿ ಶಾಲೆಯ ಅವ್ಯವಸ್ಥೆ: ಶೌಚಾಲಯ ಇಲ್ಲದೆ ವಿದ್ಯಾರ್ಥಿಗಳ ಪರದಾಟ
ರಾಯಚೂರು, ನವೆಂಬರ್ 19: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಈ ಶಾಲೆ 1ನೇ ತರಗತಿಯಿಂದ 8ನೇ ತರಗತಿಯವರೆಗೆ 102 ಬಾಲಕರು ಮತ್ತು 114 ಬಾಲಕಿಯರ ದಾಖಲಾತಿ ಹೊಂದಿದೆ.
ಈ ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆ ಇದ್ದೂ, ಇಲ್ಲದಂತಾಗಿದ್ದು ಮಕ್ಕಳಿಗೆ ಬಯಲು ಶೌಚಾಲಯವೇ ಗತಿಯಾಗಿದೆ. ಗ್ರಾಮದ ಹಳೆ ಶಾಲಾ ಆವರಣದಲ್ಲಿನ 6 ಶೌಚಾಲಯಗಳ ಪೈಕಿ ಎರಡು ಶೌಚಾಲಯಗಳನ್ನು ಶಿಕ್ಷಕರು ಬಳಕೆ ಮಾಡುತ್ತಾರೆ. ಚುನಾವಣೆ ಸಂದರ್ಭ ತರಾತುರಿಯಲ್ಲಿ ನಿರ್ಮಿಸಿದ ಉಳಿದ ನಾಲ್ಕು ಶೌಚಾಲಯಗಳು ಹಾಳಾಗಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.

ಶಿಕ್ಷಕರ ಕೊಠಡಿಯ ಕಿಟಕಿಯಲ್ಲಿ ಶೌಚಾಲಯದ ಬಾಗಿಲು ಕಾಣುವುದರಿಂದ ಮಕ್ಕಳು ಶೌಚಾಲಯ ಬಳಸಲು ನಾಚಿಕೆ ಪಡುತ್ತಿದ್ದಾರೆ. 1ರಿಂದ 3ನೇ ತರಗತಿವರೆಗೆ ಇಲ್ಲಿ ತರಗತಿಗಳು ನಡೆಯುತ್ತಿದ್ದು ಮಕ್ಕಳು ಮೂತ್ರ ವಿಸರ್ಜನೆಗೆ ಬಯಲು ಪ್ರದೇಶ ಅವಲಂಬಿಸಿದ್ದಾರೆ. ಬಹಿರ್ದೆಸೆಗೆ ಮನೆಗೆ ಹೋಗಬೇಕಿದೆ.
ಊರ ಹೊರಗಿನ ಹೊಸ ಶಾಲಾ ಕಟ್ಟಡದಲ್ಲಿ 4ನೇ ತರಗತಿಯಿಂದ 8ನೇ ತರಗತಿವರೆಗೆ ತರಗತಿಗಳು ನಡೆಯುತ್ತಿದ್ದು, ಅಲ್ಲಿ ನೀರು ಪೂರೈಕೆ ಹಾಗೂ ಶೌಚಾಲಯ ವ್ಯವಸ್ಥೆ ಇಲ್ಲದೆ ಮಕ್ಕಳು ಬಯಲಿನಲ್ಲಿ ನಿಸರ್ಗದ ಕರೆಗೆ ಓಗೊಡುವಂತಾಗಿದೆ.
ವಟಗಲ್ ಗ್ರಾಮದಲ್ಲಿನ ಹಳೆ ಶಾಲೆ ಆವರಣದಲ್ಲಿನ ಏಳು ಕೊಠಡಿಗಳಲ್ಲಿ ಮೂರು ಕೊಠಡಿಗಳು ಬಹುತೇಕ ಶಿಥಿಲಗೊಂಡಿವೆ. ಎರಡು ಕೊಠಡಿಗಳಲ್ಲಿ ತಗರತಿಗಳು, ಒಂದು ಶಿಕ್ಷಕರ ಬಳಕೆಗೆ ಹಾಗೂ ಮತ್ತೊಂದರಲ್ಲಿ ಬಿಸಿಯೂಟ ತಯಾರಿಸಲಾಗುತ್ತಿದೆ. ಗ್ರಾಮದಲ್ಲಿನ ಹಳೆ ಶಾಲೆಯಲ್ಲಿಯೇ ಬಿಸಿಯೂಟ ತಯಾರಿಸುವುದರಿಂದ ಊರ ಹೊರಗಿನ ಹೊಸ ಶಾಲೆಯಿಂದ ಮಕ್ಕಳು ಮುಖ್ಯರಸ್ತೆ ದಾಟಿಕೊಂಡು ಮಧ್ಯಾಹ್ನ ಬಿಸಿಯೂಟಕ್ಕೆ ಅಲ್ಲಿಗೆ ಹೋಗುತ್ತಾರೆ.

ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಬಾಲಕಿಯರು ಮುಜುಗರ ಪಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಾಲಕ ಭೀಮಣ್ಣ ನಾಯಕ ವಟಗಲ್ ಒತ್ತಾಯಿಸಿದರು. ಶೌಚಾಲಯಗಳು ಸರಿಯಿಲ್ಲದ ಕಾರಣ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಎಸ್ಡಿಎಂಸಿ ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮುಖ್ಯ ಶಿಕ್ಷಕಿ ಪುಷ್ಪಾ ಪತ್ತಾರ್ ಹೇಳಿದರು
ಶೌಚಾಲಯ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒ ಗಮನಕ್ಕೆ ತರಲಾಗಿದೆ. ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ನೇತಾಜಿ ಸುಭಾಶ್ಚಂದ್ರ ಭೋಸ್ ಯುವಕ ಸಂಘದ ಅಧ್ಯಕ್ಷ ಶಿವಕುಮಾರ್ ಪಾಟೀಲ ಹೇಳಿದರು.
-
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications