ರಾಯಚೂರು: ನೆನೆಗುದಿಗೆ ಬಿದ್ದ ಗಣಿ ಕಾಮಗಾರಿ, ಭುಗಿಲೆದ್ದ ಆಕ್ರೋಶ
ರಾಯಚೂರು, ಡಿಸೆಂಬರ್, 29: ಹಟ್ಟಿಚಿನ್ನದಗಣಿ ಕಂಪನಿಯ ಮಲ್ಲಪ್ಪ ಶಾಪ್ಟ್ ಬಳಿಯಲ್ಲಿ ಸಜ್ಜುಗೊಳ್ಳುತ್ತಿರುವ 6 ಮೀಟರ್ ಸುತ್ತಳತೆಯ, 960 ಮೀಟರ್ ಆಳದ ನ್ಯೂ ಸರ್ಕ್ಯೂಲರ್ ಶಾಪ್ಟ್ ಕಾಮಗಾರಿಯ ಕೆಲಸ ಆಮೆಗತಿಯಲ್ಲಿ ಸಾಗುತ್ತಿದೆ.
ಭೂಮೀಯ ಕೆಳಮೈಯಲ್ಲಿ ಮೂರು ಶಾಪ್ಟ್ಗಳಿಗೆ ಸಂಪರ್ಕ ಕಲ್ಪಿಸಿ, ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಚೆನ್ನೈ ಮೂಲದ ಶ್ರೀರಾಮ ಇಪಿಸಿ ಕಂಪನಿಗೆ ಅಂದಾಜು 232 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಟೆಂಡರ್ ನೀಡಲಾಗಿದೆ. 2013ರ ಜನವರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಅಲ್ಲಿಂದ 36 ತಿಂಗಳೊಳಗೆ ಅಂದರೆ 2016ರ ಜನವರಿಗೆ ಕಾಮಗಾರಿ ಮುಗಿಯಬೇಕಾಗಿತ್ತು. ಅವಧಿ ಮುಗಿದು ಆರು ವರ್ಷ ಕಳೆಯುತ್ತಾ ಬಂದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ ಎಂದು ಕಾರ್ಮಿಕರು ಆರೋಪ ಮಾಡಿದ್ದಾರೆ.
ನೆನೆಗುದಿಗೆ ಬಿದ್ದ ಕಾಮಗಾರಿ, ಆಕ್ರೋಶ
960 ಮೀಟರ್ ಆಳದವರೆಗೆ ಶಾಫ್ಟ್ ಅನೇಕ ತಂತ್ರಜ್ಞಾನ ಅಳವಡಿಸುವ ಕೆಲಸಗಳು ನಡೆಯಬೇಕಿದೆ. ಈ ಎಲ್ಲಾ ಕಾಮಗಾರಿಗಳು ಟೆಂಡರ್ ಅವಧಿಯೊಳಗೆ ಮುಗಿಸಬೇಕಾಗಿತ್ತು. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಉತ್ಪಾದನೆ ಮಾಡಬೇಕಾಗಿದ್ದ ಶಾಷ್ಟ್ ಇನ್ನು ಕಾಮಗಾರಿ ಮುಗಿಯುವ ಹಂತದಲ್ಲಿ ಇದೆ.

ಗಣಿ ಕಂಪನಿಯ ಚಿನ್ನದ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ 6 ಮೀಟರ್ ಸುತ್ತಳತೆಯ ಬೃಹತ್ ಪ್ರಮಾಣದ ಶಾಫ್ಟ್ ನಿರ್ಮಾಣಕ್ಕೆ ಮುಂದಾಗಿದೆ. ಭೂ ಕೆಳಮೈಯಲ್ಲಿ ಒಂದೆ ಬಾರಿಗೆ 100 ಕಾರ್ಮಿಕರು ಹೋಗಿ ಬರಲು ಹಾಗೂ ಅಧಿಕ ಪ್ರಮಾಣ ಚಿನ್ನದ ಅದಿರನ್ನು ಹೊರತರಲು ಇದು ಸಹಾಯಕವಾಗಲಿದೆ. ಈ ಕಾರಣದಿಂದ ವಿವಿಧ ದೇಶಗಳ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಕೆ ಮಾಡಿ ನ್ಯೂ ಸರ್ಕ್ಯೂಲರ್ ಶಾಪ್ಟ್ ನಿರ್ಮಾಣಕ್ಕೆ ಗಣಿ ಆಡಳಿತ ಮುಂದಾಗಿದೆ. ಮತ್ತೊಂದೆಡೆ ಕಾಮಗಾರಿ ಮಾತ್ರ ನನೆಗುದಿಗೆ ಬಿದ್ದಿದೆ ಎಂದು ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಉತ್ಪಾದನೆಗೆ ಸಜ್ಜುಗೊಳಿಸಲು ಕ್ರಮ
ಗಣಿ ಆಡಳಿತ ಮಂಡಳಿ ಕಾಮಗಾರಿಯನ್ನು ತ್ವರಿತಗೊಳಿಸಿ, ನೂತನ ಶಾಷ್ಟ್ ಕಾಮಗಾರಿಯನ್ನು ಪೂರ್ಣಗೊಳಿಸಿ ಕಾರ್ಮಿಕರಿಗೆ ಅನುಕೂಲ ಮಾಡಿಕೋಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. 'ಗಣಿ ಕಂಪನಿಯಲ್ಲಿ ಚಿನ್ನ ಉತ್ಪಾದನೆ ಹೆಚ್ಚಿಸುವ ದೃಷ್ಟಿಯಿಂದ ಸರ್ಕ್ಯೂಲರ್ ಶಾಫ್ಟ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಉತ್ಪಾದನೆಗೆ ಸಜ್ಜುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಶೆಟ್ಟಣ್ಣನವರ ಹೇಳಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications